Jalebi Baba: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಜಿಲೇಬಿ ಬಾಬಾನಿಗೆ 14 ವರ್ಷ ಜೈಲು
ಚಂಡಿಗಢ, ಜ.10: ಮಠಗಳು, ದೇವಮಾನವರು, ಸ್ವಾಮೀಜಿಗಳ ಮೇಲೆ ಪದೇ ಪದೇ ಅತ್ಯಾಚಾರ ಆರೋಪಗಳು ಕೇಳಿ ಬರುತ್ತಲೇ ಇವೆ. ಜನರು ನಂಬಿಕೆಯಿಂದ ಹೋಗುವ ಮಠಗಳು, ದೇವಸ್ಥಾನಗಳಲ್ಲಿಯೇ ಇಂತಹ ಘಟನೆಗಳು ವರದಿಯಾಗುತ್ತಿರುವುದು ಆತಂಕಕಾರಿ ಘಟನೆಯಾಗಿವೆ. ಇಂತಹದ್ದೇ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಹರಿಯಾಣದ ಅಮರವೀರ್ ಅಲಿಯಾಸ್ ಜಿಲೇಬಿ ಬಾಬಾ 120 ವಿವಿಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಮತ್ತು ಅದರ ವಿಡಿಯೋಗಳನ್ನು ಮಾಡಿದ ಆರೋಪದಲ್ಲಿ ನ್ಯಾಯಾಲಯವು ತಪ್ಪಿತಸ್ಥನೆಂದು ತೀರ್ಪು ನೀಡಿದೆ.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಲ್ವಂತ್ ಸಿಂಗ್ ಮಂಗಳವಾರ ಪೋಕ್ಸೋ ಕಾಯ್ದೆ ಸೇರಿದಂತೆ ಹಲವು ಆರೋಪಗಳ ಅಡಿಯಲ್ಲಿ ಅತ್ಯಾಚಾರ ಪ್ರಕರಣಗಳಲ್ಲಿ ಒಟ್ಟು 14 ವರ್ಷ ಶಿಕ್ಷೆ ವಿಧಿಸಲಾಗಿದೆ.

ಹರಿಯಾಣದ ತೋಹಾನಾದಲ್ಲಿರುವ ಬಾಬಾ ಬಾಲಕನಾಥ ದೇವಸ್ಥಾನದ ಅರ್ಚಕ ಜಿಲೇಬಿ ಬಾಬಾ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ಜಿಲೇಬಿ ಬಾಬಾ ತಾನು ದೇವಮಾನವ ಎಂದು ಕರೆದುಕೊಳ್ಳುವ ಮೊದಲು, ಅಮರಪುರಿ ತೋಹಾನಾ ರೈಲ್ವೆ ರಸ್ತೆಯಲ್ಲಿ ಜಿಲೇಬಿಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಅವರನ್ನು "ಜಿಲೇಬಿ ಬಾಬಾ" ಎಂದು ಕರೆಯಲಾಗುತ್ತಿದೆ.
ಮಹಿಳೆಯರ ಮೇಲೆ ಅತ್ಯಾಚಾರ ಮಾಡುವ ಮುನ್ನ ಸಂತ್ರಸ್ತರಿಗೆ ಮಾದಕ ವಸ್ತುಗಳನ್ನು ನೀಡುತ್ತಿದ್ದರು. ಬಳಿಕ ಅತ್ಯಾಚಾರ ಎಸಗಿ ಅವರ ವಿಡಿಯೋಗಳನ್ನು ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ದೂರಿನ ಬೆನ್ನಲ್ಲೇ ಪೊಲೀಸರು ಆರೋಪಿ ಜಿಲೇಬಿ ಬಾಬಾ ಕೋಣೆಯಲ್ಲಿ 120 ಅಶ್ಲೀಲ ವಿಡಿಯೋಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಹಲವು ಮಾದಕ ದ್ರವ್ಯದ ಮಾತ್ರೆಗಳು ಪತ್ತೆಯಾಗಿವೆ. ಈ ವಿಡಿಯೋಗಳಲಲ್ಲಿ ಕೆಲವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಅತ್ಯಾಚಾರ, ಐಟಿ ಕಾಯ್ದೆ ಉಲ್ಲಂಘನೆ ಮತ್ತು ಬ್ಲ್ಯಾಕ್ಮೇಲ್ ಆರೋಪಗಳಿವೆ.
ಇಪ್ಪತ್ತು ವರ್ಷಗಳ ಹಿಂದೆ, ಅಪರಾಧಿ ಜಿಲೇಬಿ ಬಾಬಾ ಪಂಜಾಬ್ನ ಮಾನ್ಸಾದಿಂದ ಹರಿಯಾಣದ ತೊಹಾನಾಗೆ ಬಂದು, ತೊಹಾನಾದ ರೈಲ್ವೆ ರಸ್ತೆಯಲ್ಲಿ ಜಿಲೇಬಿ ವ್ಯಾಪಾರ ಆರಂಭಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications