ಭಾರತರತ್ನ ಸರ್ಎಂ. ವಿಶ್ವೇಶ್ವರಯ್ಯನವರಿಗೆ ಗೂಗಲ್ ಡೂಡಲ್ ಗೌರವ
ಬೆಂಗಳೂರು, ಸೆಪ್ಟೆಂಬರ್ 15: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನವಾದ ಸೆಪ್ಟೆಂಬರ್ 15ರಂದು ಜಗತ್ತಿನ ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸರ್.ಎಂ. ವಿ ರೇಖಾಚಿತ್ರ ಪ್ರಕಟಿಸುವ ಮೂಲಕ ಗೌರವ ಸಲ್ಲಿಸಿದೆ.
ಸರ್ ಎಂ ವಿಶ್ವೇಶ್ವರಯ್ಯ ಪ್ರಸಿದ್ಧರಾಗಿದ್ದು ಮೋಕ್ಷಗುಂಡಂ ವಿಶ್ವೇಶ್ವರಯ್ಯ ಎಂದು, ಅವರು ಮೈಸೂರು ಸಂಸ್ಥಾನದ ದಿವಾನರಾಗಿದ್ದರು. ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಬ್ರಾಹ್ಮಣ ಕುಟುಂಬವೊಂದರಲ್ಲಿ 1861ರ ಸೆಪ್ಟೆಂಬರ್ 15ರಂದು ಜನಿಸಿದರು. ವಿಶ್ವೇಶ್ವರಯ್ಯ ಅವರ ತಂದೆ ಶ್ರೀನಿವಾಸ ಸಂಸ್ಕೃತ ವಿದ್ವಾಂಸರಾಗಿದ್ದರು.
ವಿಶ್ವೇಶ್ವರಯ್ಯ ಅವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ, ಪ್ರೌಢಶಿಕ್ಷಣ ಬೆಂಗಳೂರಿನಲ್ಲಿ ಪಡೆದರು. ನಂತರ 1881ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಪಡೆದರು. ನಂತರ ಮುಂಬೈಗೆ ಬಂದು ಅಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು.ಅವರು ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸವೊಂದನ್ನು ಕಂಡು ಹಿಡಿದು ಅದಕ್ಕೆ ಪೇಟೆಂಟ್ ಪಡೆದರು.

ಮೊದಲ ಬಾರಿಗೆ 1902 ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು.
1908ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ಅವರು ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. 1917ರಲ್ಲಿ ಬೆಂಗಳೂರಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿದರು. ಈ ಕಾಲೇಜಿಗೆ ಅವರ ಹೆಸರನ್ನೇ ಇಡಲಾಯಿತು. ಅವರು 1962ರಲ್ಲಿ ನಿಧನರಾದರು.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications