Government Employees: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್: ತುಟ್ಟಿಭತ್ಯೆ ಶೇ.2 ಹೆಚ್ಚಳ
ನವದೆಹಲಿ,ಮಾರ್ಚ್ 28: ಯುಗಾದಿ ಹಬ್ಬಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕೇಂದ್ರ ಸಚಿವ ಸಂಪುಟವು ತುಟ್ಟಿ ಭತ್ಯೆ DA ಶೇ.2 ಹೆಚ್ಚಳ ಮಾಡಲು ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಶೇ. 53 ರಿಂದ ಶೇ.55 ಕ್ಕೆ ಹೆಚ್ಚಿಸಿದೆ.
ಈ ಹೆಚ್ಚಳದೊಂದಿಗೆ, ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ 53% ರಿಂದ 55% ಕ್ಕೆ ಹೆಚ್ಚಾಗುತ್ತದೆ. 8ನೇ ವೇತನ ಆಯೋಗದ ಮೊದಲು ಹಣದುಬ್ಬರವನ್ನು ಕಡಿಮೆ ಮಾಡುವುದು ಮತ್ತು ಉದ್ಯೋಗಿಗಳ ವೇತನವನ್ನು ಸುಧಾರಿಸುವುದು ಈ ಹೆಚ್ಚಳದ ಉದ್ದೇಶವಾಗಿದೆ. ಇದು ಲಕ್ಷಾಂತರ ಜನರಿಗೆ ಅಗತ್ಯವಾದ ಆರ್ಥಿಕ ಪರಿಹಾರವನ್ನು ಒದಗಿಸುತ್ತದೆ.

ಜುಲೈ 2024 ರಲ್ಲಿ, ಕೇಂದ್ರ ಸರ್ಕಾರವು ಡಿಎ ಹೆಚ್ಚಳವನ್ನು ಅನುಮೋದಿಸಿತ್ತು. ಕಳೆದ ಬಾರಿ ಡಿಎಯನ್ನು 50% ರಿಂದ 53% ಕ್ಕೆ ಹೆಚ್ಚಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 2 ರಷ್ಟು ತುಟ್ಟಿ ಭತ್ಯೆ (DA) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ 7 ವರ್ಷಗಳ ಬಳಿಕ ಅತಿ ಕಡಿಮೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಹಾಗೆ ಆಗಿದೆ. ಪರಿಷ್ಕೃತ ಡಿಎ ಅನ್ನು ಜನವರಿ 1, 2025 ರಿಂದ ಪೂರ್ವಾನ್ವಯವಾಗಿ ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ತುಟ್ಟಿ ಭತ್ಯೆಯಲ್ಲಿ (DA) ಶೇ. 2 ರಷ್ಟು ಹೆಚ್ಚಳ ಮಾಡಿರುವುದರಿಂದ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಸೇರಿದಂತೆ ಸುಮಾರು 12 ಮಿಲಿಯನ್ ವ್ಯಕ್ತಿಗಳಿಗೆ ಪ್ರಯೋಜನವಾಗಲಿದೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಸರ್ಕಾರ ಜುಲೈ 2024 ರಲ್ಲಿ ತುಟ್ಟಿ ಭತ್ಯೆಯನ್ನು ಶೇ. 50 ರಿಂದ ಶೇ. 53 ರಷ್ಟು ಹೆಚ್ಚಿಸಲಾಗಿತ್ತು.
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ 53% ರಿಂದ 55% ಕ್ಕೆ ಹೆಚ್ಚಾಗುತ್ತದೆ. ಒಬ್ಬ ಉದ್ಯೋಗಿಯ ಮೂಲ ವೇತನ ರೂ 18,000 ಆಗಿದ್ದರೆ, ಅವರು ಈಗ ತಿಂಗಳಿಗೆ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ 53% ರಿಂದ 55% ಕ್ಕೆ ಹೆಚ್ಚಾಗುತ್ತದೆ. ರೂ 360 (ರೂ 18,000 ರಲ್ಲಿ 2%) ಪಡೆಯುತ್ತಾರೆ, ಅಂದರೆ ವಾರ್ಷಿಕವಾಗಿ ರೂ 4,320 ಪ್ರಯೋಜನವನ್ನು ಪಡೆಯುತ್ತಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಮಾರ್ಚ್ 28 ರಂದು ಕೇಂದ್ರ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ನಲ್ಲಿ 2% ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಹೆಚ್ಚಳದ ಘೋಷಣೆಯು ಈಗಾಗಲೇ ಕನಿಷ್ಠ 15-20 ದಿನಗಳು ವಿಳಂಬವಾಗಿರುವುದರಿಂದ, ಏಪ್ರಿಲ್ ತಿಂಗಳ ಸಂಬಳ ಮತ್ತು ಪಿಂಚಣಿಯಲ್ಲಿ ಮೂರು ತಿಂಗಳ (ಜನವರಿಯಿಂದ ಮಾರ್ಚ್ 2025) ಬಾಕಿ ಇರುವ ಡಿಎ ಜೊತೆಗೆ ಹೆಚ್ಚಳವಾಗಲಿದೆ.
ಸರ್ಕಾರವು ಸಾಮಾನ್ಯವಾಗಿ ಪ್ರತಿ ವರ್ಷ ಹೋಳಿ ಸಂದರ್ಭದಲ್ಲಿ ಡಿಎ ಹೆಚ್ಚಳವನ್ನು ಘೋಷಿಸುತ್ತಿತ್ತು. ಆದರೆ, ಈ ಬಾರಿ ತಡವಾಗಿ ಡಿಎ ಹೆಚ್ಚಳ ಮಾಡಿದೆ. ಕಳೆದ 7 ವರ್ಷಗಳಲ್ಲಿ ಅತ್ಯಂತ ಕಡಿಮೆ ಹೆಚ್ಚಳ ಇದಾಗಿದ್ದು, ಜುಲೈ 2018 ರಿಂದ, ಸರ್ಕಾರವು ಪ್ರತಿ ಬಾರಿಯೂ ಕನಿಷ್ಠ 3% ಅಥವಾ 4% ಹೆಚ್ಚಿಸುತ್ತಿತ್ತು, ಆದರೆ ಈ ಬಾರಿ ಅದು ಕೇವಲ 2% ರಷ್ಟು ಹೆಚ್ಚಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications