ಅಣ್ಣನ ಕೊಲೆ ಪ್ರತಿಕಾರ: ತಂಗಿ ಮಾಡಿದ್ದೇನು ಗೊತ್ತಾ?
ಗೋರಖ್ಪುರ, ಜು.19: ಅಣ್ಣನ ಸಾವಿನ ಸೇಡು ತೀರಿಸಿಕೊಳ್ಳಲು ತಂಗಿ ಇಡೀ ಶಾಲೆಯ ವಿದ್ಯಾರ್ಥಿಗಳಿಗೆ ವಿಷ ಹಾಕಿದ ಘಟನೆ ಗೋರಖ್ಪುರದಲ್ಲಿ ನಡೆದಿದೆ.
ಗೋರಖ್ಪುರದ ಬುಲಿಯಾ ಹಳ್ಳಿಯಲ್ಲಿರುವ ಶಾಲೆಯಲ್ಲಿ ಬೇಯಿಸಿಟ್ಟ ಆಹಾರದ ಪಾತ್ರೆಗೆ ವಿದ್ಯಾರ್ಥಿನಿ ವಿಷಯವನ್ನು ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಾಳೆ ಎನ್ನಲಾಗಿದೆ. ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾಗಾದರೆ ಈ ರೀತಿ ಮಾಡಲು ಕಾರಣವೇನೆಂದರೆ ಏಪ್ರಿಲ್ 2ರಂದು ವಿದ್ಯಾರ್ಥಿನಿಯ ಅಣ್ಣನನ್ನು ಶಾಲೆಯಲ್ಲಿ ಕೊಲೆ ಮಾಡಲಾಗಿತ್ತು. ಇದೇ ಕಾರಣಕ್ಕೆ ವಿದ್ಯಾರ್ಥಿನಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಳು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಶಾಲೆಯ ಐದನೇ ತರಗತಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಬಾಲಾಪರಾಧ ಗೃಹಕ್ಕೆ ಬಿಡಲಾಗಿತ್ತು.

ಸರ್ಕಾರಿ ಪ್ರೌಡಶಾಲೆಯ ಪ್ರಿನ್ಸಿಪಾಲ್ ನೀಡಿರುವ ದೂರಿನ ಆಧಾರದ ಮೇಲೆ ವಿದ್ಯಾರ್ಥಿನಿ ವಿರುದ್ಧ ಐಪಿಸಿ ಸೆಕ್ಷನ್ 328ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆಕೆಯನ್ನು ಬಾಲಾಪರಾಧ ಗೃಹಕ್ಕೆ ಕಳುಹಿಸಲು ಬೇಕಾದ ಸಿದ್ಧತೆ ಮಾಡಿಕೊಂಡಿದೆ. ಬೇಯಿಸಿದ ಆಹಾರವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.
ಶಾಲೆಯ ಅಧಿಕಾರಿಗಳು ಹೇಳುವಂತೆ, ಬಾಲಕಿಯು ತನ್ನ ಅಣ್ಣನ ಕೊಲೆಯ ಸೇಡು ತೀರಿಸಿಕೊಳ್ಳುವ ಸಲುವಾಗಿ ಎಲ್ಲ ವಿದ್ಯಾರ್ಥಿಗಳ ಕೊಲೆಗೆ ಮುಂದಾಗಿದ್ದಳು ಎನ್ನಲಾಗಿದೆ. ಆಹಾರಕ್ಕೆ ವಿಷ ಬೆರೆಸಿರುವ ಕುರಿತು ವಿದ್ಯಾರ್ಥಿಗಳು ತಿನ್ನುವ ಮೊದಲೇ ಪತ್ತೆಯಾಗಿದ್ದರಿಂದ ಯಾವುದೇ ಅವಗಢ ಸಂಭವಿಸಿಲ್ಲ. ವಿಷಯ ಅರಿತ ಗ್ರಾಮಸ್ಥರು ಶಾಲೆಯನ್ನು ಸುತ್ತುವರಿದು ವಿದ್ಯಾರ್ಥಿನಿಯ ತಾಯಿಯನ್ನು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications