ಹೊಸ ಸಿಮ್ ಕಾರ್ಡ್ ಖರೀದಿದಾರರೇ ಎಚ್ಚರ! ಸರ್ಕಾರದಿಂದ ಹೊಸ ನಿಯಮ ಜಾರಿ; ಬಿಳಲಿದೆ 10 ಲಕ್ಷ ದಂಡ!?
ದೆಹಲಿ, ಸೆಪ್ಟೆಂಬರ್ 02: ದಿನದಿಂದ ದಿನಕ್ಕೆ ಮೊಬೈಲ್ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಹೊಸ ಸಿಮ್ ಕಾರ್ಡ್ ಖರೀದಿದಾರರು ಎಚ್ಚರಿಕೆವಹಿಸಬೇಕಾಗಿದೆ. ಯಾಕೆಂದರೆ, ಈಗ ಸರ್ಕಾರ ಸಿಮ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಹೊರಡಿಸಿದೆ.
ಹೌದು, ಹಲವು ಜನರು ನಕಲಿ ಸಿಮ್ ಕಾರ್ಡ್ಗಳನ್ನು ಖರೀದಿಸುವ ಮೂಲಕ ಅಪರಾಧಗಳನ್ನು ಸಹ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಇದೀಗ ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳುವ ಮೂಲಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇದರ ಅಡಿಯಲ್ಲಿ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಬಹುದು. 10 ಲಕ್ಷ ದಂಡ ವಿಧಿಸಬಹುದಾದ ಪರಿಸ್ಥಿತಿ ಏನಾಗಬಹುದು ಎಂಬುದನ್ನ ನಾವು ನಿಮಗೆ ತಿಳಿಸುತ್ತೇವೆ.

ಹೊಸ ನಿಯಮಗಳ ಪ್ರಕಾರ, ನೋಂದಾಯಿಸದ ಮಾರಾಟಗಾರರ ಮೂಲಕ ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡಿದರೆ ಟೆಲಿಕಾಂ ಕಂಪನಿಗಳಿಗೆ ರೂ 10 ಲಕ್ಷ ದಂಡ ವಿಧಿಸಲಾಗುತ್ತದೆ. ಈ ಬಗ್ಗೆ ದೂರಸಂಪರ್ಕ ಇಲಾಖೆ ಗುರುವಾರ ಸುತ್ತೋಲೆಯಲ್ಲಿ ಈ ಮಾಹಿತಿ ನೀಡಿದೆ. ಸಿಮ್ ಕಾರ್ಡ್ಗಳ ಮೋಸದ ಮಾರಾಟವನ್ನು ತಡೆಯಲು ಮಾಡಲಾದ ಹೊಸ ನಿಯಮಗಳು ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ. ಟೆಲಿಕಾಂ ಕಂಪನಿಗಳು ಸೆಪ್ಟೆಂಬರ್ 30 ರ ಮೊದಲು ತಮ್ಮ ಎಲ್ಲಾ ಮಾರಾಟ ಕೇಂದ್ರಗಳನ್ನು (ಪಿಒಎಸ್) ನೋಂದಾಯಿಸಿಕೊಳ್ಳಬೇಕಾಗಿದೆ.
ನಕಲಿ ಸಿಮ್ ಕಾರ್ಡ್ ಮೂಲಕ ಅಪರಾಧ ಎಸಗಲು ಜನರಿಗೆ ಅವಕಾಶ ಸಿಗುತ್ತದೆ. ಇದನ್ನು ತಡೆಯಲು ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ಸುತ್ತೋಲೆಯ ಪ್ರಕಾರ, ಪರವಾನಗಿದಾರರು ಸೆಪ್ಟೆಂಬರ್ 30 ರ ನಂತರ ಯಾವುದೇ ಹೊಸ ಪಿಒಎಸ್ ನೋಂದಣಿ ಇಲ್ಲದೆ ಗ್ರಾಹಕರ ನೋಂದಣಿಗೆ ಅವಕಾಶ ನೀಡಿದರೆ, ಸಂಬಂಧಪಟ್ಟ ಪರವಾನಗಿ ಸೇವಾ ಪ್ರದೇಶವು ಪ್ರತಿ ಪರವಾನಗಿದಾರರಿಗೆ ಪ್ರತಿ ಪಿಒಎಸ್ಗೆ 10 ಲಕ್ಷ ರೂಪಾಯಿ ದಂಡವನ್ನು ವಿಧಿಸುತ್ತದೆ. ನೋಂದಣಿಯಾಗದ ಮಾರಾಟ ಕೇಂದ್ರಗಳ ಮೂಲಕ ಸಕ್ರಿಯಗೊಳಿಸಲಾದ ಎಲ್ಲಾ ಮೊಬೈಲ್ ಸಂಪರ್ಕಗಳನ್ನು ಸಹ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಮರು ಪರಿಶೀಲಿಸಲಾಗುತ್ತದೆ.
ಇನ್ನು ಅಸ್ತಿತ್ವದಲ್ಲಿರುವ ಎಲ್ಲಾ ಸಿಮ್ ಮಾರಾಟ ಕೇಂದ್ರಗಳು ದಾಖಲೆಗಳನ್ನು ಸಲ್ಲಿಸಬೇಕು ಮತ್ತು ಸೆಪ್ಟೆಂಬರ್ ಅಂತ್ಯದ ಮೊದಲು ನೋಂದಾಯಿಸಿಕೊಳ್ಳಬೇಕು. ರೀಚಾರ್ಜ್ / ಬಿಲ್ಲಿಂಗ್ ಚಟುವಟಿಕೆಗಳಿಗೆ ಮಾತ್ರ ನೇಮಕಗೊಂಡ PoS ನ ನೋಂದಣಿ ಅಗತ್ಯವಿರುವುದಿಲ್ಲ. ನೋಂದಣಿಗಾಗಿ ಚಿಲ್ಲರೆ ವ್ಯಾಪಾರಿಯು ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಗುರುತಿನ ಸಂಖ್ಯೆ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಅಥವಾ ಪಾಸ್ಪೋರ್ಟ್, PAN, ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಪ್ರಮಾಣಪತ್ರವನ್ನು ಒದಗಿಸಬೇಕಾಗುತ್ತದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications