ಐಎಎಸ್, ಐಪಿಎಸ್ ಅಧಿಕಾರಿಗಳು ಗಿಫ್ಟ್ ಕಂಡ್ರೆ ಬೆಚ್ಚುವರಯ್ಯ!
ನವದೆಹಲಿ, ಏ.19: ದೇಶದ ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳು ಇನ್ಮುಂದೆ ನೆಂಟರಿಷ್ಟರಿಂದ ಗಿಫ್ಟ್ ತೆಗೆದುಕೊಳ್ಳಬೇಕಾದರೆ ಹಿಂದು ಮುಂದು ನೋಡಬೇಕಾಗುತ್ತದೆ. 5 ಸಾವಿರ ರು.ಗೂ ಅಧಿಕ ಮೊತ್ತದ ಗಿಫ್ಟ್ ಪಡೆಯಬೇಕಾದರೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗುತ್ತದೆ.
ಉಡುಗೊರೆ ಪಡೆಯಬೇಕಾದರೂ ಸರ್ಕಾರದ ಪರ್ಮಿಷನ್ ಪಡೆಯಬೇಕಾಗುವ ನಿಯಮವೊಂದಕ್ಕೆ ಇತ್ತೀಚೀಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಭಾರತೀಯ ಆಡಳಿತ ಸೇವೆಗಳ ನಿಯಮ 2015ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ.
ಹೊಸ ನಿಯಮದ ಪ್ರಕಾರ ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಗ್ರೇಡ್ ಅಧಿಕಾರಿಗಳು ಐದು ಸಾವಿರ ಮೌಲ್ಯದ ಉಡುಗೊರೆಯನ್ನು ಪಡೆಯುವ ಮುನ್ನ ಕೇಂದ್ರದಿಂದ ಒಪ್ಪಿಗೆ ಪಡೆದುಕೊಂಡೇ ಸ್ವೀಕರಿಸಬೇಕು. ಇಲ್ಲದಿದ್ದರೆ ಶಿಕ್ಷಾರ್ಹ ಅಪರಾಧವಾಗುತ್ತದೆ.

ಇದುವರೆವಿಗೂ ಅಧಿಕಾರಿಗಳು 25 ಸಾವಿರ ರು ಮೌಲ್ಯದ ಉಡುಗೊರೆಗಳನ್ನು ಪಡೆಯಲು ಕಾನೂನಿನಲ್ಲಿ ಅವಕಾಶವಿತ್ತು.ಈಗ ಎನ್ ಡಿಎ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿದ್ದು, 5 ಸಾವಿರದವರೆಗೆ ಮಾತ್ರ ಉಡುಗೊರೆ ಪಡೆಯಲು ಅವಕಾಶವಿದೆ.
ಸರ್ಕಾರದಿಂದ ಅನುಮತಿ ಪಡೆಯದೆ ಉಡುಗೊರೆ ಸ್ವೀಕರಿಸದೆ ಅದನ್ನು ಭ್ರಷ್ಟಾಚಾರವೆಂದು ಪರಿಗಣಿಸಿ ವಿಚಾರಣೆ ನಡೆಸಲು ಅನುಮತಿ ನೀಡುವ ಅವಕಾಶ ನಿಯಮಾವಳಿಯಲ್ಲಿದೆ. ವಿವಾಹ, ವಾರ್ಷಿಕೋತ್ಸವ, ಧಾರ್ಮಿಕ ಕಾರ್ಯಕ್ರಮಗಳು, ಹುಟ್ಟುಹಬ್ಬ ಸೇರಿದಂತೆ ಮತ್ತಿತರ ಯಾವುದೇ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಸ್ವೀಕರಿಸದಂತೆ ಸೂಚನೆ ನೀಡಲಾಗಿದೆ.
ಮೂರು ಭಾರತೀಯ ಆಡಳಿತ ಸೇವೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅಧಿಕಾರಿಗಳು ಸಚಿವರ ಗಮನಕ್ಕೆ ಉಡುಗೊರೆ ಪಡೆಯುವ ಮುನ್ನ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ದೇಶದಲ್ಲಿ ಸುಮಾರು 4,802 ಐಎಎಸ್, 3,798 ಐಪಿಎಸ್ ಹಾಗೂ 2,668 ಐಎಫ್ ಒಎಸ್ ಅಧಿಕಾರಿಗಳು ದೇಶದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. (ಪಿಟಿಐ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications