ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ ಕಣ್ಮರೆ
ಬಹುಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ (66) ಕಣ್ಮರೆಯಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಬಹುಕಾಲದಿಂದ ಡಯಾಲಿಸಿಸ್ ನಲ್ಲಿದ್ದರು.
ನವದೆಹಲಿ, ಮೇ 23 : ಬಹುಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ (66) ಕಣ್ಮರೆಯಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಬಹುಕಾಲದಿಂದ ಡಯಾಲಿಸಿಸ್ ನಲ್ಲಿದ್ದರು.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಚಂದ್ರಸ್ವಾಮಿ ಅವರ ಹೆಸರು ಕೇಳಿ ಬಂದಿತ್ತು.ಹಣ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ರಾಜಸ್ಥಾನಿ ಮೂಲದ ವ್ಯಕ್ತಿಯೊಬ್ಬನ ಮಗನಾದ ನೇಮಿ ಚಂದ್ ತಾಂತ್ರಿಕನಾಗಿ, ವಿವಾದಿತ ವ್ಯಕ್ತಿಯಾಗಿ, ಸ್ವಯಂಘೋಷಿತ ದೇವಮಾನವನಾಗಿ, ರಾಜಕೀಯ ಮುಖಂಡರ ಗುರುವಾಗಿ ಬೆಳೆದವರು.

ರಾಜೀವ್ ಗಾಂಧಿ ಹತ್ಯೆ ಸಂಚಿನಲ್ಲೂ ಚಂದ್ರಸ್ವಾಮಿ ಹೆಸರು ಬಲವಾಗಿ ಕೇಳಿ ಬಂದಿತ್ತು. ತನ್ನ ಅಂತಾರಾಷ್ಟ್ರೀಯ ಸಂಪರ್ಕ, ಶಸ್ತ್ರಾಸ್ತ್ರ, ವಾಣಿಜ್ಯ ಡೀಲ್ ಮೂಲಕ ಎಲ್ ಟಿಟಿಐ ಸಂಘಟನೆಗೆ ನೆರವಾಗುತ್ತಿದ್ದರು.
1997ರಲ್ಲಿ ರಾಜೀವ್ ಗಾಂಧಿ ಹತ್ಯೆ ಕೇಸ್ ನಲ್ಲಿ ಸ್ವಾಮಿ ಭಾಗಿಯಾಗಿರುವ ಬಗ್ಗೆ ಐಐಸಿಸಿ ವಕೀಲ ಆರ್ ಎನ್ ಮಿತ್ತಲ್ ಆರೋಪಿಸಿದ್ದರು. ತನಿಖೆ ನಡೆಸುತ್ತಿದ್ದ ಜೈನ್ ಆಯೋಗದ ಮುಂದೆ ಕೂಡಾ ಇದೇ ವಾದ ಮಂಡಿಸಲಾಗಿತ್ತು.
ಚಂದ್ರಸ್ವಾಮಿ ಬಂಧನವಾದರೂ ನಂತರ ಬಿಡುಗಡೆಗೊಂಡಿದ್ದರು. ಇದಲ್ಲದೆ ಹಲವಾರು ವಿದೇಶಿ ವಿನಿಮಯ ಕಾಯ್ದೆ (ಎಫ್ ಇಎಂ ಕಾಯ್ದೆ) ಉಲ್ಲಂಘನೆ ಆರೋಪವನ್ನು ಸ್ವಾಮಿ ಮೇಲೆ ಜಾರಿ ನಿರ್ದೇಶಾನಲಯ ಹೊರೆಸಿತ್ತು. ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ಆಧಾತ್ಮ ಸಲಹೆಗಾರ ಎನಿಸಿಕೊಂಡಿದ್ದ ಸ್ವಾಮಿ, ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದವರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications