ಜಾರ್ಖಂಡ್ನಲ್ಲಿ ಅಮೋಘ ಮತದಾನ: ಮತದಾನ ಹೆಚ್ಚಳಕ್ಕೆ ಕಾರಣವೇನು ?
ಜಾರ್ಖಂಡ್ನಲ್ಲಿ ಬುಧವಾರ (ನವೆಂಬರ್ 13) ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆದಿದ್ದು. ಇಲ್ಲಿನ ಮತದಾರರು ಅತ್ಯಂತ ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ. ಜಾರ್ಖಂಡ್ ಸಣ್ಣ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಈ ಬಾರಿ ಇಲ್ಲಿ ಭರ್ಜರಿ ಚುನಾವಣೆ ನಡೆದಿದೆ. ಅಲ್ಲದೇ ಹಲವು ಕಾರಣಗಳಿಗೆ ಈ ಬಾರಿಯ ಜಾರ್ಖಂಡ್ ಚುನಾವಣೆ ಮಹತ್ವ ಪಡೆದುಕೊಂಡಿದೆ. ಜಾರ್ಖಂಡ್ ರಾಜ್ಯವನ್ನು ರಚನೆ ಮಾಡಿದ್ದು ಬಿಜೆಪಿ, ಇಲ್ಲಿ ವಿಕಸಿತ ಭಾರತದ ಅಡಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಅವಕಾಶ ಕಲ್ಪಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದರು.
ಜಾರ್ಖಂಡ್ನಲ್ಲಿ ಮೊದಲ ಹಂತದಲ್ಲಿ 43 ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯವರೆಗೆ ಶೇ.46.25ರಷ್ಟು ಮತದಾನವಾಗಿದೆ. ಬೆಳಗ್ಗೆ 11 ಗಂಟೆಯವರೆಗೆ ಖುಂತಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ.34.12ರಷ್ಟು ಮತದಾನವಾಗಿದೆ ಗುಮ್ಲಾದಲ್ಲಿ ಶೇ.33.86, ಲೋಹರ್ಡಗಾದಲ್ಲಿ ಶೇ.33.44 ಮತ್ತು ಸಿಮ್ಡೆಗಾದಲ್ಲಿ ಶೇ.33.18ರಷ್ಟು ಮತದಾನವಾಗಿದೆ.

43 ಕ್ಷೇತ್ರಗಳಲ್ಲಿ 17 ಸಾಮಾನ್ಯ ಸ್ಥಾನಗಳು, 20 ಪರಿಶಿಷ್ಟ ಪಂಗಡ ಮತ್ತು ಆರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಾಗಿದೆ. ಉಳಿದ 38 ಸ್ಥಾನಗಳಿಗೆ ನವೆಂಬರ್ 20 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಇನ್ನು ಮಧ್ಯಾಹ್ನ 3 ಗಂಟೆಯವರೆಗೆ 43 ಸ್ಥಾನಗಳಲ್ಲಿ 59% ಕ್ಕಿಂತ ಹೆಚ್ಚು ಮತದಾನವಾಗಿದೆ ಎಂದು ವರದಿಯಾಗಿದೆ.
ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಕೊನೆಯ ಹಂತದಲ್ಲಿ ಇನ್ನಷ್ಟು ಮತದಾನ ಆಗುವ ಸಾಧ್ಯತೆ ಇದೆ. ಜಾರ್ಖಂಡ್ರಾಜ್ಯವು ಸಣ್ಣ ರಾಜ್ಯವಾಗಿದ್ದರು. ಇಲ್ಲಿ ಈ ಬಾರಿ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕೆ ಮುಖ್ಯ ಕಾರಣ ಭದ್ರತೆ. ಜಾರ್ಖಂಡ್ನಲ್ಲಿ ಭದ್ರತೆಯ ದೃಷ್ಟಿಯಿಂದ ಎರಡು ಹಂತದಲ್ಲಿ ವಿಧಾನಸಭೆ ಚುನಾವನೆಯನ್ನು ನಡೆಸಲಾಗುತ್ತಿದೆ.
ಜಾರ್ಖಂಡ್ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿದ್ದು, ನವೆಂಬರ್ 13ರಂದು ಮೊದಲ ಹಂತದಲ್ಲಿ ಒಟ್ಟು 43 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ನವೆಂಬರ್ 20ಕ್ಕೆ ಎರಡನೇ ಹಂತದಲ್ಲಿ ಇನ್ನುಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇನ್ನು ನವೆಂಬರ್ 20ರಂದು ಮಹಾರಾಷ್ಟ್ರದಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿವೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಮಹಾರಾಷ್ಟ್ರ ವಿಧಾನಸಭೆ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶವು ನವೆಂಬರ್ 23ರಂದು ಪ್ರಕಟವಾಗಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲೂ ಉಪ ಚುನಾವಣೆ ನಡೆಯುತ್ತಿದ್ದು, ಈ ಉಪ ಚುನಾವಣೆಗಳ ಫಲಿತಾಂಶವೂ ಸಹ ನವೆಂಬರ್ 23ರಂದೇ ಪ್ರಕಟವಾಗಲಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಎರಡೂ ರಾಜ್ಯದಲ್ಲೂ ಈ ಬಾರಿ ಹಲವು ಕಾರಣಕ್ಕೆ ಚುನಾವಣೆ ಕಣ ರಂಗೇರಿದೆ. ಈ ಎರಡೂ ರಾಜ್ಯಗಳಲ್ಲೂ ಎನ್ಡಿಎ ಮೈತ್ರಿ ಒಕ್ಕೂಟ ಹಾಗೂ ಕಾಂಗ್ರೆಸ್ನ ಇಂಡಿಯಾ ಮೈತ್ರಿಕೂಟಗಳ ನಡುವೆ ನೇರ ಹಣಾಹಣಿ ಇದೆ. ಈ ಬಾರಿ ಎರಡೂ ರಾಜ್ಯದಲ್ಲೂ ರಾಷ್ಟ್ರೀಯ ಪಕ್ಷಗಳಿಗಿಂತ ಸ್ಥಳೀಯ ಹಾಗೂ ಪ್ರಾದೇಶಿಕ ಪಕ್ಷಗಳ ಪೈಪೋಟಿ ಜೋರಾಗಿಯೇ ಇದೆ. ಯಾಕೆಂದರೆ ಈ ರಾಜ್ಯಗಳಲ್ಲಿ ಸಣ್ಣ ಪಕ್ಷಗಳ ಪಾತ್ರವೇ ಈ ಬಾರಿ ನಿರ್ಣಾಯಕವಾಗಿರಲಿದೆ. ಮಹಾರಾಷ್ಟ್ರದಲ್ಲಿ 10ಕ್ಕೂ ಹೆಚ್ಚು ಸಣ್ಣ ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ!
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications