ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಕೇಂದ್ರದ ಹೊಸ ಮಾರ್ಗಸೂಚಿ
ನವದೆಹಲಿ, ಫೆಬ್ರವರಿ.25: ಸಾಮಾಜಿಕ ಜಾಲತಾಣಗಳನ್ನು ನಕಲಿ ಸುದ್ದಿಗಳನ್ನು ಹರಡುವ ವೇದಿಕೆಗಳನ್ನಾಗಿ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಆತಂಕ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಸೋಷಿಯಲ್ ಮೀಡಿಯಾದ ದುರುಪಯೋಗ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಮಾರ್ಗಸೂಚಿಯನ್ನು ಜಾರಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಾಹಿತಿ ತಂತ್ರಜ್ಞಾನ ನಿಯಮ 2021ರ (ಮಧ್ಯವರ್ತಿಗಳಿಗೆ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾದ ಸಿದ್ಧಾಂತ) ಮೂಲಕ ಡಿಜಿಟಲ್ ಸುದ್ದಿ ಮಾಧ್ಯಮಗಳು, ಓಟಿಟಿ ಹಾಗೂ ಸಾಮಾಜಿಕ ಜಾಲತಾಣಗಳನ್ನು ಹೇಗೆ ನಿಯಂತ್ರಿಸುವುದು ಎಂಬುದನ್ನು ಸೂಚಿಸುತ್ತಿದೆ.
ದೇಶದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ, ತಪ್ಪು ಸಂದೇಶಗಳ ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ನಿಯಮ ಮತ್ತು ನಿಯಂತ್ರಕಗಳನ್ನು ರೂಪಿಸಿದೆ. ಈ ನಿಯಮಗಳಲ್ಲಿ ಏನೆಲ್ಲ ಉಲ್ಲೇಖವಾಗಿದೆ. ಹೊಸ ನಿಯಮಗಳಲ್ಲಿ ಅಡಕವಾಗಿರುವ ಪ್ರಮುಖ ಅಂಶಗಳ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಸಾಮಾಜಿಕ ಜಾಲತಾಣಗಳಿಗೆ ಸರ್ಕಾರದ ಹೊಸ ಮಾರ್ಗಸೂಚಿ:
- ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗಿದ್ದು, ಅವರು 24 ಗಂಟೆಗಳಲ್ಲಿ ದೂರುಗಳನ್ನು ದಾಖಲಿಸಬೇಕು.
- ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮತ್ತು ಸಂದೇಶಗಳ ಮೂಲವನ್ನು ನ್ಯಾಯಾಲಯ ಮತ್ತು ಸರ್ಕಾರಿ ಪ್ರಾಧಿಕಾರಗಳು ಪ್ರಶ್ನಿಸಿದಾಗ ಸಾಮಾಜಿಕ ಜಾಲತಾಣಗಳು ಅದನ್ನು ಬಹಿರಂಗಪಡಿಸುವುದು ಅಗತ್ಯವಾಗಿದೆ.
- ಇದು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ವಿದೇಶಗಳೊಂದಿಗಿನ ಬಾಂಧವ್ಯ, ರಾಜ್ಯದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅತ್ಯಾಚಾರ, ಲೈಂಗಿಕ ವಿಷಯ ಸೇರಿದಂತೆ ಇತ್ಯಾದಿ ವಿಚಾರಗಳಲ್ಲಿ ಸ್ಪಷ್ಟವಾಗಿರಬೇಕು.
- ಮಹಿಳೆಯರು - ವ್ಯಕ್ತಿಗಳ ಖಾಸಗಿ ಭಾಗಗಳು ಅಥವಾ ನಗ್ನತೆ ಅಥವಾ ಲೈಂಗಿಕ ಕ್ರಿಯೆ ಇತ್ಯಾದಿಗಳನ್ನು ಬಹಿರಂಗಪಡಿಸಿದರೆ, ದೂರು ನೀಡಿದ 24 ಗಂಟೆಗಳ ಒಳಗೆ ಅದನ್ನು ತೆಗೆದುಹಾಕಬೇಕಾಗುತ್ತದೆ. ಮಹಿಳೆಯರ ಘನತೆ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ನಿಯಮವನ್ನು ರೂಪಿಸಲಾಗಿದೆ.
- ಸಾಮಾಜಿಕ ಜಾಲತಾಣಗಳ ಮಧ್ಯವರ್ತಿಗಳಿಗೆ ಬಳಕೆದಾರರ ಸಂಖ್ಯೆಯನ್ನು ಆದಷ್ಟು ಬೇಗ ನೀಡುತ್ತೇವೆ. ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಹೊಂದಿರುವ ಅಧಿಕಾರಿಗಳಿಗೆ ದೂರು ನೀಡುವುದರ ಜೊತೆಗೆ ಮಧ್ಯವರ್ತಿ ಅಧಿಕಾರಿಯ ಹೆಸರನ್ನು ಉಲ್ಲೇಖಿಸಬೇಕು. 24 ಗಂಟೆಗಳಲ್ಲಿ ದೂರು ನೋಂದಾಯಿಸುವ ಅಧಿಕಾರಿ 15 ದಿನಗಳಲ್ಲಿ ಅವುಗಳ ವಿಲೇವಾರಿ ಮಾಡಬೇಕು.
- ಒಟಿಟಿ ಮತ್ತು ಡಿಜಿಟಲ್ ನ್ಯೂಸ್ ಮಾಧ್ಯಮಗಳು ತಮ್ಮ ವಿವರಗಳನ್ನು ಬಹಿರಂಗಪಡಿಸಬೇಕಾಗುತ್ತದೆ. ಸರ್ಕಾರವು ನೋಂದಣಿಯನ್ನು ಕಡ್ಡಾಯಗೊಳಿಸುತ್ತಿಲ್ಲ, ಆದರೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ.
- OTT ಗಾಗಿ ವಿಷಯ -13 ಪ್ಲಸ್, 16 ಜೊತೆಗೆ ಎ ವರ್ಗಗಳ ಸ್ವಯಂ-ವರ್ಗೀಕರಣ ಇರಬೇಕು. ಮಕ್ಕಳು ನೋಡುವುದಕ್ಕೆ ಆಗದ ರೀತಿಯಲ್ಲಿ ಯಾಂತ್ರಿಕ ವ್ಯವಸ್ಥೆಯನ್ನು ಪೋಷಕರು ಅನುಸರಣೆ ಮಾಡುವುದು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications