ಜಿಎಸ್ಟಿ ಮಸೂದೆಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ಸಿನಿಂದ ಬೆಂಬಲ
ನವದೆಹಲಿ, ಆಗಸ್ಟ್ 02: ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು (ಜಿಎಸ್ಟಿ) ರಾಜ್ಯಸಭೆಯಲ್ಲಿ ಬುಧವಾರ ಮಂಡಿಸಲು ಮೋದಿ ನೇತೃತ್ವದ ಎನ್ ಡಿಎ ಸಿದ್ಧವಾಗಿದೆ. ಕೆಲ ತಿದ್ದುಪಡಿಗಳೊಂದಿಗೆ ಜಿಎಸ್ ಟಿ ಒಪ್ಪಲು ಕಾಂಗ್ರೆಸ್ ಕೂಡಾ ಸಿದ್ಧವಾಗಿದೆ.
ಈಗಾಗಲೇ ಎಲ್ಲಾ ರಾಜ್ಯಗಳ ವಿಶ್ವಾಸ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಸರಕು ಮತ್ತು ಸೇವಾ ತೆರಿಗೆ GST (Goods and Services Tax Bill) ವಿಧೇಯಕ ಮೂಲಕ ದೇಶದಾದ್ಯಂತ ಏಕರೂಪ ತೆರಿಗೆ ಜಾರಿಗೊಳಿಸಲಾಗುತ್ತದೆ. [ಜಿಎಸ್ಟಿ(GST) ಬಿಲ್ ಜಾರಿ: 9 ಲಾಭ ತಪ್ಪದೆ ಪಡೆಯಿರಿ]
ಸಾಮಾನ್ಯವಾಗಿ ಒಂದು ಉತ್ಪನ್ನವನ್ನು ತಯಾರಿಸಿ ಮಾರಾಟ ಮಾಡುವವರೆಗೆ ಅನೇಕ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಪ್ರತಿ ರಾಜ್ಯಗಳು ಇದಕ್ಕೆ ಸೆಸ್, ವ್ಯಾಟ್ ಕೂಡಾ ಸೇರಿಸುತ್ತವೆ. ಆದರೆ, ಜಿಎಸ್ಟಿ ಬಿಲ್ ಜಾರಿ ಆದರೆ ಉತ್ಪಾದನೆ, ಮಾರಾಟ ಮತ್ತು ಬಳಕೆ ಮೇಲೆ ಭಾರತದಾದ್ಯಂತ ಏಕರೂಪದ ತೆರಿಗೆಯನ್ನು ಮಾತ್ರ ವಿಧಿಸಲಾಗುವುದು.

ಇದರಿಂದಾಗಿ ದೇಶದ ಅಭಿವೃದ್ಧಿಯಲ್ಲಿ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಲ್ಲಿ ತುಂಬಾ ಪ್ರಯೋಜನಕಾರಿ ಆಗಲಿದೆ. ಜಿಎಸ್ಟಿ ಮಸೂದೆ ಜಾರಿಯಾಗಲಿದೆ ಎಂಬ ವಿಶ್ವಾಸ ಮೂಡಿದೆ. [ತಮಿಳುನಾಡು ಬಿಟ್ಟು ಎಲ್ಲಾ ರಾಜ್ಯಗಳಿಂದ ಜಿಎಸ್ ಟಿಗೆ ಬೆಂಬಲ]
2006ರಲ್ಲಿ ಕಾಂಗ್ರೆಸ್ ಸರ್ಕಾರವೇ ಮೊದಲಿಗೆ ಜಿಎಸ್ ಟಿ ಜಾರಿಗೊಳಿಸಲು ಯತ್ನಿಸಿತ್ತು. 2011ರಲ್ಲಿ ಯುಪಿಎ ಸರ್ಕಾರ ಈ ಕುರಿತು ಲೋಕಸಭೆಯಲ್ಲಿ ಮಸೂದೆ ಮಂಡಿಸಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜಿಎಸ್ ಟಿಯಲ್ಲಿ ತಿದ್ದುಪಡಿಗೆ ಕಾಂಗ್ರೆಸ್ ಆಗ್ರಹಿಸಿತು. ಈ ತಿದ್ದುಪಡಿಗಳೊಂದಿಗೆ ಮಸೂದೆಗೆ ಬೆಂಬಲಿಸುವುದಾಗಿ ಸಂಸದ ಅಭಿಶೇಕ್ ಮನು ಸಿಂಘ್ವಿ ಹೇಳಿದ್ದಾರೆ. [ಮೋದಿ ಕೈಗೆ 29 ಅಂಶಗಳ 94 ಪುಟಗಳ ಬೇಡಿಕೆ ಪಟ್ಟಿ ಕೊಟ್ಟ ಜಯಲಲಿತಾ]
ಶೇ1 ರಷ್ಟು ಹೆಚ್ಚುವರಿ ತೆರಿಗೆ ವಿಧಿಸಲು ಮುಂದಾಗಿರುವ ಸರ್ಕಾರ, ಉತ್ಪಾದಕ ರಾಜ್ಯಗಳಿಗೆ ಈ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜಿಎಸ್ ಟಿ ಅಡಿಯಲ್ಲಿ ಬರುವ ತೆರಿಗೆ ಗರಿಷ್ಠ ಮಿತಿ ಇರಬೇಕು ಹಾಗೂ ಇದನ್ನು ತಿದ್ದುಪಡಿ ವಿಧೇಯಕದಲ್ಲಿ ಅಳವಡಿಸಬೇಕು ಎಂದು ಕಾಂಗ್ರೆಸ್ ಕೇಳಿಕೊಂಡಿದೆ. ಈ ಎಲ್ಲಾ ತಿದ್ದುಪಡಿಯೊಂದಿಗೆ ವಿತ್ತ ಸಚಿವಾಲಯ ವಿಧೇಯಕ ಮಂಡಿಸಿ, ಕಾನೂನು ಜಾರಿಗೊಳಿಸಲು ಮುಂದಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications