ಕೇರಳದಲ್ಲಿ ಸ್ಕೂಲ್ ಬಸ್ಗೆ ಜಿಪಿಎಸ್ ಕಡ್ಡಾಯ: ಕರ್ನಾಟಕದಲ್ಲಿ ಯಾವಾಗ?
ಬೆಂಗಳೂರು, ಅ.1: ಕೇರಳ ರಾಜ್ಯದಲ್ಲಿ ಪ್ರತಿ ಶಾಲಾ ಬಸ್ಗಳಲ್ಲಿ ಜಿಪಿಎಸ್ ವ್ಯವಸ್ಥೆ ಕಡ್ಡಾಯ ವ್ಯವಸ್ಥೆ ಇಂದಿನಿಂದ(ಅ.1)ರಿಂದ ಜಾರಿ ಬರಲಿದೆ.
ಕರ್ನಾಟಕದಲ್ಲಿ ಇಂತಹ ವ್ಯವಸ್ಥೆ ಜಾರಿಗೆ ಬರುವುದು ಯಾವಾಗ? ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಬಸ್ಗಳಲ್ಲಿ ಮಕ್ಕಳೊಂದಿಗೆ ಚಾಲಕರ ಅಸಭ್ಯ ವರ್ತನೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಹಾಗಾಗಿ ಪ್ರತಿ ಶಾಲಾ ವಾಹನಗಳಲ್ಲಿ ಜಿಪಿಎಸ್ ಅಳವಡಿಕೆ ಉತ್ತಮ ಮಾರ್ಗವಾಗಿದೆ.
ಮೊದಲ ಹಂತದಲ್ಲಿ ಖಾಸಗಿ ಹಾಗೂ ಅಂಗೀಕೃತ ಶಾಲಾ ಬಸ್ಗಳಲ್ಲಿ ಜಿಪಿಎಸ್ ಅಳವಡಿಸಲಾಗುತ್ತದೆ, ಬಳಿಕ ಖಾಸಗಿ ಬಸ್, ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್, ಸರಕು ಲಾರಿ, ಟ್ಯಾಂಕರ್ ಮೊದಲಾದ ಸಾರ್ವಜನಿಕ ಸೇವೆಯ ವಾಹನಗಳಲ್ಲಿ ಕಡ್ಡಾಯವಾಗೊಳಿಸಲಾಗುತ್ತದೆ.

ಶಾಲಾ ವಾಹನಗಳಲ್ಲಿ ಅಳವಡಿಸಲು ಅಂಗೀಕೃತ 15 ಜಿಪಿಎಸ್ ತಯಾರಿಕಾ ಕಂಪನಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಇದರ ಹೊರತು ಬೇರೆ ಕಂಪನಿಗಳ ಜಿಪಿಎಸ್ ಅಳವಡಿಸಿದರೆ ಅಂತಹ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕೇಂದ್ರ ಸಾರಿಗೆ ಸಚಿವಾಲಯದ ಅನುಮತಿ ಇರುವ ಸಂಸ್ಥೆಗಳ ಜಿಪಿಎಸ್ ಅಳವಡಿಸಲು ಮಾತ್ರ ಅವಕಾಶ ನೀಡಲಾಗಿದೆ.
ಪ್ರತಿ ವಾಹನಕ್ಕೆ 10 ಸಾವಿರ ರೂ ವೆಚ್ಚ ಮಾಡಲಾಗುತ್ತಿದೆ, ಆದರೆ ಸರ್ಕಾರಿ ಶಾಲೆಗಳಲ್ಲಿರುವ ಶಾಲಾ ಬಸ್ ಗಳಲ್ಲಿ ಜಿಪಿಎಸ್ ಅಳವಡಿಸುವ ಕುರಿತು ಯಾವುದೇ ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ನೀಡಿಲ್ಲ.
ಅತಿ ವೇಗದಲ್ಲಿ ಚಲಿಸುವ ವಾಹನ, ಅಪಘಾತ ಸೃಷ್ಟಿಸುವ ರೀತಿಯ ಚಾಲನೆ, ಹೆದ್ದಾರಿಗಳಲ್ಲಿ ವಾಹನ ಅನಿಯಂತ್ರಿತ ನಿಲುಗಡೆಯನ್ನು ಪತ್ತೆ ಮಾಡಲು ಜಿಪಿಎಸ್ ಅಳವಡಿಸಲಾಗುತ್ತಿದೆ. ಆ ಮಾಹಿತಿ ತಕ್ಷಣ ಎಸ್ಎಂಎಸ್ ಮೂಲಕ ಇಲಾಖೆ ಮುಖ್ಯಸ್ಥರು, ಶಾಲಾ ಅಧಿಕಾರಿಗಳು, ಪೊಲೀಸ್ ಠಾಣೆ, ಅಧಿಕಾರಿಗಳಿಗೆ ಲಭ್ಯವಾಗುತ್ತದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications