ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ನವದೆಹಲಿ, ಆಗಸ್ಟ್ 24 : ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಬುದ್ಧಿವಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸ್ಕಾಲರ್ಶಿಪ್ ನೀಡಲು ನಿರ್ಧರಿಸಿದೆ.
ಪ್ರತಿ ತಿಂಗಳು 1000 ಬುದ್ಧಿವಂತ ವಿದ್ಯಾರ್ಥಿಗಳಿಗೆ 75,000 ರು. ನೀಡುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಇದನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ 20,000 ಕೋಟಿ ರು. ಮೀಸಲಿರಿಸಿದೆ.

ದೇಶದಲ್ಲಿ ಸಂಶೋಧನಾ ಮೂಲ ಸೌಕರ್ಯ ನಿರ್ಮಾಣದ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.
ಅಷ್ಟೇ ಅಲ್ಲದೇ ವಿಶ್ವವಿದ್ಯಾಲಯಗಳ ಮೇಲೆ ಯುಜಿಸಿ ಮತ್ತು AICTE ನಿಯಂತ್ರಣವನ್ನೂ ಕಡಿಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಅವುಗಳ ನಿಯಂತ್ರಣ ಕಡಿಮೆಯಾದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸ್ವಾತಂತ್ರ್ಯ ಸಿಗಲಿದ್ದು, ಉತ್ತಮ ಶಿಕ್ಷಣ ಹಾಗೂ ಸಂಶೋಧನೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications