ಕೇರಳದಲ್ಲಿ ಸ್ಕೂಲ್ ಬಸ್ಗೆ ಜಿಪಿಎಸ್ ಕಡ್ಡಾಯ: ಕರ್ನಾಟಕದಲ್ಲಿ ಯಾವಾಗ?
ಬೆಂಗಳೂರು, ಅ.1: ಕೇರಳ ರಾಜ್ಯದಲ್ಲಿ ಪ್ರತಿ ಶಾಲಾ ಬಸ್ಗಳಲ್ಲಿ ಜಿಪಿಎಸ್ ವ್ಯವಸ್ಥೆ ಕಡ್ಡಾಯ ವ್ಯವಸ್ಥೆ ಇಂದಿನಿಂದ(ಅ.1)ರಿಂದ ಜಾರಿ ಬರಲಿದೆ.
ಕರ್ನಾಟಕದಲ್ಲಿ ಇಂತಹ ವ್ಯವಸ್ಥೆ ಜಾರಿಗೆ ಬರುವುದು ಯಾವಾಗ? ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಬಸ್ಗಳಲ್ಲಿ ಮಕ್ಕಳೊಂದಿಗೆ ಚಾಲಕರ ಅಸಭ್ಯ ವರ್ತನೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಹಾಗಾಗಿ ಪ್ರತಿ ಶಾಲಾ ವಾಹನಗಳಲ್ಲಿ ಜಿಪಿಎಸ್ ಅಳವಡಿಕೆ ಉತ್ತಮ ಮಾರ್ಗವಾಗಿದೆ.
ಮೊದಲ ಹಂತದಲ್ಲಿ ಖಾಸಗಿ ಹಾಗೂ ಅಂಗೀಕೃತ ಶಾಲಾ ಬಸ್ಗಳಲ್ಲಿ ಜಿಪಿಎಸ್ ಅಳವಡಿಸಲಾಗುತ್ತದೆ, ಬಳಿಕ ಖಾಸಗಿ ಬಸ್, ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್, ಸರಕು ಲಾರಿ, ಟ್ಯಾಂಕರ್ ಮೊದಲಾದ ಸಾರ್ವಜನಿಕ ಸೇವೆಯ ವಾಹನಗಳಲ್ಲಿ ಕಡ್ಡಾಯವಾಗೊಳಿಸಲಾಗುತ್ತದೆ.

ಶಾಲಾ ವಾಹನಗಳಲ್ಲಿ ಅಳವಡಿಸಲು ಅಂಗೀಕೃತ 15 ಜಿಪಿಎಸ್ ತಯಾರಿಕಾ ಕಂಪನಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಇದರ ಹೊರತು ಬೇರೆ ಕಂಪನಿಗಳ ಜಿಪಿಎಸ್ ಅಳವಡಿಸಿದರೆ ಅಂತಹ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕೇಂದ್ರ ಸಾರಿಗೆ ಸಚಿವಾಲಯದ ಅನುಮತಿ ಇರುವ ಸಂಸ್ಥೆಗಳ ಜಿಪಿಎಸ್ ಅಳವಡಿಸಲು ಮಾತ್ರ ಅವಕಾಶ ನೀಡಲಾಗಿದೆ.
ಪ್ರತಿ ವಾಹನಕ್ಕೆ 10 ಸಾವಿರ ರೂ ವೆಚ್ಚ ಮಾಡಲಾಗುತ್ತಿದೆ, ಆದರೆ ಸರ್ಕಾರಿ ಶಾಲೆಗಳಲ್ಲಿರುವ ಶಾಲಾ ಬಸ್ ಗಳಲ್ಲಿ ಜಿಪಿಎಸ್ ಅಳವಡಿಸುವ ಕುರಿತು ಯಾವುದೇ ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ನೀಡಿಲ್ಲ.
ಅತಿ ವೇಗದಲ್ಲಿ ಚಲಿಸುವ ವಾಹನ, ಅಪಘಾತ ಸೃಷ್ಟಿಸುವ ರೀತಿಯ ಚಾಲನೆ, ಹೆದ್ದಾರಿಗಳಲ್ಲಿ ವಾಹನ ಅನಿಯಂತ್ರಿತ ನಿಲುಗಡೆಯನ್ನು ಪತ್ತೆ ಮಾಡಲು ಜಿಪಿಎಸ್ ಅಳವಡಿಸಲಾಗುತ್ತಿದೆ. ಆ ಮಾಹಿತಿ ತಕ್ಷಣ ಎಸ್ಎಂಎಸ್ ಮೂಲಕ ಇಲಾಖೆ ಮುಖ್ಯಸ್ಥರು, ಶಾಲಾ ಅಧಿಕಾರಿಗಳು, ಪೊಲೀಸ್ ಠಾಣೆ, ಅಧಿಕಾರಿಗಳಿಗೆ ಲಭ್ಯವಾಗುತ್ತದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications