ಜಿಎಸ್ಟಿ ಮಸೂದೆಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ಸಿನಿಂದ ಬೆಂಬಲ
ನವದೆಹಲಿ, ಆಗಸ್ಟ್ 02: ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು (ಜಿಎಸ್ಟಿ) ರಾಜ್ಯಸಭೆಯಲ್ಲಿ ಬುಧವಾರ ಮಂಡಿಸಲು ಮೋದಿ ನೇತೃತ್ವದ ಎನ್ ಡಿಎ ಸಿದ್ಧವಾಗಿದೆ. ಕೆಲ ತಿದ್ದುಪಡಿಗಳೊಂದಿಗೆ ಜಿಎಸ್ ಟಿ ಒಪ್ಪಲು ಕಾಂಗ್ರೆಸ್ ಕೂಡಾ ಸಿದ್ಧವಾಗಿದೆ.
ಈಗಾಗಲೇ ಎಲ್ಲಾ ರಾಜ್ಯಗಳ ವಿಶ್ವಾಸ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಸರಕು ಮತ್ತು ಸೇವಾ ತೆರಿಗೆ GST (Goods and Services Tax Bill) ವಿಧೇಯಕ ಮೂಲಕ ದೇಶದಾದ್ಯಂತ ಏಕರೂಪ ತೆರಿಗೆ ಜಾರಿಗೊಳಿಸಲಾಗುತ್ತದೆ. [ಜಿಎಸ್ಟಿ(GST) ಬಿಲ್ ಜಾರಿ: 9 ಲಾಭ ತಪ್ಪದೆ ಪಡೆಯಿರಿ]
ಸಾಮಾನ್ಯವಾಗಿ ಒಂದು ಉತ್ಪನ್ನವನ್ನು ತಯಾರಿಸಿ ಮಾರಾಟ ಮಾಡುವವರೆಗೆ ಅನೇಕ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಪ್ರತಿ ರಾಜ್ಯಗಳು ಇದಕ್ಕೆ ಸೆಸ್, ವ್ಯಾಟ್ ಕೂಡಾ ಸೇರಿಸುತ್ತವೆ. ಆದರೆ, ಜಿಎಸ್ಟಿ ಬಿಲ್ ಜಾರಿ ಆದರೆ ಉತ್ಪಾದನೆ, ಮಾರಾಟ ಮತ್ತು ಬಳಕೆ ಮೇಲೆ ಭಾರತದಾದ್ಯಂತ ಏಕರೂಪದ ತೆರಿಗೆಯನ್ನು ಮಾತ್ರ ವಿಧಿಸಲಾಗುವುದು.

ಇದರಿಂದಾಗಿ ದೇಶದ ಅಭಿವೃದ್ಧಿಯಲ್ಲಿ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಲ್ಲಿ ತುಂಬಾ ಪ್ರಯೋಜನಕಾರಿ ಆಗಲಿದೆ. ಜಿಎಸ್ಟಿ ಮಸೂದೆ ಜಾರಿಯಾಗಲಿದೆ ಎಂಬ ವಿಶ್ವಾಸ ಮೂಡಿದೆ. [ತಮಿಳುನಾಡು ಬಿಟ್ಟು ಎಲ್ಲಾ ರಾಜ್ಯಗಳಿಂದ ಜಿಎಸ್ ಟಿಗೆ ಬೆಂಬಲ]
2006ರಲ್ಲಿ ಕಾಂಗ್ರೆಸ್ ಸರ್ಕಾರವೇ ಮೊದಲಿಗೆ ಜಿಎಸ್ ಟಿ ಜಾರಿಗೊಳಿಸಲು ಯತ್ನಿಸಿತ್ತು. 2011ರಲ್ಲಿ ಯುಪಿಎ ಸರ್ಕಾರ ಈ ಕುರಿತು ಲೋಕಸಭೆಯಲ್ಲಿ ಮಸೂದೆ ಮಂಡಿಸಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜಿಎಸ್ ಟಿಯಲ್ಲಿ ತಿದ್ದುಪಡಿಗೆ ಕಾಂಗ್ರೆಸ್ ಆಗ್ರಹಿಸಿತು. ಈ ತಿದ್ದುಪಡಿಗಳೊಂದಿಗೆ ಮಸೂದೆಗೆ ಬೆಂಬಲಿಸುವುದಾಗಿ ಸಂಸದ ಅಭಿಶೇಕ್ ಮನು ಸಿಂಘ್ವಿ ಹೇಳಿದ್ದಾರೆ. [ಮೋದಿ ಕೈಗೆ 29 ಅಂಶಗಳ 94 ಪುಟಗಳ ಬೇಡಿಕೆ ಪಟ್ಟಿ ಕೊಟ್ಟ ಜಯಲಲಿತಾ]
ಶೇ1 ರಷ್ಟು ಹೆಚ್ಚುವರಿ ತೆರಿಗೆ ವಿಧಿಸಲು ಮುಂದಾಗಿರುವ ಸರ್ಕಾರ, ಉತ್ಪಾದಕ ರಾಜ್ಯಗಳಿಗೆ ಈ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಜಿಎಸ್ ಟಿ ಅಡಿಯಲ್ಲಿ ಬರುವ ತೆರಿಗೆ ಗರಿಷ್ಠ ಮಿತಿ ಇರಬೇಕು ಹಾಗೂ ಇದನ್ನು ತಿದ್ದುಪಡಿ ವಿಧೇಯಕದಲ್ಲಿ ಅಳವಡಿಸಬೇಕು ಎಂದು ಕಾಂಗ್ರೆಸ್ ಕೇಳಿಕೊಂಡಿದೆ. ಈ ಎಲ್ಲಾ ತಿದ್ದುಪಡಿಯೊಂದಿಗೆ ವಿತ್ತ ಸಚಿವಾಲಯ ವಿಧೇಯಕ ಮಂಡಿಸಿ, ಕಾನೂನು ಜಾರಿಗೊಳಿಸಲು ಮುಂದಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications