ವಿಮಾನಯಾನಿಗಳಿಗೆ 10 ದಿನಗಳಲ್ಲಿ ಶುಭ ಸುದ್ದಿ ಸಿಗಲಿದೆ
ನವದೆಹಲಿ, ಆಗಸ್ಟ್ 25: ಭಾರತದ ಆಗಸದಲ್ಲಿ ಪ್ರಯಾಣಿಸುವ ವಿಮಾನಯಾನಿಗಳಿಗೆ 'ಹತ್ತು ದಿನಗಳಲ್ಲಿ ಶುಭ ಸುದ್ದಿ' ಸಿಗಲಿದೆ ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಆರ್ ಎನ್ ಚೌಬೇ ಘೋಷಿಸಿದ್ದಾರೆ.
ಭಾರತದ ವಾಯುಪ್ರದೇಶದಲ್ಲಿ ಹಾರಾಟದಲ್ಲಿರುವ ವೇಳೆ ಪ್ರಯಾಣಿಕರು ವಿಮಾನದೊಳಗೆ ವೈ-ಫೈ ಬಳಸಲು ಅವಕಾಶ ಇನ್ಮುಂದೆ ಸಿಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಕೆಲ ದಿನಗಳಲ್ಲೇ ಆದೇಶ ಪ್ರಕಟವಾಗಲಿದೆ ಎಂದು ಚೌಬೇ ಅವರು ಬುಧವಾರ ಹೇಳಿದರು.[ತುಂಡುಡುಗೆ ತೊಟ್ಟಿದ್ದಕ್ಕೆ ವಿಮಾನಕ್ಕೆ 'ನೋ' ಎಂಟ್ರಿ]

ಸದ್ಯ ಭಾರತದ ವಾಯುಪ್ರದೇಶದಲ್ಲಿ ವಿಮಾನ ಹಾರಾಟ ಸಂದರ್ಭದಲ್ಲಿ ಇಂಟರ್ನೆಟ್ ಬಳಕೆ ಸಾಧ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸಿ ಕೂಡಾ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಮೂಲಕ ಇಂಟರ್ನೆಟ್ ಬಳಕೆ ಮಾಡಲು ಸಾಧ್ಯವಾಗುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.[ಇನ್ಮುಂದೆ ಚೆಕ್ ಇನ್ ಬ್ಯಾಗೇಜ್ ನಿಮ್ಮ ಕೈ ಕಚ್ಚಲ್ಲ]
ಈ ಮೂಲಕ ವಾಯ್ಸ್ ಕಾಲ್ ಮಾಡಲು ಅಥವಾ ಸ್ವೀಕರಿಸಲು ಕೂಡಾ ಸಾಧ್ಯವಾಗಲಿದೆ. ಟೆಲಿಕಾಂ ಇಲಾಖೆ ಕಾರ್ಯದರ್ಶಿಗಳು ಈ ಬಗ್ಗೆ ಗಮನ ಹರಿಸಿದ್ದು, ಕ್ಯಾಬಿನೆಟ್ ಅನುಮತಿ ಇಲ್ಲದೆ ವ್ಯವಸ್ಥೆ ಜಾರಿಗೊಳಿಸಬಹುದಾಗಿದೆ ಎಂದು ಚೌಬೇ ಹೇಳಿದರು. ಏರ್ ಪ್ಯಾಸೆಂಜರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(ಎಪಿಎಐ) ದ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಈ ವಿಷಯ ತಿಳಿಸಿದರು.[ಕರ್ನಾಟಕದ ವಿಮಾನ ನಿಲ್ದಾಣಗಳು ಫುಲ್ ನಷ್ಟದಲ್ಲಿದೆಯಂತೆ!](ಪಿಟಿಐ)
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications