5 ವರ್ಷಕ್ಕೊಮ್ಮೆ ಸರ್ಕಾರ ಬದಲಾಗುತ್ತದೆ, ನಾವು ಅವರನ್ನು ಅವಲಂಬಿಸಿರಬಾರದು: RSS
ನಾಗಪುರ, ಏಪ್ರಿಲ್ 16: ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುವ ಸಾಧ್ಯತೆಗಳಿರುತ್ತವೆ. ಸಾಮಾಜಿಕ ಸಂಘಟನೆಗಳು ನೆರವಿಗಾಗಿ ಅವರ ಮೇಲೆ ಅವಲಂಬಿತರಾಗಿರಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
ಸಂಘಟನೆಯ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಮನಮಹೋಪಾಧ್ಯಾಯ ವಿವಿ ಮಿರಾಶಿ ಅವರ 125ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಸಂಶೋಧನಾ ಸಂಘಟನೆಗಳು ಸಮಾಜದ ಕಲ್ಯಾಣಕ್ಕಾಗಿ ಕೆಲಸ ನಿರ್ವಹಿಸಲು ಪ್ರಬಲ ಮತ್ತು ಶಾಶ್ವತ ಮೂಲಗಳನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರದೊಂದಿಗೆ ಮಾತನಾಡಲು ಬಯಸುವವರು ಅದನ್ನು ಸಂಪರ್ಕಿಸಬೇಕು. ಆದರೆ, ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಅವಲಂಬಿಸಿರಬೇಕು ಎಂದು ನನಗೆ ಅನಿಸುವುದಿಲ್ಲ. ಏಕೆಂದರೆ ಸರ್ಕಾರಗಳು ಬದಲಾಗುತ್ತಿರುತ್ತವೆ. ಈ ಮುಂದೆ ರಾಜಮನೆತನದ ಸರ್ಕಾರಗಳು 30-50 ವರ್ಷಗಳಿಗೊಮ್ಮೆ ಬದಲಾಗುತ್ತಿದ್ದವು. ಈಗ ಪ್ರತಿ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಯಾವುದೇ ನಂಬಿಕೆ ಇರುವುದಿಲ್ಲ. ಅಲ್ಲಿಯವರೆಗೂ ಅದನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಇಂದು ವಿವಿಧ ಉದ್ದೇಶಗಳಿಗೆ ಜ್ಞಾನವನ್ನು ಸಂಪಾದಿಸಲಾಗುತ್ತಿದೆ. ಜ್ಞಾನ ಸಂಪಾದನೆಯು ಸ್ವ ಆಸಕ್ತಿ ಅಥವಾ ಸಮಾಜದ ಕಲ್ಯಾಣಕ್ಕಾಗಿ ಇರಬಹುದು. ಶಾಶ್ವತ ಬದುಕಿಗಾಗಿ ಜ್ಞಾನವೇ ಮಾರ್ಗ. ವಾಸ್ತವವಾಗಿ ಜ್ಞಾನವೆಂಬುದು ಶಾಶ್ವತ ಮತ್ತು ಎಲ್ಲರಿಗೂ ಶಾಶ್ವತತೆಯನ್ನು ಹಂಚುವುದಾಗಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications