12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ: ಕೇಂದ್ರ
ನವದೆಹಲಿ, ಮೇ 31: ಕೋವಿಡ್-19 ಸೋಂಕಿನ ಮಧ್ಯೆ 12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಇನ್ನೆರಡು ದಿನಗಳೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಜುಲೈ 1 ರಿಂದ 15 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್ಇ ಮತ್ತು ಸಿಐಎಸ್ಸಿಇ ಯೋಜನೆಗಳನ್ನು 2020 ರ ಜೂನ್ 26 ರಂದು ಸುಪ್ರೀಂ ಕೋರ್ಟ್ ಅನುಮೋದಿಸಿತ್ತು ಮತ್ತು ಪರೀಕ್ಷಕರ ಮೌಲ್ಯಮಾಪನಕ್ಕಾಗಿ ಮಂಡಳಿಯ ಸೂತ್ರವನ್ನು ಅನುಮೋದಿಸಿತು.
ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಉತ್ತರಿಸಿದ ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಇನ್ನೆರಡು ದಿನಗಳಲ್ಲಿ ಸರ್ಕಾರ ನಿರ್ಧಾರಕ್ಕೆ ಬರಲಿದೆ. ಗುರುವಾರದವರೆಗೆ ನ್ಯಾಯಾಲಯ ನಮಗೆ ಸಮಯಾವಕಾಶ ನೀಡುತ್ತದೆ ಎಂದು ಭಾವಿಸುತ್ತೇವೆ. ಆಗ ಸರ್ಕಾರ ಅಂತಿಮ ನಿರ್ಧಾರಕ್ಕೆ ಬರುತ್ತದೆ ಎಂದರು.

ಸುಪ್ರೀಂ ಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ. ಮಮತಾ ಶರ್ಮಾ ಎಂಬುವವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ, 12 ನೇ ತರಗತಿಯ ಫಲಿತಾಂಶವನ್ನು ನಿರ್ಧಿಷ್ಟ ಸಮಯದೊಳಗೆ ಘೋಷಿಸಲು ವಸ್ತುನಿಷ್ಠ ವಿಧಾನವನ್ನು ರೂಪಿಸಲು ನಿರ್ದೇಶನ ನೀಡಬೇಕೆಂದು ಕೋರಿದ್ದರು.
ಇದಕ್ಕೆ ನ್ಯಾಯಪೀಠವು ನೀವು ನಿರ್ಧಾರ ತೆಗೆದುಕೊಳ್ಳಿ. ಅದಕ್ಕೆ ನೀವು ಅರ್ಹದಾರರು, ಕಳೆದ ವರ್ಷದ ನೀತಿಯನ್ನು ಬಿಡುವುದಿದ್ದರೆ ಅದಕ್ಕೆ ಸರಿಯಾದ ಕಾರಣ ನೀಡಬೇಕು ಎಂದು ನ್ಯಾಯಪೀಠ ಅಟೊರ್ನಿ ಜನರಲ್ ಅವರಿಗೆ ಹೇಳಿತು.
ಕೊರೊನಾ ಸ್ಥಿತಿಗತಿ ನಡುವೆ ಸಿಬಿಎಸ್ ಇಯ 12ನೇ ತರಗತಿ ಮತ್ತು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆ(ಗಳನ್ನು ರದ್ದುಪಡಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications