ಗೋಧ್ರಾ ಕರಸೇವಕರ ಹತ್ಯಾಕಾಂಡ, ಇಂದು ಗುಜರಾತ್ 'ಹೈ' ತೀರ್ಪು ಸಾಧ್ಯತೆ
2002ರ ಗೋಧ್ರಾ ರೈಲು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈ ಕೋರ್ಟ್ ಇಂದು (ಸೋಮವಾರ, ಅಕ್ಟೋಬರ್ 9) ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.
ಫೆಬ್ರವರಿ 2002ರಲ್ಲಿ ಸಬರಮತಿ ಎಕ್ಸ್ ಪ್ರೆಸ್ ನ ಎಸ್-6 ಬೋಗಿಗೆ ಗೋಧ್ರಾ ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿತ್ತು. ಅದರಲ್ಲಿದ್ದ ಐವತ್ತೊಂಬತ್ತು ಮಂದಿ (ಬಹುತೇಕರು ಕರಸೇವಕರು), ಅಯೋಧ್ಯೆಯಿಂದ ವಾಪಸಾಗುತ್ತಿದ್ದವರು ಸಜೀವ ದಹನವಾಗಿದ್ದರು. ಆ ನಂತರ ಇಡೀ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 2011ರಲ್ಲಿ ವಿಶೇಷ ಎಸ್ ಐಟಿ ಕೋರ್ಟ್ ನಿಂದ 31 ಮಂದಿಯನ್ನು ದೋಷಿಯೆಂದು ಘೋಷಿಸಲಾಯಿತು. 63 ಮಂದಿ ಖುಲಾಸೆಯಾಯಿತು. ದೋಷಿಗಳೆಂದು ತೀರ್ಮಾನವಾದವರ ಪೈಕಿ 11 ಮಂದಿಗೆ ಮರಣದಂಡನೆ, 20 ಮಂದಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಯಿತು.
ಖುಲಾಸೆಯಾದ 63 ಮಂದಿ ವಿರುದ್ಧ ಆ ನಂತರ ಹಲವು ಮೇಲ್ಮನವಿಗಳನ್ನು ಸರಕಾರದಿಂದ ಹೈ ಕೋರ್ಟ್ ಗೆ ಸಲ್ಲಿಸಲಾಯಿತು. ಪ್ರಮುಖ ಆರೋಪಿ ಮೌಲಾನಾ ಉಮರ್ಜಿ, ಗೋಧ್ರಾ ನಗರಸಭೆಯ ಆಗಿನ ಅಧ್ಯಕ್ಷನಾಗಿದ್ದ ಮೊಹಮ್ಮದ್ ಹುಸೇನ್ ಕಲೋಟ, ಮೊಹಮ್ಮದ್ ಅನ್ಸಾರಿ ಹಾಗೂ ನನುಮಿಯಾ ಚೌಧರಿ ಖುಲಾಸೆಯಾಗಿದ್ದರು.
ಗುಜರಾತ್ ಸರಕಾರದಿಂದ ಪ್ರಕರಣದ ತನಿಖೆಗಾಗಿ ನೇಮಿಸಿದ್ದ ನಾನಾವತಿ ಆಯೋಗವು, ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಆಕಸ್ಮಿಕವಲ್ಲ, ಅದು ಯಾರೋ ಬೆಂಕಿ ಹೊತ್ತಿಸಿದ್ದು ಎಂದು ವರದಿಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications