ಗಣತಂತ್ರದಿನಕ್ಕಾಗಿ ಐಕ್ಯತಾ ಡೂಡ್ಲ್ ರಚಿಸಿದ ಮುಂಬೈ ಕಲಾವಿದ
ನವದೆಹಲಿ, ಜನವರಿ 26: ಪ್ರತಿ ವರ್ಷದಂತೆ ಈ ವರ್ಷ ಕೂಡಾ ಸರ್ಚ್ ಇಂಜಿನ್ ದೈತ್ಯ ಗೂಗಲ್ ತನ್ನ ಮುಖಪುಟದಲ್ಲಿ ಜನವರಿ 26ರಂದು ಭಾರತದ ಗಣತಂತ್ರ ದಿನದ ಅಂಗವಾಗಿ ವಿಶೇಷ ಡೂಡ್ಲ್ ಪ್ರದರ್ಶಿಸಿದೆ. ಈ ವಿಶೇಷ ಡೂಡ್ಲ್ ರಚಿಸಿದ್ದು ಮುಂಬೈ ಮೂಲದ ಕಲಾವಿದ ಓಂಕಾರ್ ಫೊಂಡೆಕರ್.
ಡೂಡ್ಲ್ ಚಿತ್ರ: ಭಾರತ ಸೇರಿದಂತೆ ವಿಶ್ವದ ಅನೇಕ ವಿದ್ಯಮಾನಗಳು, ಐತಿಹಾಸಿಕ ದಿನಗಳು, ಹಬ್ಬ ಹರಿದಿನಗಳು, ಆಚರಣೆಗಳ ಸಂದರ್ಭದಲ್ಲಿ ಗೂಗಲ್ ತನ್ನ ಡೂಡ್ಲ್ ರೇಖಾಚಿತ್ರದ ಮೂಲಕ ಸಾಧಕರನ್ನು ಸ್ಮರಿಸುವ ಪ್ರಕ್ರಿಯೆಯನ್ನು ಮುಂದುವರೆಸಿಕೊಂಡು ಬಂದಿದೆ. ಗೂಗಲ್ ಲೋಗೋವನ್ನು ಕಲಾತ್ಮಕವಾಗಿ ರೂಪಿಸುವುದಕ್ಕೆ ಡೂಡಲ್ಸ್ ಎನ್ನಲಾಗುತ್ತದೆ. ಪ್ರತಿ ವರ್ಷ ಶಾಲಾ ಮಕ್ಕಳಿಗೆ ಡೂಡ್ಲ್ ರಚನೆ ಸ್ಪರ್ಧೆ ಏರ್ಪಡಿಸಲಾಗುತ್ತದೆ.
ಕಲೆ ಸಂಸ್ಕೃತಿ ಬಿಂಬಿಸುವ ಡೂಡ್ಲ್: ವಿವಿಧತೆಯಲ್ಲಿ ಐಕ್ಯತೆ ಸಾರುವ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಡೂಡ್ಲ್ ಚಿತ್ರವನ್ನು ಓಂಕಾರ್ ರಚಿಸಿದ್ದಾರೆ.

ಕ್ರಿಕೆಟರ್, ಭರತನಾಟ್ಯ ಪಟು, ಸಂಗೀತಗಾರ, ಆನೆ ಸವಾರಿ, ವಾಸ್ತುಶಿಲ್ಪ ಹೀಗೆ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವ ಚಿತ್ರ ಇದಾಗಿದೆ. ಭಾರತವನ್ನು ಪ್ರತಿನಿಧಿಸುವ ಕಲೆ, ಸಂಸ್ಕೃತಿ, ವೈವಿಧ್ಯತೆ ಪ್ರತಿಬಿಂಬದಂಥ ಚಿತ್ರ ರಚಿಸುವ ಅವಕಾಶ ಸಿಕ್ಕಿದ್ದಕ್ಕೆ ಸಂತಸವಾಗಿದೆ. ಗೂಗಲ್ ಮೂಲಕ ವಿಶ್ವಕ್ಕೆ ನಮ್ಮ ಪರಂಪರೆ ಬಗ್ಗೆ ಇನ್ನಷ್ಟು ವಿಸ್ತರಿಸಲಿದೆ ಎಂದು ಕಲಾವಿದ ಓಂಕಾರ್ ಫೊಂಡೆಕರ್ ಪ್ರತಿಕ್ರಿಯಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications