5 ವರ್ಷಕ್ಕೊಮ್ಮೆ ಸರ್ಕಾರ ಬದಲಾಗುತ್ತದೆ, ನಾವು ಅವರನ್ನು ಅವಲಂಬಿಸಿರಬಾರದು: RSS
ನಾಗಪುರ, ಏಪ್ರಿಲ್ 16: ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುವ ಸಾಧ್ಯತೆಗಳಿರುತ್ತವೆ. ಸಾಮಾಜಿಕ ಸಂಘಟನೆಗಳು ನೆರವಿಗಾಗಿ ಅವರ ಮೇಲೆ ಅವಲಂಬಿತರಾಗಿರಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
ಸಂಘಟನೆಯ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಮನಮಹೋಪಾಧ್ಯಾಯ ವಿವಿ ಮಿರಾಶಿ ಅವರ 125ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಸಂಶೋಧನಾ ಸಂಘಟನೆಗಳು ಸಮಾಜದ ಕಲ್ಯಾಣಕ್ಕಾಗಿ ಕೆಲಸ ನಿರ್ವಹಿಸಲು ಪ್ರಬಲ ಮತ್ತು ಶಾಶ್ವತ ಮೂಲಗಳನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರದೊಂದಿಗೆ ಮಾತನಾಡಲು ಬಯಸುವವರು ಅದನ್ನು ಸಂಪರ್ಕಿಸಬೇಕು. ಆದರೆ, ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಅವಲಂಬಿಸಿರಬೇಕು ಎಂದು ನನಗೆ ಅನಿಸುವುದಿಲ್ಲ. ಏಕೆಂದರೆ ಸರ್ಕಾರಗಳು ಬದಲಾಗುತ್ತಿರುತ್ತವೆ. ಈ ಮುಂದೆ ರಾಜಮನೆತನದ ಸರ್ಕಾರಗಳು 30-50 ವರ್ಷಗಳಿಗೊಮ್ಮೆ ಬದಲಾಗುತ್ತಿದ್ದವು. ಈಗ ಪ್ರತಿ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಯಾವುದೇ ನಂಬಿಕೆ ಇರುವುದಿಲ್ಲ. ಅಲ್ಲಿಯವರೆಗೂ ಅದನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಇಂದು ವಿವಿಧ ಉದ್ದೇಶಗಳಿಗೆ ಜ್ಞಾನವನ್ನು ಸಂಪಾದಿಸಲಾಗುತ್ತಿದೆ. ಜ್ಞಾನ ಸಂಪಾದನೆಯು ಸ್ವ ಆಸಕ್ತಿ ಅಥವಾ ಸಮಾಜದ ಕಲ್ಯಾಣಕ್ಕಾಗಿ ಇರಬಹುದು. ಶಾಶ್ವತ ಬದುಕಿಗಾಗಿ ಜ್ಞಾನವೇ ಮಾರ್ಗ. ವಾಸ್ತವವಾಗಿ ಜ್ಞಾನವೆಂಬುದು ಶಾಶ್ವತ ಮತ್ತು ಎಲ್ಲರಿಗೂ ಶಾಶ್ವತತೆಯನ್ನು ಹಂಚುವುದಾಗಿದೆ ಎಂದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications