ಪೆಗಾಸಸ್ ಬೇಹುಗಾರಿಕೆ: ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?
ನವದೆಹಲಿ, ಜುಲೈ 19: ಭಾರತದಲ್ಲಿ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ಬೇಹುಗಾರಿಗೆ ನಡೆಯುತ್ತಿದೆ ಎನ್ನುವ ಆರೋಪ ಆಧಾರರಹಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.
ಈಗಾಗಲೇ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ಯಾವುದೇ ಬೇಹುಗಾರಿಕೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಮಾಡಿದ ವರದಿಗಳೆಲ್ಲವೂ ಸುಳ್ಳು ಎಂದು ಹೇಳಿದೆ.
ಮಾತನಾಡುವುದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಭೂತ ಹಕ್ಕಾಗಿದೆ. ಮುಕ್ತ ಸಂವಾದದ ಸಂಸ್ಕೃತಿಕ ಒತ್ತು ನೀಡಿ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಸರ್ಕಾರ ಬದ್ಧವಾಗಿದೆ ಎಂದು ಹೇಳಲಾಗಿದೆ.

ಸರ್ಕಾರಿ ಸಂಸ್ಥೆಗಳಿಂದ ಯಾವುದೇ ಅನಧಿಕೃತ ಹಸ್ತಕ್ಷೇಪ ನಡೆದಿಲ್ಲ ಎಂದು ಹೇಳಲಾಗಿದ್ದು, ಸರ್ಕಾರಿ ಸಂಸ್ಥೆಗಳು ಪ್ರೋಟೊಕಾಲ್ಗಳನ್ನು ಹೊಂದಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಉನ್ನತ ಶ್ರೇಣಿಯ ಅಧಿಕಾರಿಗಳಿಂದ ಅನುಮೋದನೆ ಮತ್ತು ಮೇಲ್ವಿಚಾರಣೆ ಒಳಗೊಂಡ ಸ್ಪಷ್ಟವಾದಕಾರಣಗಳಿಗಾಗಿ ಮತ್ತು ರಾಷ್ಟ್ರೀಯಹಿತಾ ಸಕ್ತಿಗಾಗಿ ಮಾತ್ರ ಸರ್ಕಾರ ತಿಳಿಸಿದ್ದು, ಪ್ರತಿಬಂಧ, ಮೇಲ್ವಿಚಾರಣೆ ಪ್ರಕರಣಗಳನ್ನು ಪ್ರಾಧಿಕಾರ ಅಂಗೀಕರಿಸಿದೆ ಎಂದು ಹೇಳಲಾಗಿದೆ. ಪೆಗಾಸಸ್ ಸಾಫ್ಟ್ವೇರ್ ಬಳಸಿ ಹ್ಯಾಕ್ ಮಾಡಲಾಗಿದೆ ಎಂಬ ವರದಿಯನ್ನು ತಳ್ಳಿ ಹಾಕಿದ್ದು, ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ದಿ ಗಾರ್ಡಿಯನ್, ದಿ ವಾಷಿಂಗ್ಟನ್ ಪೋಸ್ಟ್ಮತ್ತು ಭಾರತದ ದಿ ವೈರ್ ಸೇರಿದಂತೆ 17 ಮಾಧ್ಯಮ ಸಂಸ್ಥೆಗಳ ಒಕ್ಕೂಟದಿಂದ ಪೆಗಾಸಸ್ ಸ್ಪೇವೇರ್ ಫೋನ್ ಹ್ಯಾಕಿಂಗ್ ಸಾಫ್ಟ್ವೇರ್ ವಿಶ್ವಾದ್ಯಂತ ಸಾವಿರಾರುಜನರನ್ನು ಗುರಿಯಾಗಿಸಲು ಬಳಕೆ ಮಾಡಲಾಗಿದೆ.
ಈ ಸಾಫ್ಟ್ವೇರ್ ಅನ್ನು ಇಸ್ರೇಲ್ ಮೂಲದ ಎನ್ಎಸ್ಒ ತಯಾರಿಸಿದ್ದು, ಇದನ್ನು ಸರ್ಕಾರಗಳಿಗೆ ಮಾತ್ರ ಸರಬರಾಜು ಮಾಡಲಾಗುತ್ತದೆ ಎಂದು ದೂರಲಾಗಿದೆ.
ಆದರೆ, ಇದನ್ನು ಅಲ್ಲಗಳೆದಿರುವ ಭಾರತ ಸರ್ಕಾರ, ನಿರ್ದಿಷ್ಟ ಜನರ ಮೇಲೆ ಸರ್ಕಾರದ ಯಾವುದೇ ಕಣ್ಗಾವಲು ಇಲ್ಲ, ಇಂತಹ ಹೇಳಿಕೆಗಳನ್ನು ದೃಢಪಡಿಸುವ ಆಧಾರಗಳಿಲ್ಲ ಎಂದು ಹೇಳಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications