ಗಗನಸಖಿ ಸಾವು: ಗೋಪಾಲ ಕಾಂಡಾಗೆ ಜಾಮೀನು ಮಂಜೂರು
ಹರ್ಯಾಣ, ಮಾ.4:ಮಾಜಿ ಗಗನಸಖಿ ಗೀತಿಕಾ ಶರ್ಮ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಹರ್ಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ದೆಹಲಿಯ ರೋಹಿಣಿ ಕೋರ್ಟ್ ಮಂಗಳವಾರ ಗೋಪಾಲ್ ಅವರಿಗೆ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 14 ತಿಂಗಳುಗಳ ಜೈಲಿನಲ್ಲಿದ್ದ ಕಾಂಡ ಅವರು ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ದೆಹಲಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ಜಡ್ಜ್ ಎಂಸಿ ಗುಪ್ತಾ ಅವರು ಮಧ್ಯಂತರ ಜಾಮೀನು ನೀಡಿದ್ದರು. ಒಂದು ತಿಂಗಳ ಕಾಲ ಚುನಾವಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೈಲಿಗೆ ಹಿಂತಿರುಗುವಂತೆ ಕೋರ್ಟ್ ಸೂಚಿಸಿತ್ತು.

ಗೀತಿಕಾ ಆತ್ಮಹತ್ಯಾ ಪ್ರಕರಣದ ಪ್ರಮುಖ ಆರೋಪಿ ಹರ್ಯಾಣದ ಮಾಜಿ ಸಚಿವ ಗೋಪಾಲ್ ಕಾಂಡ ಅವರ ವಿರುದ್ಧ ಹಾಕಿರುವ ಕೇಸುಗಳನ್ನು ಹಿಂಪಡೆಯುವಂತೆ ಗೀತಿಕಾ ಅವರ ಕುಟುಂಬದ ಮೇಲೆ ಭಾರಿ ಒತ್ತಡ ಹೇರಲಾಗಿತ್ತು. ಕಾಂಡ ಅವರ ಕಡೆಯವರ ಒತ್ತಡ ತಾಳಲಾರದೆ ಗೀತಿಕಾ ಅವರ ತಾಯಿ ಸಾವಿಗೆ ಶರಣಾಗಿದ್ದರು.
23 ವರ್ಷ ವಯಸ್ಸಿನ ಗೀತಿಕಾ ಅವರು ಗೋಪಾಲ್ ಕಾಂಡಾ ಒಡೆತನದ ಎಂಡಿಎಂಎಲ್ ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿ ಕಾರ್ಯ ನಿರ್ವಹಿಸಿದ್ದರು. ಗೀತಿಕಾ ದೆಹಲಿಯ ವಾಯುವ್ಯ ಭಾಗದಲ್ಲಿರುವ ಅಶೋಕ್ ವಿಹಾರ್ ನ ಅಪಾರ್ಟ್ಮೆಂಟ್ ನಲ್ಲಿ ಆಗಸ್ಟ್ 5,2012ರಂದು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಗೀತಿಕಾ ಅವರ ಸೂಸೈಡ್ ನೋಟ್ ನಲ್ಲಿ ಗೋಪಾಲ್ ಕಾಂಡಾ, ಕಾಂಡಾ ಬಂಟ ಅರುಣ್ ಚಡ್ಡಾ ಅವರ ಮೇಲೆ ಆರೋಪ ಎಲ್ಲಾ ರೀತಿಯ ಕಿರುಕುಳ ಹೊರೆಸಲಾಗಿತ್ತು. ಪ್ರಕರಣ ಕುತ್ತಿಗೆಗೆ ಬಂದ ಮೇಲೆ ಹರ್ಯಾಣದ ಸಚಿವ ಸ್ಥಾನಕ್ಕೆ ಗೋಪಾಲ್ ಕಾಂಡಾ ರಾಜೀನಾಮೆ ನೀಡಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications