ಮಹಿಳಾ ಉದ್ಯೋಗಿಗಳಿಗೆ ಡಬಲ್ ಸಂಬಳ, ರಾತ್ರಿ 7 ಗಂಟೆ ಬಳಿಕ ಕೆಲಸ ಮಾಡಲು ಗ್ರೀನ್ಸಿಗ್ನಲ್
ಸಾಮಾನ್ಯವಾಗಿ ಐಟಿ ಕಂಪನಿಗಳಲ್ಲಿ ಕೆಲಸ ಮಾಡುವ ಮಹಿಳೆಯರು ಹೆಚ್ಚಾಗಿ ರಾತ್ರಿ ಪಾಳಿಯ ಕೆಲಸ ಮಾಡುತ್ತಾರೆ. ಉಳಿದಂತೆ ಸಾಮಾನ್ಯ ಕಂಪನಿಗಳು, ಫ್ಯಾಕ್ಟರಿಗಳು, ಗಾರ್ಮೆಂಟ್ ಸೇರಿದಂತೆ ಇನ್ನಿತರೆ ಕೆಲಸಗಳಲ್ಲಿ ಮಹಿಳೆಯರಿಗೆ ರಾತ್ರಿ ವೇಳೆ ಕೆಲಸ ಮಾಡಲು ಅವಕಾಶ ನೀಡುವುದಿಲ್ಲ. ಮಹಿಳೆಯರು ಭದ್ರತಾ ದೃಷ್ಟಿಯಿಂದ ಬಹುತೇಕ ಕಡೆ ನೈಟ್ ಶಿಫ್ಟ್ ಕೊಡುವುದಿಲ್ಲ. ಆದರೆ ಈಗ ಮಹಿಳೆಯರೂ ರಾತ್ರಿ 7ರಿಂದ ಬೆಳಿಗ್ಗೆ 6ರವರೆಗೆ ಕೆಲಸ ಮಾಡಲು ಸರ್ಕಾರವೇ ಅವಕಾಶ ಕಲ್ಪಿಸಿದೆ. ಇದಕ್ಕೆ ಮಹಿಳೆಯರಿಗೆ ಡಬಲ್ ಸಂಬಳವೂ ಸಿಗಲಿದೆ. ಈ ಸಂಬಂಧ ಸರ್ಕಾರ ಆದೇಶ ಕೂಡ ಹೊರಡಿಸಿದೆ.
ಹೌದು, ಸರ್ಕಾರವೇ ಇಂತದ್ದೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸರ್ಕಾರದ ಹೊಸ ಆದೇಶದ ಪ್ರಕಾರ, ಮಹಿಳೆಯರು ತಮ್ಮ ಒಪ್ಪಿಗೆ ಮೇರೆಗೆ ರಾತ್ರಿ 7ರಿಂದ ಬೆಳಿಗ್ಗೆ 6ರವರೆಗೆ ಉದ್ಯೋಗ ಮಾಡಬಹುದು. ಉದ್ಯೋಗದಾತರು ಮಹಿಳೆಯರ ಭದ್ರತೆ, ನ್ಯಾಯಯುತ ವೇತನ ಮತ್ತು ಇತರ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.

OT ಅವಧಿಯೂ ಹೆಚ್ಚಳ
ಗೆಜೆಟ್ ಆದೇಶದ ಪ್ರಕಾರ, ಮಹಿಳಾ ಉದ್ಯೋಗಿಗಳು ಡಬಲ್ ವೇತನ, ಸಿಸಿಟಿವಿ ಕಣ್ಗಾವಲು, ಸಾರಿಗೆ ಸೌಲಭ್ಯಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಪಡೆಯಲಿದ್ದಾರೆ. ಅವರಿಗೆ ವಾರದಲ್ಲಿ ಆರು ದಿನಗಳವರೆಗೆ ಕೆಲಸ ಮಾಡಲು ಅವಕಾಶವಿರುತ್ತದೆ. ಇದಲ್ಲದೆ ಓವರ್ಟೈಮ್ ಮಿತಿಯನ್ನು ಪ್ರತಿ ತ್ರೈಮಾಸಿಕಕ್ಕೆ 75 ಗಂಟೆಗಳಿಂದ 144 ಗಂಟೆಗಳವರೆಗೆ ಹೆಚ್ಚಿಸಲಾಗಿದೆ. ಡಬಲ್ ವೇತನ ದರದಲ್ಲಿ ಅವರಿಗೆ ಪಾವತಿ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ.
ಉತ್ತರ ಪ್ರದೇಶದ ಯೋಗಿ ಸರ್ಕಾರ ಮಹಿಳೆಯರ ಪರವಾಗಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಆದೇಶವು 29 ವರ್ಗದ ಅಪಾಯಕಾರಿ ಕೈಗಾರಿಕೆಗಳಿಗೂ ಅನ್ವಯಿಸುತ್ತದೆ. ಅಲ್ಲಿ ಮಹಿಳೆಯರಿಗೆ ಈಗ ರಾತ್ರಿ ವೇಳೆ ಕೆಲಸ ಮಾಡಲು ಅನುಮತಿ ಇದೆ. ಯೋಗಿ ಸರ್ಕಾರದ ಈ ಕ್ರಮವು ಕೆಲಸದ ಸ್ಥಳದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.
ಯೋಗಿ ಸರ್ಕಾರದ ಬಗ್ಗೆ ಟೀಕೆ
ಕೆಲವರು ಇದನ್ನು ಸ್ವಾಗತಿಸಿದ್ದರೆ, ಸೋಷಿಯಲ್ ಮೀಡಿಯಾಗಳಲ್ಲಿ ಈ ಆದೇಶಕ್ಕೆ ವಿರೋಧವೂ ಕೇಳಿಬರುತ್ತಿದೆ. ಸಂಜೆ 7 ಗಂಟೆಯ ನಂತರ ಕೆಲಸ ಮಾಡುತ್ತಿದ್ದರೆ ಮಹಿಳೆಯನ್ನು ದುಪ್ಪಟ್ಟು ಹಣಕ್ಕಾಗಿ ಕೆಲಸ ಮಾಡಲು ಕೇಳುವುದು ಇದು ನಿಜಕ್ಕೂ ಮಹಿಳಾ ಸಬಲೀಕರಣವೇ? ಎಂದು ಟೀಕಿಸುತ್ತಿದ್ದಾರೆ. ಕಡಿಮೆ ಬೆಲೆಗೆ ಪುರುಷನಿಂದ ಆ ಕೆಲಸ ಮಾಡಲು ಸಾಧ್ಯವಾದರೆ, ಕಂಪನಿಯು ದುಪ್ಪಟ್ಟು ವೇತನ ನೀಡಲು ಏಕೆ ಬಯಸುತ್ತದೆ? ಈ ಕ್ರಮವು ಪರವಾಗಿಲ್ಲ, ವಾಸ್ತವವಾಗಿ ಇದು ಮಹಿಳಾ ಉದ್ಯೋಗಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತದೆ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications