ಲೇಹ್ ಚೀನಾಕ್ಕೆ ಸೇರಿದೆ ಎಂದ ಟ್ವಿಟ್ಟರ್ಗೆ ಕಠಿಣ ಎಚ್ಚರಿಕೆ ನೀಡಿದ ಕೇಂದ್ರ
ನವದೆಹಲಿ, ಅಕ್ಟೋಬರ್ 22: ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸಿದ ವಿಚಾರದಲ್ಲಿ ಟ್ವಿಟ್ಟರ್ ಸಿಇಒ ಜಾಕ್ ಡೋರ್ಸಿ ಅವರಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಅಗೌರವ ತೋರಿಸುವ ಟ್ವಿಟ್ಟರ್ನ ಯಾವುದೇ ರೀತಿಯ ಪ್ರಯತ್ನಗಳನ್ನು ಭಾರತ ಒಪ್ಪುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
ಭಾರತದ ಪ್ರಜೆಗಳ ಭಾವನೆಯನ್ನು ಟ್ವಿಟ್ಟರ್ ಗೌರವಿಸಬೇಕು ಎಂದು ಸಲಹೆ ನೀಡಿರುವ ವಿದ್ಯುನ್ಮಾನ ಮತ್ತು ಐಟಿ ಸಚಿವಾಲಯದ ಕಾರ್ಯದರ್ಶಿ ಅಜಯ್ ಸಾವ್ನಿ, 'ನಕ್ಷೆಗಳ ಮೂಲಕವೂ ಪ್ರತಿಬಿಂಬಿಸುವ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಅಗೌರವಿಸುವ ಟ್ವಿಟ್ಟರ್ನ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ಒಪ್ಪುವಂತಹದ್ದಲ್ಲ. ಇದು ಕಾನೂನುಬಾಹಿರ ಕೂಡ' ಎಂದಿದ್ದಾರೆ.
ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಲೇಹ್ ಪ್ರದೇಶವು ರಿಪಬ್ಲಿಕ್ ಆಫ್ ಚೀನಾಕ್ಕೆ ಸೇರಿದ್ದು ಎಂದು ಟ್ವಿಟ್ಟರ್ ತನ್ನ ಸ್ಥಳ ಸೂಚಕದಲ್ಲಿ ತೋರಿಸಿರುವುದು ಟ್ವಿಟ್ಟರಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಮುಖ್ಯ ಕಚೇರಿ ಲೇಹ್ ಆಗಿದ್ದು, ಲಡಾಖ್ ಹಾಗೂ ಜಮ್ಮು ಮತ್ತು ಕಾಶ್ಮೀರಗಳು ಭಾರತದ ಅವಿಭಾಜ್ಯ ಹಾಗೂ ಬೇರ್ಪಡಿಸಲಾಗದ ಭಾಗಗಳಾಗಿವೆ. ಇಲ್ಲಿ ಭಾರತದ ಸಂವಿಧಾನ ಆಡಳಿತ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ಯಾವುದೇ ಅಂತಹ ಪ್ರಯತ್ನಗಳು ಟ್ವಿಟ್ಟರ್ ಗೌರವಕ್ಕೆ ಹಾನಿ ಮಾಡುವುದರ ಜತೆಗೆ ಅದರ ತಟಸ್ಥತೆ ಹಾಗೂ ಮಧ್ಯಸ್ಥಿಕೆಯ ಬಗ್ಗೆ ಪ್ರಶ್ನೆ ಮೂಡಿಸುತ್ತದೆ ಎಂದಿರುವ ಅವರು, ಈ ರೀತಿ ತಪ್ಪು ಮರುಕಳಿಸದಂತೆ ಎಚ್ಚರವಹಿಸಲು ಕಠಿಣ ಎಚ್ಚರಿಕೆ ನೀಡಿದ್ದಾರೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications