ಶೀಘ್ರ ವಿಜಯ್ ಮಲ್ಯ ಆಸ್ತಿ ಜಪ್ತಿ? ಬಜೆಟ್ ನಲ್ಲಿ ಜೇಟ್ಲಿ ಸುಳಿವು
ತೆರಿಗೆ, ಬ್ಯಾಂಕ್ ಸಾಲ ಮತ್ತಿತರ ವಿಚಾರಗಳಲ್ಲಿ ಅಪಾರ ಪ್ರಮಾಣದ ವಂಚನೆ ನಡೆಸಿ ತಲೆಮರೆಸಿಕೊಂಡವರ ವಿರುದ್ಧ ಕಾನೂನು ರೂಪಿಸುವ ಇರಾದೆ ವ್ಯಕ್ತಪಡಿಸಿದ ಕೇಂದ್ರ ಹಣಕಾಸು ಸಚಿವರು.
ನವದೆಹಲಿ, ಫೆಬ್ರವರಿ 1: ಭಾರತ ಸರ್ಕಾರಕ್ಕೆ ಮಣ್ಣೆರಚಿ ದೇಶ ಬಿಟ್ಟು ಓಡಿ ಹೋಗುವ ತೆರಿಗೆ ವಂಚಕರು, ಸಾಲಗಾರರ ವಿರುದ್ಧ ಸಮರ ಘೋಷಿಸಿರುವ ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿ, ದೇಶ ಬಿಟ್ಟು ಪರಾರಿಯಾದ ವಂಚಕರಿಗೆ ಸಂಬಂಧಪಟ್ಟ ದೇಶದಲ್ಲಿನ ಸಮಸ್ತ ಆಸ್ತಿಯನ್ನೂ ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳುವ ವಿಶೇಷ ಕಾನೂನನ್ನು ರೂಪಿಸುವುದಾಗಿ ತಿಳಿಸಿದ್ದಾರೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
ಬುಧವಾರ ಲೋಕಸಭೆಯಲ್ಲಿ 2017-18ರ ಬಜೆಟ್ ಮಂಡನೆ ವೇಳೆ ವಿಜಯ್ ಮಲ್ಯ ಅವರ ಹೆಸರನ್ನೇಳದೇ ಈ ವಿಚಾರ ಪ್ರಸ್ತಾಪಿಸಿದ ಅವರು, ಇತ್ತೀಚೆಗೆ, ದೇಶಕ್ಕೆ ಪಂಗನಾಮ ಹಾಕಿ ವಿದೇಶಿಗಳಿಗೆ ತೆರಳಿ ಅಲ್ಲೇ ನೆಲೆಸುವ ಮೂಲಕ ಕಾನೂನಿನ ಬಲೆಗೆ ಸಿಗದೇ ಇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂಥವರಿಗೆ ಲಗಾಮು ಹಾಕಲು ಸರ್ಕಾರ ನಿರ್ಧರಿಸಿದೆ.[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]

ಹಾಗಾಗಿ, ಶೀಘ್ರದಲ್ಲೇ ಬ್ಯಾಂಕುಗಳಿಗೆ, ಸರ್ಕಾರಕ್ಕೆ ತೆರಿಗೆ, ಸಾಲ ಮುಂತಾದ ವಿಚಾರಗಳಲ್ಲಿ ವಂಚಿಸಿ ದೇಶ ಬಿಟ್ಟು ಪರಾರಿಯಾಗುವ ಜನರಿಗೆ ಸಂಬಂಧಪಟ್ಟ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕುವಂಥ ಕಟ್ಟುನಿಟ್ಟಿನ ಕಾನೂನನ್ನು ರೂಪಿಸಲಾಗುವುದು ಎಂದು ತಿಳಿಸಿದರು.[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications