Gold Snake: ಅಪರೂಪ ಬಣ್ಣದ ಹಾವಿನ ವಿಡಿಯೋ ವೈರಲ್
ಬೆಂಗಳೂರು, ಏಪ್ರಿಲ್, 07: ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಿದ್ದು, ಬಾಯಾರಿಕೆ ನೀಗಿಸಿಕೊಳ್ಳಲು ಕಾಡುಪ್ರಾಣಿಗಳು ನಾಡಿಗೆ ಬರುತ್ತಿರುವುದನ್ನು ನಾವು ಕಂಡಿದ್ದೇವೆ. ಇದೀಗ ಹಾವೊಂದು ಸೆಖೆ ತಾಳಲಾದೇ ರಸ್ತೆಗಿಳಿದು ನಿಧಾನವಾಗಿ ಸಾಗುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ಹಾವು ಯಾವ ಕಲರ್ನಿಂದ ಹಾಗೂ ಇದರ ಉದ್ದ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಟ ಮಟ ಮಧ್ಯಾಹ್ನವೇ ಬಂಗಾರ ಬಣ್ಣದ ಸುಮಾರು 6 ಅಡಿ ಹಾವೊಂದು ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇನ್ನು ಈ ಹಾವು ಯಾವ ಜಾತಿಗೆ ಸೇರಿದೆ ಎನ್ನುವ ಮಾಹಿತಿ ಇಲ್ಲ.

ಥೇಟ್ ಬಂಗಾರವನ್ನು ಹೋಲುವ ಈ ಹಾವನ್ನು ನೋಡಲು ಜನಸಾಗರವೇ ನೆರೆದಿದ್ದು, ಈ ವೇಳೆ ಮಧ್ಯದ ರಸ್ತೆಯಲ್ಲಿ ನಿದ್ರಿಸುತ್ತಿದ್ದ ಆ ಹಾವು ಜನರನ್ನು ಕಂಡ ತಕ್ಷಣ ರಸ್ತೆಯನ್ನು ಮೆಲ್ಲಗೆ ದಾಟಲು ಪ್ರಾರಂಭಿಸಿದೆ. ಬಳಿಕ ಈ ಹಾವಿನ ದೃಶ್ಯವನ್ನು ಅಲ್ಲಿ ನೆರೆದಿದ್ದ ಜನರು ಸೆರೆಹಿಡಿದ್ದಾರೆ. ಆದರೆ ಈ ಹಾವು ನಿಜವೋ ಅಥವಾ ಸುಳ್ಳೋ ಎಂಬ ಮಾಹಿತಿ ಇನ್ನು ಸ್ಪಷ್ಟವಾಗಿಲ್ಲ.
ಇದೀಗ ಮಳೆಯಿಲ್ಲ ಎನ್ನುವ ಸಂಕಟ ಒಂದು ಕಡೆಯಾದರೆ. ಮತ್ತೊಂದೆಡೆ ತಾಪಮಾನ ಹೆಚ್ಚುತ್ತಿರುವುದರಿಂದ ಜನರು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯ ಕರುಣೆ ತೋರಿದ್ದು, ಹವಾಮಾನ ಇಲಾಖೆಯ ಪ್ರಕಾರ ಈ ತಿಂಗಳ ಅಂತ್ಯದಲ್ಲಾದರೂ ರಾಜ್ಯದೆಲ್ಲೆಡೆ ಮಳೆರಾಯ ಕರುಣೆ ತೋರುತ್ತಾನಾ ಎಂದು ಕಾದು ನೋಡಬೇಕಿದೆ.
ಇದೀಗ ಜನರು ಮಳೆಯಿಲ್ಲದೆ ರಣ ಭೀಕರ ಬಿಸಿಲಿನಿಂದ ಬೆಂಡಾಗಿದ್ದಾರೆ. ಇಂತಹದ್ದರ ನಡುವೆಯೇ ಹಾವೊಂದು ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ರಸ್ತೆಗಿಳಿದಿದೆ. ಸಾಮಾನ್ಯವಾಗಿ ಬಿಸಿಲಿಗೆ ಹಾವುಗಳು ಬೇಲಿಯಿಂದ ಹೊರಗಡೆ ಬರುತ್ತವೆ ಎನ್ನುವ ಮಾತಿದೆ. ಅದರಂತೆಯೇ ಈ ಹಾವು ಕೂಡ ರಸ್ತೆಗಿಳಿದಿದೆ ಅಂತಲೂ ಹೇಳಬಹುದಾಗಿದೆ. ವಿಶೇಷ ಎಂದರೆ ಎಂದರೆ ಈ ಹಾವು ಸಂಪೂರ್ಣವಾಗಿ ಬಂಗಾರ ಬಣ್ಣದ ಮೈಕಟ್ಟನ್ನು ಹೊಂದಿರುವುದು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications