ಅವಧಿಗೆ ಮುನ್ನ PPF ಖಾತೆ ಮುಚ್ಚುವುದಕ್ಕೆ ಅವಕಾಶ - ಕೇಂದ್ರದ ಚಿಂತನೆ
ನವದೆಹಲಿ, ಫೆಬ್ರವರಿ 14: ಅವಧಿಗೂ ಮುನ್ನವೇ ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಖಾತೆಯನ್ನು ಮುಚ್ಚುವುದಕ್ಕೆ ಅವಕಾಶ ನೀಡಲು ಸರ್ಕಾರ ಚಿಂತೆ ನಡೆಸುತ್ತಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ತುರ್ತು ಸಂದರ್ಭಗಳಲ್ಲಿ ಅಂದರೆ ಆರೋಗ್ಯ ಸಮಸ್ಯೆ ಮತ್ತು ಉನ್ನತ ಶಿಕ್ಷಣದ ಅಗತ್ಯಕ್ಕೆ ಪಿಪಿಎಫ್ ಖಾತೆಯನ್ನು ಅವಧಿಗೂ ಮುನ್ನವೇ ಮುಚ್ಚುವುದಕ್ಕೆ ಅವಕಾಶ ನೀಡಲಾಗುವುದು ಎದು ಅದು ಹೇಳಿದೆ.
2018 ರ ಹಣಕಾಸು ಮಸೂದೆ ಪ್ರಕಾರ ಸಣ್ಣ ಉಳಿತಾಯ ಯೋಜನೆಯಲ್ಲೂ ಕೆಲವು ಮಹತ್ವದ ಬದಲಾವಣೆಗಳನ್ನು ತರಲು ನಿರ್ಧರಿಸಲಾಗಿದ್ದು, ಅಪ್ರಾಪ್ತರೂ ಉಳಿತಾಯ ಖಾತೆ ತೆರೆಯಲು ಅವಕಾಶ ನೀಡಲಾಗಿದೆ.

ಸಾರ್ವಜನಿಕ ಭವಿಷ್ಯ ನಿಧಿ, ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ, ಕಿಸಾನ್ ವಿಕಾಸ ಪತ್ರ ಮತ್ತು ಇನ್ನಿತರ ನಿರ್ದಿಷ್ಟ ಅವಧಿ ಠೇವಣಿ ಯೋಜನೆಗಳನ್ನು ಸರ್ಕಾರ ಒಂದೇ ಯೋಜನೆಯಡಿ ವಿಲೀನಗೊಳಿಸಲು ಚಿಂತಿಸಿದ ಹಿನ್ನೆಲೆಯಲ್ಲಿ ಪಿಪಿಎಫ್ ಖಾತೆಯಲ್ಲಿ ಈ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ.
ಈ ಮೊದಲ ನಿಯಮವೇನು?
ಈಗ ಇರುವ ಸಾರ್ವಜನಿಕ ಭವಿಷ್ಯ ನಿಧಿ ಕಾಯ್ದೆ ಪ್ರಕಾರ, 15 ವರ್ಷಗಳ ಪಿಪಿಎಫ್ ಖಾತೆಯಿಂದ ಏಳನೇ ವರ್ಷದಲ್ಲಿ ಮಾತ್ರ ಮೊದಲ ಬಾರಿ ಹಣ ಹಿಂದಕ್ಕೆ ಪಡೆಯಲು ಸಾಧ್ಯ. ಅದಕ್ಕೂ ಮತ್ತೆ ಒಂದಷ್ಟು ಶರತ್ತುಗಳಿವೆ. ಏಳನೇ ವರ್ಷದಲ್ಲಿ ಪಿಪಿಎಫ್ ಮೊತ್ತ ಹಿಂದಕ್ಕೆ ಪಡೆದರೆ, ನಾಲ್ಕನೇ ವರ್ಷದ ಕೊನೆಗೆ ಇದ್ದ ಮೊತ್ತದ ಅರ್ಧದಷ್ಟನ್ನು ಮಾತ್ರ ವಾಪಸ್ ಪಡೆಯಬಹುದು.
ತುರ್ತು ಸ್ಥಿತಿಯಲ್ಲಿ ಪಿಪಿಎಫ್ ಖಾತೆ ಮುಚ್ಚಲು ಅವಕಾಶವಿದೆಯಾದರೂ ಅದಕ್ಕೆ ದಂಡ ತೆರಬೇಕಾದ ಅನಿವಾರ್ಯತೆ ಇರುತ್ತದೆ. ರಾಷ್ಟ್ರೀಯ ಉಳಿತಾಯ ಪತ್ರದ ಹಣವನ್ನು ವಾಪಸ್ ಪಡೆಯುವ ನಿಯಮಗಳು ತುಂಬಾ ಕಠಿಣವಾಗಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications