ಏಪ್ರಿಲ್ 1ರಿಂದ ಎಲೆಕ್ಟೊರಲ್ ಬಾಂಡ್ ವಿತರಣೆಗೆ ಸರ್ಕಾರ ಅನುಮೋದನೆ
ನವದೆಹಲಿ, ಮಾರ್ಚ್ 31: ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳ ನಡುವೆಯೇ ಎಲೆಕ್ಟೊರಲ್ ಬಾಂಡ್ಗಳ 16ನೇ ಸಾಲನ್ನು ವಿತರಣೆ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಏಪ್ರಿಲ್ 1 ರಿಂದ ಏಪ್ರಿಲ್ 10 ರಿಂದ ಎಲೆಕ್ಟೊರಲ್ ಬಾಂಡ್ಗಳ ಮಾರಾಟ ನಡೆಯಲಿದೆ.
ರಾಜಕೀಯ ಪಕ್ಷಗಳಿಗೆ ಹಣದ ರೂಪದಲ್ಲಿ ದೇಣಿಗೆ ನೀಡುವುದಕ್ಕೆ ಪರ್ಯಾಯವಾಗಿ ಎಲೆಕ್ಟೊರಲ್ ಬಾಂಡ್ (ಚುನಾವಣಾ ಬಾಂಡ್) ನೀಡುವ ಪದ್ಧತಿ 2018ರಲ್ಲಿ ಜಾರಿಗೆ ಬಂದಿತ್ತು. ಎಸ್ಬಿಐ ನಿರ್ದಿಷ್ಟ ಬ್ಯಾಂಕ್ ಶಾಖೆಗಳಲ್ಲಿ ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳಲ್ಲಿ ತಲಾ ಹತ್ತು ದಿನ ಎಲೆಕ್ಟೊರಲ್ ಬಾಂಡ್ ವಿತರಿಸಲಾಗುತ್ತದೆ. ಈ ಬಾಂಡ್ 15 ದಿನಗಳ ಕಾಲಾವಧಿ ಹೊಂದಿದ್ದು, ಅದರಲ್ಲಿ ದೇಣಿಗೆ ನೀಡಿದವರ ವಿವರ ಇರುವುದಿಲ್ಲ. ರಾಜಕೀಯ ದೇಣಿಗೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮ ಅನುಸರಿಸಲಾಗಿದೆ ಎಂದು ಸರ್ಕಾರ ಹೇಳಿತ್ತು.
ಆದರೆ ಅಂತಹ ಬಾಂಡ್ಗಳ ಮೂಲಕ ದೇಣಿಗೆ ಸಂಗ್ರಹಿಸುವುದು ಅವ್ಯವಹಾರಗಳಿಗೆ ಕಾರಣವಾಗುತ್ತದೆ. ಇದರಿಂದ ದೇಣಿಗೆ ವಿವರಗಳು ಬಹಿರಂಗವಾಗುವುದಿಲ್ಲ ಎಂದು ವಿರೋಧಪಕ್ಷಗಳು ಆರೋಪಿಸಿದ್ದವು.

ಚುನಾವಣಾ ಆಯೋಗ ಕೂಡ ಎಲೆಕ್ಟೊರಲ್ ಬಾಂಡ್ಗಳ ವಿತರಣೆಗೆ ತನ್ನ ಆಕ್ಷೇಪವಿಲ್ಲ ಎಂದು ತಿಳಿಸಿದೆ. ಯಾವುದೇ ರಾಜಕೀಯ ಪಕ್ಷಗಲು ಎಲೆಕ್ಟೊರಲ್ ಬಾಂಡ್ಗಳ ಬಗ್ಗೆ ಉಲ್ಲೇಖಿಸಿ ಯಾವುದೇ ಸಾರ್ವಜನಿಕ ಸಭೆಯಲ್ಲಿ ಅಥವಾ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಪತ್ರಿಕೆ ಅಥವಾ ಸಾರ್ವಜನಿಕರಿಗೆ ಹೇಳಿಕೆಗಳನ್ನು ನೀಡಬಾರದು ಎಂದು ಹಣಕಾಸು ಸಚಿವಾಲಯ ಸೂಚನೆ ನೀಡಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ನ 29 ನಿರ್ದಿಷ್ಟ ಶಾಖೆಗಳಲ್ಲಿ ಎಲೆಕ್ಟೊರಲ್ ಬಾಂಡ್ಗಳನ್ನು ಮಾರಾಟ ಮಾಡಲಾಗುತ್ತದೆ.
ಏಪ್ರಿಲ್ 1ರಿಂದ ಹೊಸ ಎಲೆಕ್ಟೊರಲ್ ಬಾಂಡ್ಗಳನ್ನು ವಿತರಿಸಬಹುದು ಎಂದು ಸುಪ್ರೀಂಕೋರ್ಟ್ ಕಳೆದ ಶುಕ್ರವಾರ ತೀರ್ಪು ನೀಡಿತ್ತು, ಎಲೆಕ್ಟೊರಲ್ ಬಾಂಡ್ಗಳಿಲ್ಲದೆ ಹೋದರೆ ರಾಜಕೀಯ ಪಕ್ಷಗಳು ನಗದು ಹಣವನ್ನು ಭಾರಿ ಪ್ರಮಾಣದಲ್ಲಿ ಬಳಸುವ ಸಾಧ್ಯತೆ ಇರುವುದರಿಂದ ಅವುಗಳಿಗೆ ತಾನು ಅನುಮೋದನೆ ನೀಡಿರುವುದಾಗಿ ಚುನಾವಣಾ ಆಯೋಗ ವಾದ ಮಂಡಿಸಿತ್ತು. ಅದನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.
ಚುನಾವಣೆ ಮತ್ತು ರಾಜಕೀಯ ಸುಧಾರಣೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆ ದಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್), ಏಪ್ರಿಲ್ 1 ರಿಂದ ಏಪ್ರಿಲ್ 10ರ ನಡುವೆ ನಿಗದಿಪಡಿಸಿರುವ ಎಲೆಕ್ಟೊರಲ್ ಬಾಂಡ್ಗಳ ಮಾರಾಟಕ್ಕೆ ಮಧ್ಯಂತರ ತಡೆ ನೀಡುವಂತೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿತ್ತು.
ರಾಜಕೀಯ ಪಕ್ಷಗಳಿಗೆ ಬರುವ ಅನುದಾನ ಮತ್ತು ಅವುಗಳ ಖಾತೆಗಳ ಪಾರದರ್ಶಕತೆಗೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗೆಹರಿಯುವವರೆಗೂ ಬಾಂಡ್ಗಳ ಮಾರಾಟಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೆರಿಗಳ ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳ ಬೊಕ್ಕಸಕ್ಕೆ ಪ್ರಮುಖ ಕಂಪೆನಿಗಳು ಲಂಚದ ರೂಪದಲ್ಲಿ ಹಣ ತುಂಬಿಸಬಹುದು ಎಂದು ಎಡಿಆರ್ ಅನುಮಾನ ವ್ಯಕ್ತಪಡಿಸಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications