ಗೂಗಲ್ ಸರ್ಚ್ 2013: ಮೋದಿ ನಂ.1 ರಾಜಕಾರಣಿ
ಬೆಂಗಳೂರು, ಡಿ.18: ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಮೂಲಕ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ 'ಭಾರತೀಯ ರಾಜಕಾರಣಿ' ಎಂಬ ಹೆಗ್ಗಳಿಕೆಗೆ ಮತೊಮ್ಮೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಗೂಗಲ್ ಬಿಡುಗಡೆ ಮಾಡಿದ Zietgeist 2013ರ ವರದಿಯಲ್ಲಿ ನರೇಂದ್ರ ಮೋದಿ ಅವರ ಬಗ್ಗೆಯೇ ಹೆಚ್ಚು ಜನರು ಗೂಗಲ್ ನಲ್ಲಿ ಸರ್ಚ್ ಮಾಡಿದ್ದಾರೆ ಎಂಬ ಅಂಶವನ್ನು ಹೇಳಲಾಗಿದೆ.
ರಾಜಕಾರಣಿಗಳ ವಿಭಾಗದಲ್ಲಿ ಮೋದಿ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇದ್ದಾರೆ. ಜತೆಗೆ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಟಾಪ್ 5 ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
ನಂ.6ರಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇದ್ದು, ಇವರ ನಂತರದ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕ ಸುಷ್ಮಾ ಸ್ವರಾಜ್ ನಂತರದ ಸ್ಥಾನಗಳಲ್ಲಿದ್ದಾರೆ.

'ಸುದ್ದಿ (News Events' ವಿಭಾಗದಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂಬ ಸುದ್ದಿ ಹೆಚ್ಚು ಬಾರಿ ಶೋಧ ಮಾಡಲ್ಪಟ್ಟಿದೆ. ಈ ವಿಭಾಗದಲ್ಲಿ ಬ್ಲಾಕ್ ಬರಿ ಮಾರಾಟ 2ನೇ ಸ್ಥಾನಗಳಿಸಿದ್ದು, ರಾಹುಲ್ ದ್ರಾವಿಡ್ ನಿವೃತ್ತಿ ಸುದ್ದಿ 3 ನೇ ಸ್ಥಾನಗಳಿಸಿದೆ. ಟಾಪ್ ಟೆನ್ ಸದ್ದು ಮಾಡಿದ ಸುದ್ದಿಗಳು
* PM Candidature of Narendra Modi
* ಬ್ಲಾಕ್ ಬೆರಿ ಸೇಲ್
* ರಾಹುಲ್ ದ್ರಾವಿಡ್ ನಿವೃತ್ತಿ
* ಸೈನಾ ನೆಹ್ವಾಲ್
* ವಿಜಯ್ ಮಲ್ಯ ಕಿಂಗ್ ಫಿಷರ್ ಏರ್ ಲೈನ್ಸ್
* ಕರ್ನಾಟಕ ಎಲೆಕ್ಷನ್ ಫಲಿತಾಂಶ
* ಆರುಷಿ ತಲ್ವಾರ್ ಕೇಸ್
* ಏರ್ ಇಂಡಿಯಾ ಸುದ್ದಿ
* ಇಂಡಿಯನ್ ಎಕಾನಮಿ
* ಲ್ಯಾಪ್ ಟಾಪ್ ವಿತರಣೆ(ಉತ್ತರ ಪ್ರದೇಶ, ತಮಿಳುನಾಡಿನಲ್ಲಿ ಜಾರಿಯಲ್ಲಿದೆ)
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications