ಲೇಹ್ ಚೀನಾಕ್ಕೆ ಸೇರಿದೆ ಎಂದ ಟ್ವಿಟ್ಟರ್ಗೆ ಕಠಿಣ ಎಚ್ಚರಿಕೆ ನೀಡಿದ ಕೇಂದ್ರ
ನವದೆಹಲಿ, ಅಕ್ಟೋಬರ್ 22: ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ ವಿಚಾರದಲ್ಲಿ ಟ್ವಿಟ್ಟರ್ ಸಿಇಒ ಜಾಕ್ ಡೋರ್ಸಿ ಅವರಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಅಗೌರವ ತೋರಿಸುವ ಟ್ವಿಟ್ಟರ್ನ ಯಾವುದೇ ರೀತಿಯ ಪ್ರಯತ್ನಗಳನ್ನು ಭಾರತ ಒಪ್ಪುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
ಭಾರತದ ಪ್ರಜೆಗಳ ಭಾವನೆಯನ್ನು ಟ್ವಿಟ್ಟರ್ ಗೌರವಿಸಬೇಕು ಎಂದು ಸಲಹೆ ನೀಡಿರುವ ವಿದ್ಯುನ್ಮಾನ ಮತ್ತು ಐಟಿ ಸಚಿವಾಲಯದ ಕಾರ್ಯದರ್ಶಿ ಅಜಯ್ ಸಾವ್ನಿ, 'ನಕ್ಷೆಗಳ ಮೂಲಕವೂ ಪ್ರತಿಬಿಂಬಿಸುವ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಗೌರವಿಸುವ ಟ್ವಿಟ್ಟರ್ನ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ಒಪ್ಪುವಂತಹದ್ದಲ್ಲ. ಇದು ಕಾನೂನುಬಾಹಿರ ಕೂಡ' ಎಂದಿದ್ದಾರೆ.
ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಲೇಹ್ ಪ್ರದೇಶವು ರಿಪಬ್ಲಿಕ್ ಆಫ್ ಚೀನಾಕ್ಕೆ ಸೇರಿದ್ದು ಎಂದು ಟ್ವಿಟ್ಟರ್ ತನ್ನ ಸ್ಥಳ ಸೂಚಕದಲ್ಲಿ ತೋರಿಸಿರುವುದು ಟ್ವಿಟ್ಟರಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಮುಖ್ಯ ಕಚೇರಿ ಲೇಹ್ ಆಗಿದ್ದು, ಲಡಾಖ್ ಹಾಗೂ ಜಮ್ಮು ಮತ್ತು ಕಾಶ್ಮೀರಗಳು ಭಾರತದ ಅವಿಭಾಜ್ಯ ಹಾಗೂ ಬೇರ್ಪಡಿಸಲಾಗದ ಭಾಗಗಳಾಗಿವೆ. ಇಲ್ಲಿ ಭಾರತದ ಸಂವಿಧಾನ ಆಡಳಿತ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ಅಂತಹ ಪ್ರಯತ್ನಗಳು ಟ್ವಿಟ್ಟರ್ ಗೌರವಕ್ಕೆ ಹಾನಿ ಮಾಡುವುದರ ಜತೆಗೆ ಅದರ ತಟಸ್ಥತೆ ಹಾಗೂ ಮಧ್ಯಸ್ಥಿಕೆಯ ಬಗ್ಗೆ ಪ್ರಶ್ನೆ ಮೂಡಿಸುತ್ತದೆ ಎಂದಿರುವ ಅವರು, ಈ ರೀತಿ ತಪ್ಪು ಮರುಕಳಿಸದಂತೆ ಎಚ್ಚರವಹಿಸಲು ಕಠಿಣ ಎಚ್ಚರಿಕೆ ನೀಡಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications