ವಾಹನ ಸವಾರರಿಗೆ ಗುಡ್ ನ್ಯೂಸ್: ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ!
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಒಂದು ವರ್ಷದಿಂದ ಬದಲಾಗದೆ ಇರುವುದಕ್ಕೆ ವಾಹನ ಸವಾರರು ಬೇಸರವಾಗಿರುವ ನಡುವೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೀಘ್ರದಲ್ಲೇ ಕಡಿಮೆಯಾಗುವ ನಿರೀಕ್ಷೆಯಿದೆ.
ಹೌದು... ಇಟಿ ನೌ ವರದಿಯ ಪ್ರಕಾರ, 2024ರ ಲೋಕಸಭಾ ಚುನಾವಣೆಗೂ ಮೊದಲು ಜಾಗತಿಕ ಕಚ್ಚಾ ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರ ಚರ್ಚಿಸಲು ಪ್ರಾರಂಭಿಸಿದೆ. 2022ರಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 17 ರೂ. ಮತ್ತು ಡೀಸೆಲ್ಗೆ 35 ರೂ.ನಷ್ಟು ಗರಿಷ್ಠ ನಷ್ಟಕ್ಕೆ ವ್ಯತಿರಿಕ್ತವಾಗಿ, OMC ಗಳು ಈಗ ಪ್ರತಿ ಲೀಟರ್ಗೆ ಪೆಟ್ರೋಲ್ಗೆ ₹ 8-10 ಮತ್ತು ಡೀಸೆಲ್ನಲ್ಲಿ ₹ 3-4 ಲಾಭ ಗಳಿಸುತ್ತಿವೆ. ವರದಿಯ ಪ್ರಕಾರ, ಸಚಿವಾಲಯವು ಈಗಾಗಲೇ OMC ಗಳೊಂದಿಗೆ ಕಚ್ಚಾ ಮತ್ತು ಚಿಲ್ಲರೆ ಬೆಲೆಯ ಸನ್ನಿವೇಶಗಳನ್ನು ಚರ್ಚಿಸಿದೆ.

ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಈಗ ಲಾಭ ಗಳಿಸುತ್ತಿರುವುದರಿಂದ, ಜನರಿಗೆ ಸ್ವಲ್ಪ ಪರಿಹಾರವನ್ನು ನೀಡಲು ಸರ್ಕಾರವು ಈ ವಿಷಯದ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಿದೆ. ಪ್ರಸ್ತುತ ಕಚ್ಚಾ ತೈಲ ಬೆಲೆಯ ಸನ್ನಿವೇಶದ ಬಗ್ಗೆ ಹಣಕಾಸು ಸಚಿವಾಲಯ ಚಿಂತನೆ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚುನಾವಣೆಗೂ ಮುನ್ನ ಪೆಟ್ರೋಲ್, ಡೀಸೆಲ್ ಅಗ್ಗವಾಗುವ ಸಾಧ್ಯತೆ ಇದೆ.
ಇಂಧನ ಅಗ್ಗ
ಕಳೆದ ಮೂರು ತ್ರೈಮಾಸಿಕಗಳಲ್ಲಿ ಬಲವಾದ ಲಾಭದ ಕಾರಣ OMC ಗಳ ಒಟ್ಟಾರೆ ನಷ್ಟಗಳು ಕಡಿಮೆಯಾಗಿದೆ. ಕಳೆದ ತ್ರೈಮಾಸಿಕದಲ್ಲಿ ಮೂರು OMC ಗಳ ಒಟ್ಟು ಲಾಭ (IOC, HPCL ಮತ್ತು BPCL) ₹ 28,000 ಕೋಟಿಗಳಷ್ಟಿತ್ತು ಎಂದು ವರದಿ ತಿಳಿಸುತ್ತದೆ. OMC ಗಳ ಚೇತರಿಕೆಗೊಂಡಿರುವುದರಿಂದ ಗ್ರಾಹಕರು ಸಹ ಅದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಯೋಚಿಸುತ್ತಿದೆ.

ರಾಯಿಟರ್ಸ್ ಸಮೀಕ್ಷೆಯ ಪ್ರಕಾರ, ನೈಜೀರಿಯಾ ಮತ್ತು ಇರಾಕ್ನಿಂದ ಕಡಿಮೆ ಸಾಗಣೆಗಳು ಮತ್ತು ಸೌದಿ ಅರೇಬಿಯಾ ಮತ್ತು OPEC + ಮೈತ್ರಿಯ ಇತರ ಸದಸ್ಯರಿಂದ ಪರಿಣಾಮ ತೈಲ ಮಾರಾಟಗಾರರಿಗೆ ನವೆಂಬರ್ನಲ್ಲಿ ನಷ್ಟವಾಗತೊಡಗಿತು. ಆದರೀಗ ಅದು ಚೇತರಿಕೆಯನ್ನು ಕಂಡಿದೆ. ಹೀಗಾಗಿ ಸರ್ಕಾರ ಬೆಲೆಯಲ್ಲಿ ಇಳಿಕೆ ಮಾಡಲು ಯೋಚಿಸುತ್ತಿದೆ. ಇದರಿಂದಾಗಿ ತೈಲ ಬೆಲೆಯಲ್ಲಿನ ಇಳಿಕೆಯು ಭಾರತೀಯ ಷೇರು ಮಾರುಕಟ್ಟೆಗೆ, ವಿಶೇಷವಾಗಿ ಕಚ್ಚಾ ತೈಲವನ್ನು ಕಚ್ಚಾ ವಸ್ತುವಾಗಿ ಬಳಸುವ ವಲಯಗಳಿಗೆ ಉತ್ತೇಜನ ನೀಡಲಿದೆ.
ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು:-
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 89.62 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 106.31 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 94.27 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 102.63 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 94.24 ರೂ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.03 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.76 ರೂ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications