ಇನ್ನು ಮುಂದೆ ಸೇನಾ ಕ್ಯಾಂಟೀನ್ಗಳಲ್ಲಿ ಕಡಿಮೆ ದರದ ವಿದೇಶಿ ಮದ್ಯ ಸಿಗೊಲ್ಲ
ನವದೆಹಲಿ, ಅಕ್ಟೋಬರ್ 24: ಸ್ವದೇಶಿ ಅಥವಾ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಉತ್ಪನ್ನಗಳನ್ನು ಪ್ರಚಾರ ಮಾಡುವ ಉದ್ದೇಶದಿಂದ ರಕ್ಷಣಾ ಸಿಬ್ಬಂದಿಯ ಕ್ಯಾಂಟೀನ್ ಸ್ಟೋರ್ಸ್ ಇಲಾಖೆಯಲ್ಲಿ (ಸಿಎಸ್ಡಿ) ನೇರ ಆಮದಾದ ಎಲ್ಲ ವಸ್ತುಗಳ ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಿಎಸ್ಡಿಯು ಸಬ್ಸಿಡಿ ದರದಲ್ಲಿ ಸರಕುಗಳು ದೊರಕುವ ಸೇನಾ ಕ್ಯಾಂಟೀನ್ಗಳನ್ನು ನಡೆಸುತ್ತದೆ.
ಬೇರೆ ದೇಶಗಳಿಂದ ಭಾರತಕ್ಕೆ ನೇರವಾಗಿ ಆಮದು ಮಾಡಿಕೊಳ್ಳಲಾದ ಅಂದರೆ, ಉತ್ಪನ್ನ ತಯಾರಿಸಿದ ಸಂಸ್ಥೆ ಅದನ್ನು ಮಾರಾಟ ಅಥವಾ ಹಂಚಿಕೆ ಮಾಡುವ ಮುನ್ನವೇ ತರಿಸಿಕೊಂಡ ವಸ್ತುಗಳು ಸೇನಾ ಕ್ಯಾಂಟೀನ್ನಲ್ಲಿ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ. ಅವುಗಳಲ್ಲಿ ಪ್ರಮುಖವಾಗಿ ಮದ್ಯದ ಉತ್ಪನ್ನಗಳು ಸೇರಿವೆ. ಉದಾಹರಣೆಗೆ ಸ್ಕಾಟ್ಲೆಂಡ್ನಿಂದ ಆಮದು ಮಾಡಿಕೊಳ್ಳಲಾಗುವ ಸ್ಕಾಚ್ ವಿಸ್ಕಿ ಇನ್ನು ಮುಂದೆ ಸಿಎಸ್ಡಿಗಳಲ್ಲಿ ಲಭ್ಯವಾಗುವುದಿಲ್ಲ. ಆದರೆ ವಿದೇಶ ಪದಾರ್ಥಗಳನ್ನು ಒಳಗೊಂಡ, ಭಾರತದಲ್ಲಿ ತಯಾರಾದ ಯಾವುದೇ ಮದ್ಯ ಲಭ್ಯವಾಗಲಿದೆ.
ವಿದೇಶಿ ಉತ್ಪನ್ನಗಳ ಬಳಕೆಯನ್ನು ಆದಷ್ಟು ತಗ್ಗಿಸಿ ಆತ್ಮನಿರ್ಭರ ಭಾರತವನ್ನು ಸೃಷ್ಟಿಸುವ ಸರ್ಕಾರದ ಪ್ರಯತ್ನದ ಮಧ್ಯೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಎಸ್ಡಿ ಮಳಿಗೆಗಳಲ್ಲಿ ಚೀನಾದಿಂದ ಬಲ್ಕ್ನಲ್ಲಿ ಆಮದು ಮಾಡಿಕೊಳ್ಳಲಾಗುವ ವಸ್ತುಗಳೇ ಹೆಚ್ಚಿದ್ದವು. ಇವುಗಳಲ್ಲಿ ಎಲೆಕ್ಟ್ರಿಕ್ ಬ್ರಶ್ಗಳು, ಎಲೆಕ್ಟ್ರಿಕ್ ಕೆಟ್ಲ್, ಲೇಡೀಸ್ ಬ್ಯಾಗ್, ಸ್ಯಾಂಡ್ವಿಚ್ ಟೋಸ್ಟರ್ಗಳು ಮತ್ತು ಲ್ಯಾಪ್ಟಾಪ್ಗಳು ಸೇರಿದ್ದವು.

ಈ ಕ್ಯಾಂಟೀನ್ಗಳಲ್ಲಿ 5,500ಕ್ಕೂ ಅಧಿಕ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದ್ದು. ಅವುಗಳಲ್ಲಿ ಸುಮಾರು 420 ಉತ್ಪನ್ನಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಸೇನೆಯಲ್ಲಿರುವ ಸಿಬ್ಬಂದಿಯ ನಂಟು ಹೊಂದಿರುವ ಅನೇಕರು ಕಡಿಮೆ ದರದಲ್ಲಿ ಉತ್ಪನ್ನಗಳನ್ನು ಸೇನಾ ಕ್ಯಾಂಟೀನ್ ಮೂಲಕ ತರಿಸಿಕೊಳ್ಳುವುದು ಸಾಮಾನ್ಯ. ಅದರಲ್ಲಿಯೂ ವಿದೇಶಿ ಮದ್ಯ ಕಡಿಮೆ ಬೆಲೆಗೆ ಸಿಗುವುದರಿಂದ ಅವುಗಳಿಗೆ ಬೇಡಿಕೆ ಹೆಚ್ಚು.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications