ಕೇಂದ್ರ ಸರ್ಕಾರದಿಂದ ಸಿಬಿಐ ದುರ್ಬಳಕೆ: ಚಿದಂಬರಂ ಗುಡುಗು
ತಮ್ಮನ್ನು ಹಾಗೂ ತಮ್ಮ ಪುತ್ರನನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿರುವ ಚಿದಂಬರಂ, ತಮ್ಮ ಬಾಯಿ ಮುಚ್ಚಿಸುವುದಕ್ಕೋಸ್ಕರ ಕೇಂದ್ರ ಸರ್ಕಾರ ಹೂಡಿರುವ ತಂತ್ರ ಇದು ಎಂದ ಮಾಜಿ ಹಣಕಾಸು ಸಚಿವ.
ಚೆನ್ನೈ, ಮೇ 16: ಕೇಂದ್ರ ಸರ್ಕಾರವು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ದುರ್ಬಳಕೆ ಮಾಡುತ್ತಿದ್ದು, ತಮ್ಮನ್ನು ಹಾಗೂ ತಮ್ಮ ಪುತ್ರನ ವಿರುದ್ಧ ಸಮರ ಸಾರಿದೆ ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಮಂಗಳವಾರ ಬೆಳಗ್ಗೆ ತಮ್ಮ ಹಾಗೂ ತಮ್ಮ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ ನಿವಾಸಗಳು ಹಾಗೂ ಕೆಲ ಸಂಬಂಧಿಗಳ ಮನೆಗಳ ಮೇಲೆ ನಡೆದ ಸಿಬಿಐ ಹಿನ್ನೆಲೆಯಲ್ಲಿ, ಪತ್ರಿಕಾ ಪ್ರಕಟಣೆ ಹೊರಡಿಸಿರುವ ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ತಮ್ಮನ್ನು ಹಾಗೂ ತಮ್ಮ ಪುತ್ರನನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿರುವ ಚಿದಂಬರಂ, ತಮ್ಮ ಬಾಯಿ ಮುಚ್ಚಿಸುವುದಕ್ಕೋಸ್ಕರ ಕೇಂದ್ರ ಸರ್ಕಾರ ಹೂಡಿರುವ ತಂತ್ರ ಇದು ಎಂದು ಹೇಳಿದ್ದಾರೆ.
ಆದರೆ, ನಾನು ಬಾಯಿ ಮುಚ್ಚಿಕೊಂಡು ಸುಮ್ಮನೇ ಕೂರುವ ವ್ಯಕ್ತಿಯಲ್ಲ. ನಾನು ಖಂಡಿತವಾಗಿಯೂ ಕೇಂದ್ರದ ವಿರುದ್ಧ ಮಾತನಾಡುತ್ತೇನೆ ಎಂದು ಅವರು ಗುಡುಗಿದ್ದಾರೆ.
ಇನ್ನು, ಕಾರ್ತಿಕ್ ಚಿದಂಬರಂ ಅವರಿಗೆ ಸೇರಿದ ಕಂಪನಿಗೆ ನಿಯಮ ಬಾಹಿರವಾಗಿ ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯಿಂದ (ಎಫ್ಐಪಿಬಿ) ನಿರಕ್ಷೇಪಣ ಪತ್ರ ದೊರೆತಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ''ಎಫ್ಐಪಿಬಿ ವತಿಯಿಂದ ಕಾರ್ತಿಕ್ ಅವರ ಕಂಪನಿಯ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ಮೇಲೆಯೇ ನಿರಪೇಕ್ಷಣಾ ಪತ್ರ ನೀಡಲಾಗಿದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸಾಮಾನ್ಯವಾಗಿ ಎಫ್ಐಪಿಬಿಯು ಅನೇಕ ಕಂಪನಿಗಳ ದಾಖಲೆಗಳನ್ನು ಪರಿಶೀಲಿಸಿಯೇ ನಿರಪೇಕ್ಷಣಾ ಪತ್ರ ನೀಡುತ್ತದೆ. ನನ್ನ ಮಗನ ಕಂಪನಿಗೆ ಬಂದಿರುವ ಅನುಮತಿಯನ್ನು ನೀವು ಪ್ರಶ್ನಿಸುವುದಾರೆ, ಎಫ್ಐಪಿಬಿ ನೀಡಿರುವ ಎಲ್ಲಾ ಅನುಮತಿಗಳನ್ನು ಪರಿಶೀಲಿಸಬೇಕು'' ಎಂದು ಪ್ರತಿ ಸವಾಲು ಹಾಕಿದ್ದಾರೆ.
ಅಕ್ರಮ ನಡೆದಿದೆ ಎನ್ನುವುದಾದರೆ ಕೇಂದ್ರ ಸರ್ಕಾರ, ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಬೇಕೇ ಹೊರತು, ನಮ್ಮ ಮನೆಗಳನ್ನೇಕೆ ರೈಡ್ ಮಾಡಬೇಕು ಎಂದು ಗುಟುರು ಹಾಕಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications