ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ ಕಣ್ಮರೆ
ಬಹುಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ (66) ಕಣ್ಮರೆಯಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಬಹುಕಾಲದಿಂದ ಡಯಾಲಿಸಿಸ್ ನಲ್ಲಿದ್ದರು.
ನವದೆಹಲಿ, ಮೇ 23 : ಬಹುಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ (66) ಕಣ್ಮರೆಯಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಬಹುಕಾಲದಿಂದ ಡಯಾಲಿಸಿಸ್ ನಲ್ಲಿದ್ದರು.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಚಂದ್ರಸ್ವಾಮಿ ಅವರ ಹೆಸರು ಕೇಳಿ ಬಂದಿತ್ತು.ಹಣ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ರಾಜಸ್ಥಾನಿ ಮೂಲದ ವ್ಯಕ್ತಿಯೊಬ್ಬನ ಮಗನಾದ ನೇಮಿ ಚಂದ್ ತಾಂತ್ರಿಕನಾಗಿ, ವಿವಾದಿತ ವ್ಯಕ್ತಿಯಾಗಿ, ಸ್ವಯಂಘೋಷಿತ ದೇವಮಾನವನಾಗಿ, ರಾಜಕೀಯ ಮುಖಂಡರ ಗುರುವಾಗಿ ಬೆಳೆದವರು.

ರಾಜೀವ್ ಗಾಂಧಿ ಹತ್ಯೆ ಸಂಚಿನಲ್ಲೂ ಚಂದ್ರಸ್ವಾಮಿ ಹೆಸರು ಬಲವಾಗಿ ಕೇಳಿ ಬಂದಿತ್ತು. ತನ್ನ ಅಂತಾರಾಷ್ಟ್ರೀಯ ಸಂಪರ್ಕ, ಶಸ್ತ್ರಾಸ್ತ್ರ, ವಾಣಿಜ್ಯ ಡೀಲ್ ಮೂಲಕ ಎಲ್ ಟಿಟಿಐ ಸಂಘಟನೆಗೆ ನೆರವಾಗುತ್ತಿದ್ದರು.
1997ರಲ್ಲಿ ರಾಜೀವ್ ಗಾಂಧಿ ಹತ್ಯೆ ಕೇಸ್ ನಲ್ಲಿ ಸ್ವಾಮಿ ಭಾಗಿಯಾಗಿರುವ ಬಗ್ಗೆ ಐಐಸಿಸಿ ವಕೀಲ ಆರ್ ಎನ್ ಮಿತ್ತಲ್ ಆರೋಪಿಸಿದ್ದರು. ತನಿಖೆ ನಡೆಸುತ್ತಿದ್ದ ಜೈನ್ ಆಯೋಗದ ಮುಂದೆ ಕೂಡಾ ಇದೇ ವಾದ ಮಂಡಿಸಲಾಗಿತ್ತು.
ಚಂದ್ರಸ್ವಾಮಿ ಬಂಧನವಾದರೂ ನಂತರ ಬಿಡುಗಡೆಗೊಂಡಿದ್ದರು. ಇದಲ್ಲದೆ ಹಲವಾರು ವಿದೇಶಿ ವಿನಿಮಯ ಕಾಯ್ದೆ (ಎಫ್ ಇಎಂ ಕಾಯ್ದೆ) ಉಲ್ಲಂಘನೆ ಆರೋಪವನ್ನು ಸ್ವಾಮಿ ಮೇಲೆ ಜಾರಿ ನಿರ್ದೇಶಾನಲಯ ಹೊರೆಸಿತ್ತು. ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ಆಧಾತ್ಮ ಸಲಹೆಗಾರ ಎನಿಸಿಕೊಂಡಿದ್ದ ಸ್ವಾಮಿ, ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದವರು.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications