ಆಗಸ್ಟ್ 15ಕ್ಕೆ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ ಪ್ರಕಟ?
ನವದೆಹಲಿ, ಆಗಸ್ಟ್ 15: ನಿಕೋಟಿನ್ ಸೇವನೆ ಮೇಲೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇ-ಸಿಗರೇಟ್ ಗಳನ್ನು ಡ್ರಗ್ಸ್ ಎಂದು ಪರಿಗಣಿಸಿದ್ದು, ಸಂಪೂರ್ಣ ನಿಷೇಧ ಹೇರಲು ಮುಂದಾಗಿರುವ ಮೋದಿ ಸರ್ಕಾರ, ಈಗ ಸಿಗರೇಟು ಬಿಡಿಯಾಗಿ ಮಾರಾಟದ ಮೇಲೆ ಸಂಪೂರ್ಣ ನಿರ್ಬಂಧ ಹೇರಲು ಮುಂದಾಗಿದ್ದು, ಆಗಸ್ಟ್15ರಂದು ಈ ಕುರಿತು ಅಧಿಕೃತ ಪ್ರಕಟಣೆಯನ್ನು ಪ್ರಧಾನಿ ಮೋದಿ ಅವರೇ ಹೊರಡಿಸುವ ಸಾಧ್ಯತೆಯಿದೆ.
Cigarettes and Other Tobacco Products Act (COTPA) ಸಿಗರೇಟು ಹಾಗೂ ಇತರ ತಂಬಾಕು ಉತ್ಪನ್ನ ಹಾಗೂ ಮಾರಾಟ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರಲು ಬಯಸಿದ್ದು, ಈ ಕುರಿತಂತೆ ಪ್ರಕ್ರಿಯೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಆರಂಭಿಸಿದೆ. ಬಿಡಿ ಬಿಡಿಯಾಗಿ ಒಂದೆರಡು ಸಿಗರೇಟು ಮಾರಾಟ ಮಾಡುವಂತಿಲ್ಲ, ಪ್ಯಾಕ್ ಬದಲು ಲೂಸ್ ಸಿಗರೇಟು ಮಾರಾಟದ ಮೇಲೆ ನಿಷೇಧ ಹೇರುವ ಬಗ್ಗೆ ಚಿಂತನೆ ನಡೆಯುತ್ತಿದೆ. ನಿಯಮ ಮೀರಿದರೆ ಭಾರಿ ದಂಡ ತೆರಬೇಕಾಗುತ್ತದೆ ಎಂಬ ತಿದ್ದುಪಡಿಯನ್ನು ತರಲಾಗುತ್ತಿದೆ.
ಹೊಗೆರಹಿತ ತಂಬಾಕು ಬಳಕೆ ಎಲ್ಲ ಪ್ರದೇಶಗಳಲ್ಲಿ ಇದ್ದರೂ, ಆಗ್ನೇಯ ಏಷ್ಯಾ ಪ್ರದೇಶದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ (301 ಮಿಲಿಯನ್) ಬಳಕೆದಾರರಿದ್ದು, ಇದು ಜಗತ್ತಿನ ಎಲ್ಲ ಬಳಕೆದಾರರ ಶೇ 82ರಷ್ಟಾಗಿದೆ.

ಪ್ರತಿ ವರ್ಷ ಜಗತ್ತಿನಲ್ಲಿ 7 ಮಿಲಿಯನ್ ಜನರು ತಂಬಾಕಿಗೆ ಬಲಿಯಾಗುತ್ತಿದ್ದಾರೆ. 2000ರಲ್ಲಿ ತಂಬಾಕು ಬಳಸುವವರ ಸಂಖ್ಯೆ ಶೇ 27 ರಷ್ಟಿದ್ದರೆ 2016ರಲ್ಲಿ ಶೇ 20ರಷ್ಟಿತ್ತು ಎಂದು ಡಬ್ಲ್ಯೂಎಚ್ಒದ ಹೊಸ ಜಾಗತಿಕ ವರದಿ ತಿಳಿಸಿದೆ. ತಂಬಾಕು ಬಳಕೆ ಮತ್ತು ಪರೋಕ್ಷವಾಗಿ ಧೂಮಪಾನಿಗಳಾಗುವವರು ಹೃದಯಾಘಾತ, ಪಾರ್ಶ್ವವಾಯುವಿನಂತಹ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
WHO ಎಫ್ ಸಿಟಿಸಿ ಮಾರ್ಗಸೂಚಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎನ್ನಲಾಗಿದ್ದು, ಸಾರ್ವಜನಿಕವಾಗಿ ನಿರ್ಬಂಧಿತ ಪ್ರದೇಶದಲ್ಲಿ ಧೂಮಪಾನ ಮಾಡಿದ ವ್ಯಕ್ತಿಗೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ. ಈ ಹಿಂದೆ ತಂಬಾಕು ಉತ್ಪನ್ನ ಕಾಯ್ದೆಗೆ ಸಚಿವಾಲಯವು 2003 ರ ಸದನದಲ್ಲಿ ಹಲವಾರು ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿತ್ತು. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕರಡು ತಿದ್ದುಪಡಿ ಮಸೂದೆಯನ್ನು 2015 ರಲ್ಲಿ ಸಾರ್ವಜನಿಕಗೊಳಿಸಲಾಗಿತ್ತು. 2017ರಲ್ಲಿ ಹಳೆ ಮಸೂದೆಯನ್ನು ಸಂಪೂರ್ಣ ತಿದ್ದುಪಡಿ ಮಾಡಿ, ಕರಡು ನಿಬಂಧನೆಗಳನ್ನು ಮರುಪರಿಶೀಲಿಸಲು ಮತ್ತು ಉತ್ತಮಗೊಳಿಸಲು ಸರ್ಕಾರ ಮುಂದಾಯಿತು. ಈ ಮುಂಚೆ 1000 ರು ದಂಡ ವಿಧಿಸಲಾಗುತ್ತಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications