ಭಾರತರತ್ನ ಸರ್ಎಂ. ವಿಶ್ವೇಶ್ವರಯ್ಯನವರಿಗೆ ಗೂಗಲ್ ಡೂಡಲ್ ಗೌರವ
ಬೆಂಗಳೂರು, ಸೆಪ್ಟೆಂಬರ್ 15: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನವಾದ ಸೆಪ್ಟೆಂಬರ್ 15ರಂದು ಜಗತ್ತಿನ ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸರ್.ಎಂ. ವಿ ರೇಖಾಚಿತ್ರ ಪ್ರಕಟಿಸುವ ಮೂಲಕ ಗೌರವ ಸಲ್ಲಿಸಿದೆ.
ಸರ್ ಎಂ ವಿಶ್ವೇಶ್ವರಯ್ಯ ಪ್ರಸಿದ್ಧರಾಗಿದ್ದು ಮೋಕ್ಷಗುಂಡಂ ವಿಶ್ವೇಶ್ವರಯ್ಯ ಎಂದು, ಅವರು ಮೈಸೂರು ಸಂಸ್ಥಾನದ ದಿವಾನರಾಗಿದ್ದರು. ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಬ್ರಾಹ್ಮಣ ಕುಟುಂಬವೊಂದರಲ್ಲಿ 1861ರ ಸೆಪ್ಟೆಂಬರ್ 15ರಂದು ಜನಿಸಿದರು. ವಿಶ್ವೇಶ್ವರಯ್ಯ ಅವರ ತಂದೆ ಶ್ರೀನಿವಾಸ ಸಂಸ್ಕೃತ ವಿದ್ವಾಂಸರಾಗಿದ್ದರು.
ವಿಶ್ವೇಶ್ವರಯ್ಯ ಅವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ, ಪ್ರೌಢಶಿಕ್ಷಣ ಬೆಂಗಳೂರಿನಲ್ಲಿ ಪಡೆದರು. ನಂತರ 1881ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಪಡೆದರು. ನಂತರ ಮುಂಬೈಗೆ ಬಂದು ಅಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು.ಅವರು ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸವೊಂದನ್ನು ಕಂಡು ಹಿಡಿದು ಅದಕ್ಕೆ ಪೇಟೆಂಟ್ ಪಡೆದರು.

ಮೊದಲ ಬಾರಿಗೆ 1902 ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು.
1908ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ಅವರು ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. 1917ರಲ್ಲಿ ಬೆಂಗಳೂರಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿದರು. ಈ ಕಾಲೇಜಿಗೆ ಅವರ ಹೆಸರನ್ನೇ ಇಡಲಾಯಿತು. ಅವರು 1962ರಲ್ಲಿ ನಿಧನರಾದರು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ












Click it and Unblock the Notifications