Petrol Diesel Price: ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಂದಿನಿಂದ ಇಳಿಕೆ
ದೆಹಲಿ ಮಾರ್ಚ್ 15: ದೇಶದಲ್ಲಿ ಚುನಾವಣೆ ಪರ್ವ ಜೋರಾಗಿದೆ. ಗ್ಯಾರೆಂಟಿಗಳು, ಕೊಡುಗೆಗಳ ಮೂಲಕ ಮತದಾರರ ಮನ ಗೆಲ್ಲಲು ಪಕ್ಷಗಳು ಆರಂಭಿಸಿವೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದ್ದು ಇಂದಿನಿಂದ ಅದು ಜಾರಿಗೆ ಬರಲಿದೆ.
ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಅದಾಗಲೇ ಮತದಾರರ ಗಮನ ಸೆಳೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್ ದರಗಳನ್ನು ತಲಾ ಎರಡು ರೂಪಾಯಿಗೆ ಇಳಿಕೆ ಮಾಡಿದೆ. ಶುಕ್ರವಾರ ಅಂದರೆ ಇಂದು (ಮಾರ್ಚ್ 15) ದೇಶದ್ಯಂತ ಬೆಳಗ್ಗೆ 6ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಯಲ್ಲಿ ತುಸು ಇಳಿಕೆಯಾದ ಕಾರಣ ಇಂದನ ದರಗಳನ್ನು ಇಳಿಕೆ ಮಾಡಲಾಗಿದೆ. ಇದಕ್ಕೂ ಮೊದಲು ಗ್ಯಾಸ್ ಸಿಲಿಂಡರ್ ದರವನ್ನೂ ಸಹ ಕೇಂದ್ರ ಸರ್ಕಾರ 100 ರೂಪಾಯಿ ಕಡಿಮೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಹೊಸ ಪೆಟ್ರೋಲ್ ದರ 94.72ರೂಪಾಯಿಗಳಿಗೆ ಇಳಿದಿದೆ. ಮುಂಬೈನಲ್ಲಿ 104.21 ರೂಪಾಯಿಗಳಷ್ಟಿದೆ. ಈ ಆದೇಶವು ಮಾರ್ಚ್ 15ರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
ರಾಜಸ್ಥಾನದಲ್ಲಿ 5 ರೂಪಾಯಿ ಇಳಿಕೆ ಮಾಡಲಾಗಿದೆ. ಹೌದು ರಾಜಸ್ಥಾನ ಸರ್ಕಾರ ಪೆಟ್ರೋಲ್, ಡೀಸೆಲ್ ವ್ಯಾಟ್ ದರಗಳನ್ನು ಇಳಿಕೆ ಮಾಡಿದೆ. ಹೀಗಾಗಿ ಅಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರಗಳು 5ರೂಪಾಯಿಗಳಷ್ಟು ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ ಹಿಂದೆ ಇದ್ದ 101.94 ದರ ಈಗ 99.94ರಷ್ಟಾಗಿದೆ. ಇನ್ನೂ ಡೀಸೆಲ್ ದರ ಲೀಟರ್ಗೆ 87.89 ಇತ್ತು ಈಗ ಅದು 85.89 ಆಗಿದೆ.
ಕೋಲ್ಕತ್ತಾದಲ್ಲಿ ಇಂದು ಪೆಟ್ರೋಲ್ ದರ 106.03ರೂ.ನಿಂದ 103.94 ರೂ.ಗೆ ಇಳಿಕೆಯಾಗಿದ್ದು, ಡೀಸೆಲ್ ದರ ಲೀಟರ್ಗೆ 92.76 ರೂ.ನಿಂದ 90.76 ರೂ.ಗೆ ಇಳಿಕೆ ಕಂಡಿದೆ. ಇನ್ನು ಮುಂಬೈನಲ್ಲಿ ಪೆಟ್ರೋಲ್ 106.31ರೂ.ನಿಂದ 104.21ರೂ.ಗೆ ಹಾಗೂ ಡೀಸೆಲ್ ಲೀಟರ್ಗೆ 94.27 ರೂ.ನಿಂದ 92.15 ರೂ.ಗೆ ಇಳಿಕೆ ಕಂಡಿದೆ.
ಲಕ್ನೋದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 96.57 ರೂ.ನಿಂದ 94.65ರೂ.ಗೆ ಇಳಿದಿದೆ. ಆಗ್ರಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.20ರ ರೂ.ನಿಂದ 94.35ರೂ.ಗೆ ಇಳಿದಿದೆ. ಡೀಸೆಲ್ 89.37 ರೂ.ನಿಂದ 87.41 ರೂ.ಗೆ ಇಳಿದಿದೆ. ಮೀರತ್ನಲ್ಲಿ ಪೆಟ್ರೋಲ್ ಬೆಲೆ 96.31 ರೂ.ನಿಂದ 94.43 ರೂ.ಗೆ ಇಳಿದಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications