ಬಾಂಬೆ ಹೈಕೋರ್ಟ್ ನಿಂದ ಮ್ಯಾಗಿ ನಿಷೇಧ ತೆರವು
ಮುಂಬೈ, ಆಗಸ್ಟ್. 13: ಮ್ಯಾಗಿ ಪ್ರಿಯರಿಗೊಂದು ಶುಭ ಸುದ್ದಿಯಿದೆ. ಭಾರತೀಯ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಮ್ಯಾಗಿ ಮೇಲೆ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ ಗುರುವಾರ ತೆರವು ಮಾಡಿದೆ.
ಆದರೆ ಕೆಲ ಷರತ್ತುಗಳನ್ನು ವಿಧಿಸಿದೆ. ಮ್ಯಾಗಿ ನೂಡಲ್ಸ್ ನ್ನು ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಆದೇಶ ಹೊರಡಿಸಿದೆ. ಮ್ಯಾಗಿ ನೂಡಲ್ಸ್ ನ ಒಟ್ಟು 5 ಮಾದರಿಗಳ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿ ಆರು ವಾರಗಳ ಗಡುವು ನೀಡಿದೆ.[ಸರ್ಕಾರದ ಗದಾ ಪ್ರಹಾರಕ್ಕೆ ತತ್ತರಿಸಿದ ನೆಸ್ಲೆ ಕಂಪನಿ]

ವರದಿ ಬರುವವರೆಗೆ ಮಾರಾಟವಿಲ್ಲ:
ಪ್ರಯೋಗಾಲಯದ ವರದಿ ಬರುವವರೆಗೆ ಮ್ಯಾಗಿ ಮಾರಾಟ, ಉತ್ಪಾದನೆಗೆ ನಿರ್ಬಂಧ ಹೇರಲಾಗಿದೆ. ಮ್ಯಾಗಿಯಲ್ಲಿ ಅಪಾಯಕಾರಿ ಅಂಶಗಳಿವೆ ಎಂದು ನಿಷೇಧ ಹೇರಿದ್ದ ಭಾರತೀಯ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಪ್ರಾಧಿಕಾರ(ಎಫ್ಎಸ್ಎಸ್ಎಐ)ದ ಆದೇಶದ ವಿರುದ್ಧ ನೆಸ್ಲೆ ಇಂಡಿಯಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. [ನಿಮ್ಮ ಮನೆಯಲ್ಲಿ ಮತ್ತೆ ಎರಡು ನಿಮಿಷಕ್ಕೆ ಅಡುಗೆ ಸಿದ್ಧ!]
ಮ್ಯಾಗಿ ನೂಡಲ್ಸ್ ನ್ನು ಪರೀಕ್ಷೆ ಮಾಡಿರುವ ಕೇಂದ್ರ ಆಹಾರ ತಾಂತ್ರಿಕ ಮತ್ತು ಸಂಶೋಧನಾ ಸಂಸ್ಥೆ (ಸಿಎಫ್ಟಿಆರ್ಐ) ಮ್ಯಾಗಿಯಲ್ಲಿ ಹಾನಿಕಾರಕ ಅಂಶಗಳು ಇಲ್ಲ ಎಂದು ವರದಿ ನೀಡಿತ್ತು.
ಮ್ಯಾಗಿ ಮೇಲೆ ನಿಷೇಧ ಹೇರಿಕೆ, ತೆರವುಗಳು ಭಾರತದ ಷೇರು ಮಾರುಕಟ್ಟೆ ಮೇಲೂ ಪರಿಣಾಮ ಉಂಟುಮಾಡಿದ್ದವು. ನೆಸ್ಲೆ ಕಂಪನಿ ವಿರುದ್ಧ ಸುಳ್ಳು ಜಾಹೀರಾತು, ಗ್ರಾಹಕರಿಗೆ ಮೋಸ ಮಾಡಿದ ಆರೋಪ ಹೊರೆಸಿ 640 ಕೋಟಿ ರೂ.ಗಳ ಪರಿಹಾರ ನೀಡುವಂತೆ ದೆಹಲಿಯ ರಾಷ್ಟ್ರೀಯ ಗ್ರಾಹಕ ನ್ಯಾಯಾಲಯದಲ್ಲಿ ಮಂಗಳವಾರ ದಾವೆ ಹೂಡಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications