ಹೊಸ ಸಿಮ್ ಕಾರ್ಡ್ ಖರೀದಿದಾರರೇ ಎಚ್ಚರ! ಸರ್ಕಾರದಿಂದ ಹೊಸ ನಿಯಮ ಜಾರಿ; ಬಿಳಲಿದೆ 10 ಲಕ್ಷ ದಂಡ!?
ದೆಹಲಿ, ಸೆಪ್ಟೆಂಬರ್ 02: ದಿನದಿಂದ ದಿನಕ್ಕೆ ಮೊಬೈಲ್ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಹೊಸ ಸಿಮ್ ಕಾರ್ಡ್ ಖರೀದಿದಾರರು ಎಚ್ಚರಿಕೆವಹಿಸಬೇಕಾಗಿದೆ. ಯಾಕೆಂದರೆ, ಈಗ ಸರ್ಕಾರ ಸಿಮ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಹೊರಡಿಸಿದೆ.
ಹೌದು, ಹಲವು ಜನರು ನಕಲಿ ಸಿಮ್ ಕಾರ್ಡ್ಗಳನ್ನು ಖರೀದಿಸುವ ಮೂಲಕ ಅಪರಾಧಗಳನ್ನು ಸಹ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಇದೀಗ ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳುವ ಮೂಲಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇದರ ಅಡಿಯಲ್ಲಿ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಬಹುದು. 10 ಲಕ್ಷ ದಂಡ ವಿಧಿಸಬಹುದಾದ ಪರಿಸ್ಥಿತಿ ಏನಾಗಬಹುದು ಎಂಬುದನ್ನ ನಾವು ನಿಮಗೆ ತಿಳಿಸುತ್ತೇವೆ.

ಹೊಸ ನಿಯಮಗಳ ಪ್ರಕಾರ, ನೋಂದಾಯಿಸದ ಮಾರಾಟಗಾರರ ಮೂಲಕ ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡಿದರೆ ಟೆಲಿಕಾಂ ಕಂಪನಿಗಳಿಗೆ ರೂ 10 ಲಕ್ಷ ದಂಡ ವಿಧಿಸಲಾಗುತ್ತದೆ. ಈ ಬಗ್ಗೆ ದೂರಸಂಪರ್ಕ ಇಲಾಖೆ ಗುರುವಾರ ಸುತ್ತೋಲೆಯಲ್ಲಿ ಈ ಮಾಹಿತಿ ನೀಡಿದೆ. ಸಿಮ್ ಕಾರ್ಡ್ಗಳ ಮೋಸದ ಮಾರಾಟವನ್ನು ತಡೆಯಲು ಮಾಡಲಾದ ಹೊಸ ನಿಯಮಗಳು ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ. ಟೆಲಿಕಾಂ ಕಂಪನಿಗಳು ಸೆಪ್ಟೆಂಬರ್ 30 ರ ಮೊದಲು ತಮ್ಮ ಎಲ್ಲಾ ಮಾರಾಟ ಕೇಂದ್ರಗಳನ್ನು (ಪಿಒಎಸ್) ನೋಂದಾಯಿಸಿಕೊಳ್ಳಬೇಕಾಗಿದೆ.
ನಕಲಿ ಸಿಮ್ ಕಾರ್ಡ್ ಮೂಲಕ ಅಪರಾಧ ಎಸಗಲು ಜನರಿಗೆ ಅವಕಾಶ ಸಿಗುತ್ತದೆ. ಇದನ್ನು ತಡೆಯಲು ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ಸುತ್ತೋಲೆಯ ಪ್ರಕಾರ, ಪರವಾನಗಿದಾರರು ಸೆಪ್ಟೆಂಬರ್ 30 ರ ನಂತರ ಯಾವುದೇ ಹೊಸ ಪಿಒಎಸ್ ನೋಂದಣಿ ಇಲ್ಲದೆ ಗ್ರಾಹಕರ ನೋಂದಣಿಗೆ ಅವಕಾಶ ನೀಡಿದರೆ, ಸಂಬಂಧಪಟ್ಟ ಪರವಾನಗಿ ಸೇವಾ ಪ್ರದೇಶವು ಪ್ರತಿ ಪರವಾನಗಿದಾರರಿಗೆ ಪ್ರತಿ ಪಿಒಎಸ್ಗೆ 10 ಲಕ್ಷ ರೂಪಾಯಿ ದಂಡವನ್ನು ವಿಧಿಸುತ್ತದೆ. ನೋಂದಣಿಯಾಗದ ಮಾರಾಟ ಕೇಂದ್ರಗಳ ಮೂಲಕ ಸಕ್ರಿಯಗೊಳಿಸಲಾದ ಎಲ್ಲಾ ಮೊಬೈಲ್ ಸಂಪರ್ಕಗಳನ್ನು ಸಹ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಮರು ಪರಿಶೀಲಿಸಲಾಗುತ್ತದೆ.
ಇನ್ನು ಅಸ್ತಿತ್ವದಲ್ಲಿರುವ ಎಲ್ಲಾ ಸಿಮ್ ಮಾರಾಟ ಕೇಂದ್ರಗಳು ದಾಖಲೆಗಳನ್ನು ಸಲ್ಲಿಸಬೇಕು ಮತ್ತು ಸೆಪ್ಟೆಂಬರ್ ಅಂತ್ಯದ ಮೊದಲು ನೋಂದಾಯಿಸಿಕೊಳ್ಳಬೇಕು. ರೀಚಾರ್ಜ್ / ಬಿಲ್ಲಿಂಗ್ ಚಟುವಟಿಕೆಗಳಿಗೆ ಮಾತ್ರ ನೇಮಕಗೊಂಡ PoS ನ ನೋಂದಣಿ ಅಗತ್ಯವಿರುವುದಿಲ್ಲ. ನೋಂದಣಿಗಾಗಿ ಚಿಲ್ಲರೆ ವ್ಯಾಪಾರಿಯು ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಗುರುತಿನ ಸಂಖ್ಯೆ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಅಥವಾ ಪಾಸ್ಪೋರ್ಟ್, PAN, ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಪ್ರಮಾಣಪತ್ರವನ್ನು ಒದಗಿಸಬೇಕಾಗುತ್ತದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications