ತ್ಯಾಜ್ಯ ನಿರ್ವಹಣೆ: 2 ಲಕ್ಷ ಗ್ರಾಮಗಳಿಗೆ 40,700 ಕೋಟಿ ರೂ. ಅನುದಾನ
ನವದೆಹಲಿ, ಜೂನ್ 08: ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ 2 ಲಕ್ಷ ಗ್ರಾಮಗಳಿಗೆ 40,700 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಘನ ತ್ಯಾಜ್ಯ ಹಾಗೂ ದ್ರವ ತ್ಯಾಜ್ಯಗಳನ್ನು ನಿರ್ವಹಣೆ ಮಾಡುವುದಕ್ಕಾಗಿ 2 ಲಕ್ಷಕ್ಕೂ ಹೆಚ್ಚಿನ ಗ್ರಾಮಗಳಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಅನುದಾನ ಒದಗಿಸಲಾಗಿದೆ.
"ಕೇಂದ್ರ ಸರ್ಕಾರ 14,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದರೆ, ರಾಜ್ಯಗಳು 8,300 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ, 12,730 ಕೋಟಿ ರೂಪಾಯಿ 15 ನೇ ಹಣಕಾಸು ಆಯೋಗದಿಂದ ಹಾಗೂ 4,100 ಕೋಟಿ ರೂಪಾಯಿ ಎಂಜಿಎನ್ ಆರ್ ಇಜಿಎಸ್ ನ ಮೂಲಕ ಸಂಗ್ರಹಿಸಲಾಗುತ್ತದೆ. ಉಳಿದ 1,500 ಕೋಟಿ ರೂಪಾಯಿಗಳನ್ನು ರಾಜ್ಯಗಳಿಂದಲೇ ಉದ್ಯಮದ ಮಾಡಲ್, ಸಿಎಸ್ ಆರ್ ಹಾಗೂ ಇನ್ನಿತರ ಯೋಜನೆಗಳಿಂದ ಸಂಗ್ರಹಿಸಲಾಗುತ್ತದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜಲ್ ಶಕ್ತಿ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ 14,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದರೆ, ರಾಜ್ಯಗಳು 8,300 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಉಳಿದ ಹಣ ಬೇರೆ ಮೂಲಗಳಿಂದ ಬರಲಿದೆ ಎಂದು ಹೇಳಿದೆ.
ಸ್ವಚ್ಛಭಾರತ್ ಮಿಷನ್ ಗ್ರಾಮೀಣ್ (ಎಸ್ ಬಿಎಂ-ಜಿ) ಎರಡನೇ ಹಂತದಲ್ಲಿ ಜಲ ಶಕ್ತಿ ಸಚಿವಾಲಯ 2 ಲಕ್ಷಕ್ಕೂ ಹೆಚ್ಚಿನ ಗ್ರಾಮಗಳಿಗೆ ತ್ಯಾಜ್ಯ ನಿರ್ವಹಣೆಗೆ ನೆರವು ನೀಡಲಿದ್ದು 2021-22 ನೇ ಸಾಲಿನಲ್ಲಿ 40,700 ಕೋಟಿ ಅನುದಾನ ಒದಗಿಸಲಿದೆ ಎಂದು ಸಚಿವಾಲಯ ಹೇಳಿದೆ.
ಎಸ್ ಡಬ್ಲ್ಯುಬಿ (ಜಿ) ಪ್ರಗತಿಯನ್ನು ಸೋಮವಾರದಂದು ಇಲಾಖೆಯ ರಾಜ್ಯ ಸಚಿವ ಲಾಲ್ ಕಠಾರಿಯಾ ಪರಿಶೀಲನೆ ನಡೆಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications