ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27 ರಷ್ಟು ಮೀಸಲಾತಿ: ಕೇಂದ್ರ
ನವದೆಹಲಿ, ಜುಲೈ 29: ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ ಘೋಷಿಸಿದೆ. ಇದರಲ್ಲಿ ಪ್ರಮುಖಾಗಿ ಒಬಿಸಿ ವಿಭಾಗಕ್ಕೆ ಶೇ. 27 ಹಾಗೂ ಆರ್ಥಿಕ ದುರ್ಬಲರಿಗೆ ಶೇ. 10 ರಷ್ಟು ಮೀಸಲಾತಿ ನೀಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ ಇದೀಗ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

ಈ ಮೀಸಲಾತಿ ಎಂಬಿಬಿಎಸ್ ಮತ್ತು ಬಿಡಿಎಸ್ಗೂ ಅನ್ವಯವಾಗಲಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಓಬಿಸಿ ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.
1986ರಲ್ಲಿ ಅಖಿಲ ಭಾರತ ಕೋಟಾ(AIQ)ಯೋಜನೆಯನ್ನು ಪರಿಚಯಿಸಲಾಯಿತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಯೋಜನೆಗೆ ಜಾರಿಗೊಳಿಸಲಾಯಿತು. ಈ ಯೋಜನೆಯಲ್ಲಿ ಯಾವುದೇ ರಾಜ್ಯದ ವಿದ್ಯಾರ್ಥಿಗಳಿಗೆ ಬೇರೆ ರಾಜ್ಯದಲ್ಲಿರುವ ಉತ್ತಮ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಆಕಾಂಕ್ಷಿ ಮುಕ್ತ ಅರ್ಹತೆ ಆಧಾರಿತ ಅವಕಾಶಗಳನ್ನು ಒದಗಿಸುತ್ತದೆ.
ಅಖಿಲ ಭಾರತ ಕೋಟಾ ಒಟ್ಟು ಯುಜಿ ಸೀಟುಗಳಲ್ಲಿ ಶೇ.15 ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಪಿಜಿ ಸೀಟುಗಳಲ್ಲಿ ಶೇ.50 ಅನ್ನು ಒಳಗೊಂಡಿದೆ.
1986 ರಿಂದ 2007ರ ವರೆಗೆ AIQ ಕೋಟಾದಲ್ಲಿ ಯಾವುದೇ ಮೀಸಲು ಇರಲಿಲ್ಲ. 2007ರಲ್ಲಿ ಸುಪ್ರೀಂ ಕೋರ್ಟ್, ಎಸ್ಸಿ ವಿಭಾಗಕ್ಕೆ ಶೇ. 15 ಹಾಗೂ ಎಸ್ಟಿ ವಿಭಾಗಕ್ಕೆ ಶೇ. 7.5 ರಷ್ಟು ಮೀಸಲಾತಿ ನೀಡಲಾಗಿತ್ತು.
ಪ್ರಸಕ್ತ ಶೈಕ್ಷಣಿಗೆ ವರ್ಷ 2021-22 ರಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ಕೋರ್ಸ್((ಎಂಬಿಬಿಎಸ್ / ಎಂಡಿ / ಎಂಎಸ್ / ಡಿಪ್ಲೊಮಾ / ಬಿಡಿಎಸ್ / ಎಂಡಿಎಸ್) ಕೋರ್ಸ್ಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.
ಕೇಂದ್ರದ ಈ ನಿರ್ಧಾರದಿಂದ ಪ್ರತಿ ವರ್ಷ ಎಂಬಿಬಿಎಸ್ನಲ್ಲಿ ಸುಮಾರು 1500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ 2500 ಒಬಿಸಿ ವಿದ್ಯಾರ್ಥಿಗಳಿಗೆ, ಸುಮಾರು 550 ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವೀಧರರಲ್ಲಿ ಸುಮಾರು 1000 ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಇದು ಸಹಾಯವಾಗಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications