12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ: ಕೇಂದ್ರ
ನವದೆಹಲಿ, ಮೇ 31: ಕೋವಿಡ್-19 ಸೋಂಕಿನ ಮಧ್ಯೆ 12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಇನ್ನೆರಡು ದಿನಗಳೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಜುಲೈ 1 ರಿಂದ 15 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್ಇ ಮತ್ತು ಸಿಐಎಸ್ಸಿಇ ಯೋಜನೆಗಳನ್ನು 2020 ರ ಜೂನ್ 26 ರಂದು ಸುಪ್ರೀಂ ಕೋರ್ಟ್ ಅನುಮೋದಿಸಿತ್ತು ಮತ್ತು ಪರೀಕ್ಷಕರ ಮೌಲ್ಯಮಾಪನಕ್ಕಾಗಿ ಮಂಡಳಿಯ ಸೂತ್ರವನ್ನು ಅನುಮೋದಿಸಿತು.
ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಉತ್ತರಿಸಿದ ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಇನ್ನೆರಡು ದಿನಗಳಲ್ಲಿ ಸರ್ಕಾರ ನಿರ್ಧಾರಕ್ಕೆ ಬರಲಿದೆ. ಗುರುವಾರದವರೆಗೆ ನ್ಯಾಯಾಲಯ ನಮಗೆ ಸಮಯಾವಕಾಶ ನೀಡುತ್ತದೆ ಎಂದು ಭಾವಿಸುತ್ತೇವೆ. ಆಗ ಸರ್ಕಾರ ಅಂತಿಮ ನಿರ್ಧಾರಕ್ಕೆ ಬರುತ್ತದೆ ಎಂದರು.

ಸುಪ್ರೀಂ ಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ. ಮಮತಾ ಶರ್ಮಾ ಎಂಬುವವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ, 12 ನೇ ತರಗತಿಯ ಫಲಿತಾಂಶವನ್ನು ನಿರ್ಧಿಷ್ಟ ಸಮಯದೊಳಗೆ ಘೋಷಿಸಲು ವಸ್ತುನಿಷ್ಠ ವಿಧಾನವನ್ನು ರೂಪಿಸಲು ನಿರ್ದೇಶನ ನೀಡಬೇಕೆಂದು ಕೋರಿದ್ದರು.
ಇದಕ್ಕೆ ನ್ಯಾಯಪೀಠವು ನೀವು ನಿರ್ಧಾರ ತೆಗೆದುಕೊಳ್ಳಿ. ಅದಕ್ಕೆ ನೀವು ಅರ್ಹದಾರರು, ಕಳೆದ ವರ್ಷದ ನೀತಿಯನ್ನು ಬಿಡುವುದಿದ್ದರೆ ಅದಕ್ಕೆ ಸರಿಯಾದ ಕಾರಣ ನೀಡಬೇಕು ಎಂದು ನ್ಯಾಯಪೀಠ ಅಟೊರ್ನಿ ಜನರಲ್ ಅವರಿಗೆ ಹೇಳಿತು.
ಕೊರೊನಾ ಸ್ಥಿತಿಗತಿ ನಡುವೆ ಸಿಬಿಎಸ್ ಇಯ 12ನೇ ತರಗತಿ ಮತ್ತು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆ(ಗಳನ್ನು ರದ್ದುಪಡಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
-
CBSE 10th Results 2026: ಹತ್ತನೇ ತರಗತಿ ನಂತರ ನಿಮ್ಮ ಆಯ್ಕೆ ಏನಾಗಿರಬೇಕು? ಮುಂದಿನ ಹಾದಿ ಹೀಗಿರಲಿ -
CBSE ಹೊಸ ನಿಯಮ: ಮುಖ್ಯ ವಿಷಯದಲ್ಲಿ ಫೇಲ್ ಆದರೂ ಪಾಸ್ ಅವಕಾಶ, CBSE ರಿಸಲ್ಟ್ ನೋಡುವುದು ಹೇಗೆ -
CBSE Results 2026: ಸಿಬಿಎಸ್ಇ 10 ಮತ್ತು 12ನೇ ತರಗತಿಯ ಉತ್ತರ ಪತ್ರಿಕೆಯ ಪ್ರತಿ ಪಡೆಯುವುದು ಹೇಗೆ? -
Central Board of Secondary Education: 10ನೇ ತರಗತಿ ಎರಡು ಪರೀಕ್ಷೆ ವ್ಯವಸ್ಥೆ: ಅವಕಾಶವೇ ಅಥವಾ ಹೆಚ್ಚುವರಿ ಒತ್ತಡವೇ -
CBSE 10 Results 2025: ಸಿಬಿಎಸ್ಇ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಟಾಪರ್ಸ್ ಪಟ್ಟಿ ಇಲ್ಲಿದೆ -
CBSE 10th result 2026: ಸಿಬಿಎಸ್ಸಿ ಫಲಿತಾಂಶ: ಡಿಜಿಲಾಕರ್ ಅಥವಾ ಉಮಾಂಗ್ ಆಪ್, ಫಲಿತಾಂಶ ನೋಡಲು ಯಾವುದು ಬೆಸ್ಟ್ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications