ಗಾಂಧೀಜಿ ಬದಲು ಗೋಡ್ಸೆ ನೆಹರು ಹತ್ಯೆ ಮಾಡಬೇಕಿತ್ತು!
ಬೆಂಗಳೂರು, ಅ.25: 'ನಾಥೂರಾಮ್ ಗೋಡ್ಸೆ ಗುರಿ ಬದಲಾಗಬೇಕಿತ್ತು, ಆತ ಮಹಾತ್ಮ ಗಾಂಧೀಜಿ ಅವರ ಬದಲಾಗಿ ಜವಾಹರಲಾಲ್ ನೆಹರು ಅವರನ್ನು ಹತ್ಯೆ ಮಾಡಿದ್ದರೆ ದೇಶ ಯಾವಾಗಲೋ ಉದ್ಧಾರವಾಗುತ್ತಿತ್ತು' ಹೀಗೊಂದು ಬರಹ ಆರ್ ಎಎಸ್ ಎಸ್ ಮುಖವಾಣಿ ಕೇರಳದ ಕೇಸರಿಯಲ್ಲಿ ಪ್ರಕಟವಾಗಿದ್ದು ವಿವಾದಕ್ಕೆ ಕಾರಣವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಿ.ಗೋಪಾಲಕೃಷ್ಣನ್ ಎಂಬ ಲೇಖಕ ತಮ್ಮ ಬರಹದಲ್ಲಿ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೆಹರು ಸ್ವಾರ್ಥವೇ ಭಾರತದ ಇಬ್ಭಾಗಕ್ಕೆ ಕಾರಣವಾಯಿತು. ಇದು ದೇಶದ ಅಧಃಪತನಕ್ಕೆ ಕಾರಣವಾಯಿತು ಎಂದು ಬರೆದಿದ್ದಾರೆ.[ಮಹಾತ್ಮ ಮತ್ತು ಮನುಬೆನ್ : ಬೆಚ್ಚಿಬೀಳಿಸುವ ನಗ್ನ ಸತ್ಯಗಳು]

ಗಾಂಧೀಜಿ ಸಿದ್ಧಾಂತಗಳನ್ನು ಸಾಯಿಸಿದವರೇ ನೆಹರು. ಉದ್ದೇಶಪೂರ್ವಕವಾಗಿ ಬ್ರಿಟಿಷ್ ಸರ್ಕಾರದೊಂದಿಗೆ ಗಾಂಧಿ ಮಾತನಾಡುವ ಅನೇಕ ಅವಕಾಶಗಳನ್ನು ತಪ್ಪಿಸಿದರು. ನೆಹರುಗೆ ಹೋಲಿಸಿದರೆ ಗೋಡ್ಸೆಯೇ ಎಷ್ಟೋ ಪರವಾಗಿಲ್ಲ. ಇತಿಹಾಸದ ವಿದ್ಯಾರ್ಥಿಗಳು ಕಲಿಯಬೇಕಾದದ್ದು ಬಹಳಷ್ಟಿದೆ. ಇಲ್ಲಿ ಗೋಡ್ಸೆ ಗಾಂಧೀಜಿ ಹತ್ಯೆ ಮಾಡಿದ ಎನ್ನುವುದಕ್ಕಿಂತ ಮುಖ್ಯವಾಗಿ ಗೋಡ್ಸೆ ಗುರಿ ಬದಲಾಗಬೇಕಿತ್ತು ಎಂಬುದೇ ಮುಖ್ಯ. ಇದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.[ಉಕ್ಕಿನ ಮಹಿಳೆ vs ಉಕ್ಕಿನ ಮನುಷ್ಯ ಏನಿದರ ಮರ್ಮ?]
ಅಖಂಡ ಭಾರತವನ್ನು ಒಡೆಯಲು ನೆಹರು ಕಾರಣ. ನೆಹರುಗೆ ಅಂತಾರಾಷ್ಟ್ರೀಯ ನಾಯಕನಾಗಿ ಬೆಳೆಯಬೇಕೆಂಬ ಹಪಹಪಿ ಇತ್ತು. ತನಗಿಂತ ಜನಪ್ರಿಯರಾಗಿದ್ದ ಗಾಂಧೀಜಿ ಏಳಿಗೆಯನ್ನು ನೆಹರು ಸಹಿಸಲಿಲ್ಲ. ಅನೇಕ ಬಾರಿ ಗಾಂಧೀಜಿ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಲು ಪ್ರತಯತ್ನಿಸಿದ್ದರು ಎಂದು ಬಿ.ಗೋಪಾಲಕೃಷ್ಣನ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಖಂಡನೆ
ಈ ಬಗ್ಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದೊಂದು ವಿವಾದಾತ್ಮಕ ಮತ್ತು ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಲೇಖನ ಎಂದು ಹೇಳಿದೆ. ಕಾಂಗ್ರೆಸ್ ಮುಖಂಡ ಅಭೀಷೇಕ್ ಸಿಂಘ್ವಿ ಮಾತನಾಡಿ, ಇದು ಆರ್ ಎಸ್ ಎಸ್ ನ ಕೆಟ್ಟ ಮನೋಭಾವ ತೋರಿಸುತ್ತದೆ. ಜನರು ಬಿಜೆಪಿ ಮತ್ತು ಕೇಸರಿ ಪಡೆಗಳ ಸಣ್ಣತನವನ್ನು ಅರ್ಥ ಮಾಡಿಕೊಳ್ಳಬೇಕು. ದುರದೃಷ್ಟವೆಂದರೆ ಇಂಥ ಜನರ ಕೈಗೆ ಜನರು ಅಧಿಕಾರ ಸಿಕ್ಕಿದೆ ಎಂದಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications