ಭಾರತ ಭೂಪಟ ಗೂಗಲ್ ಸರ್ಚ್ ಪ್ರಮಾದ
ಬೆಂಗಳೂರು, ನ.20: ಸರ್ಚ್ ಇಂಜಿನ್ ಸಂಸ್ಥೆ ಗೂಗಲ್ ಮತ್ತೊಮ್ಮೆ ಭಾರತದ ಭೂಪಟವನ್ನು ತಪ್ಪಾಗಿ ಪ್ರಕಟಿಸಿರುವುದು ಬೆಳಕಿಗೆ ಬಂದಿದೆ. ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶವನ್ನು ಪಾಕಿಸ್ತಾನದ ಭೂ ಭಾಗ ಎಂದು ಗೂಗಲ್ ಇನ್ ಸೈಟ್ಸ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಈ ರೀತಿ ಗುರುತರ ಪ್ರಮಾದ ಎಸಗಿರುವ ಗೂಗಲ್ ಸಂಸ್ಥೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೋರಿದೆ ಎಂದು ಟೆಲಿಕಾಂ ಹಾಗೂ ಐಟಿ ಸಚಿವ ಸಚಿನ್ ಪೈಲಟ್ ಹೇಳಿದ್ದಾರೆ.
ಭಾರತದ ಭೂಪಟವನ್ನು ತಿದ್ದುವುದು, ಗಡಿ ಭಾಗವನ್ನು ತಿರುಚಿ ಪ್ರಕಟಿಸುವುದು ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯಿದೆ ಪ್ರಕಾರ ಅಪರಾಧವಾಗುತ್ತದೆ. ಗೂಗಲ್ ಸಂಸ್ಥೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಈ ರೀತಿ ಪ್ರಮಾದ ಎಸಗಿರುವುದು ತಪ್ಪು. ಕೂಡಲೇ ತಪ್ಪು ಸರಿ ಪಡಿಸುವಂತೆ ಸಚಿವಾಲಯದಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಪೈಲಟ್ ಹೇಳಿದ್ದಾರೆ.

ಇದರ ಬೆನ್ನಲ್ಲೇ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗಕ್ಕೆ ಸೂಚನೆ ನೀಡಿರುವ ಸಚಿನ್ ಪೈಲಟ್,' ಒಂದು ಸಮೀಕ್ಷೆ ನಡೆಸಿ ಈ ರೀತಿ ಭಾರತದ ಭೂಪಟ, ಲಾಂಛನ, ಪ್ರಾಣಿ, ಪಕ್ಷಿ ಹಾಗೂ ದೇಶದ ಪ್ರಮುಖ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಪ್ರಕಟಣೆ ಹೊರಡಿಸುವವರ ನೀಡುವಂತೆ ಹೇಳಿದ್ದಾರೆ. ಗೂಗಲ್ ನಿಂದ ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಐಬಿಎನ್ ಲೈವ್ ವೆಬ್ ಸೈಟ್ ನಲ್ಲಿ ಈ ಬಗ್ಗೆ ವಿಸ್ತೃತ ವರದಿ ಪ್ರಕಟವಾಗಿದ್ದು, 'ಗೂಗಲ್ ಇನ್ ಸೈಟ್ ಸರ್ಚ್' ನಲ್ಲಿ ಈ ರೀತಿ ಪ್ರಮಾದವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಗೂಗಲ್ ತನ್ನ ತಪ್ಪನ್ನು ತಿದ್ದುಕೊಂಡರೂ ಮತ್ತೆ ಮತ್ತೆ ಇದೇ ರೀತಿ ತಪ್ಪುಗಳಾಗುತ್ತಿದ್ದು, ಈ ಬಗ್ಗೆ ಯಾರೂ ಪ್ರತಿಕ್ರಿಯಿಸುತ್ತಿಲ್ಲ ಎಂದು ವರದಿ ಹೇಳಿದೆ.
ಈ ಹಿಂದೆ ಗೂಗಲ್ ಉಪಗ್ರಹದ ಮ್ಯಾಪ್ ನೀಡಿದ ಚಿತ್ರದಲ್ಲಿ ಅರುಣಾಚಲ ಪ್ರದೇಶದ ಭೂ ಭಾಗಗಳನ್ನು ಚೀನಾಕ್ಕೆ ಸೇರಿದ್ದು ಎಂದು ತೋರಿಸಲಾಗಿತ್ತು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications