ಶಿಕ್ಷಕರ ದಿನಾಚರಣೆ: ಎಲ್ಲಾ ಶಿಕ್ಷಕರಿಗೆ ಗೂಗಲ್ ಡೂಡಲ್ ಗೌರವ
ನವದೆಹಲಿ, ಸೆಪ್ಟೆಂಬರ್ 05: ಶಿಕ್ಷಕರ ದಿನಾಚರಣೆ ಅಂಗವಾಗಿ ಗೂಗಲ್ ಡೂಡಲ್ ದೇಶದ ಎಲ್ಲಾ ಶಿಕ್ಷಕರಿಗೆ ಗೌರವ ಸಲ್ಲಿಸಿದೆ.
ಪ್ರಸ್ತುತ ಕೊವಿಡ್ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಪ್ರತಿಯೊಬ್ಬ ಶಿಕ್ಷಕ ಕೂಡ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿರಿಕೊಂಡು, ಅವರ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ.
ತಮಗೆ ತಿಳಿಯದಿದ್ದರೂ ಕಲಿತುಕೊಂಡು ಆನ್ಲೈನ್ ತರಗತಿಗಳ ಮೂಲಕವೇ ಮಕ್ಕಳ ಶಿಕ್ಷಣ ಕುಂಠಿತವಾಗದಂತೆ ಶ್ರಮಿಸುತ್ತಿದ್ದಾರೆ.

ಶಿಕ್ಷಕರ ಶ್ರಮಕ್ಕೆ ಗೂಗಲ್ ಇಂದು ಗೌರವ ಸಲ್ಲಿಸುವ ಕೆಲಸ ಮಾಡಿದೆ. ಕೊರೊನಾ ಸಮಯದಲ್ಲಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿಶ್ರಮಿಸುತ್ತಿರುವ ಹೀರೋಗಳಿಗೆ ಡೂಡಲ್ ಮೂಲಕ ಗೂಗಲ್ ಗೌರವ ಸಲ್ಲಿಸಿದೆ. ಅನಿಮೇಟೆಡ್ ಡೂಡಲ್ ಇದಾಗಿದೆ.
ಪ್ರತಿ ವರ್ಷವೂ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.
ಆದರೆ ಈ ಬಾರಿ ಕೊರೊನಾದಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಿವೆ. ಹೀಗಾಗಿ ಈ ಬಾರಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಕಡಿಮೆಯಾಗಿದೆ. ಆದರೂ ಸಹ ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಹಿಂಜರಿಯದೇ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ದೇಶದ ಎಲ್ಲಾ ಶಿಕ್ಷಕರಿಗೆ ಗೂಗಲ್ ವಿಶೇಷ ಕೃತಜ್ಞತೆ ಸಲ್ಲಿಸಿದೆ.
1962ರಿಂದಲೂ ಪ್ರತಿವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.
ಅವರು 1888ರ ಸೆಪ್ಟೆಂಬರ್ 5ರಂದು ತಮಿಳುನಾಡಿನ ತಿರುತನಿಯಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ರಾಧಾಕೃಷ್ಣ ಅವರು ಉತ್ತಮ ವಿದ್ಯಾರ್ಥಿಯಾಗಿದ್ದು, ಬಾಲ್ಯದಲ್ಲೇ ಓದಿನಲ್ಲಿ ಮುಂದೆ ಇದ್ದರು. ಬಳಿಕ ಮದ್ರಾಸ್ನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಫಿಲಾಸಪಿ(ತತ್ವಶಾಸ್ತ್ರ)ಯಲ್ಲಿ ಎಂ.ಎ ಮಾಡಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications