ಐತಿಹಾಸಿಕ ಜಿಎಸ್ಟಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ
ನವದೆಹಲಿ, ಆಗಸ್ಟ್ 03 : ರಾಷ್ಟ್ರದಾದ್ಯಂತ ಏಕರೂಪ ತೆರಿಗೆಯನ್ನು ಜಾರಿಗೆ ತರುವ, ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆಯನ್ನು ಬುಧವಾರ ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ ಕಳೆದ ವರ್ಷವೇ ಈ ಮಸೂದೆಗೆ ಅಂಗೀಕಾರ ದೊರೆತಿತ್ತು.
ಸತತ 7 ಗಂಟೆಗಳ ಕಾಲ ಬಿಸಿಬಿಸಿ ಚರ್ಚೆಯಾದ ನಂತರ 'ಒಂದೇ ರಾಷ್ಟ್ರ ಒಂದೇ ತೆರಿಗೆ' ನೀತಿಯನ್ನು ಪ್ರತಿಪಾದಿಸುವ, ತೆರಿಗೆ ಮೇಲಿನ ತೆರಿಗೆಯನ್ನು ಇಳಿಸುವ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಮಸೂದೆಯ ಪರವಾಗಿ ಒಟ್ಟು 203 ಮತಗಳು ಬಿದ್ದರೆ, ವಿರುದ್ಧವಾಗಿ ಒಂದೂ ಮತ ಬೀಳಲಿಲ್ಲ. [ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]

ಮಸೂದೆ ಅಂಗೀಕರಿಸಲಾಗಿದೆಯಾದರೂ, ತೆರಿಗೆ ಯಾವ ರೀತಿ ಇರಲಿದೆ, ಇದರಿಂದ ಯಾವ ಉದ್ಯಮಕ್ಕೆ ಲಾಭವಾಗಲಿದೆ, ಯಾರಿಗೆ ನಷ್ಟವಾಗಲಿದೆ, ಯಾವ್ಯಾವ ಉತ್ಪನ್ನಗಳ ಬೆಲೆ ಏರಲಿಗೆ ಅಥವಾ ಇಳಿಯಲಿದೆ ಎಂಬುದು ಮುಂದಿನ ವಾರಗಳಲ್ಲಿ ದೊರೆಯಲಿದೆ.
ಕೆಲವೊಂದು ರಾಜ್ಯಗಳಲ್ಲಿ ಜನರಿಗೆ ಹೊರೆಯಾಗಿರುವ ತೆರಿಗೆಗಳನ್ನು ಸರಿಸಿ, ರಾಷ್ಟ್ರವ್ಯಾಪಿ ಪರೋಕ್ಷ ತೆರಿಗೆಯನ್ನು ಏಕರೂಪದಲ್ಲಿ ತರಬೇಕೆಂಬುದೇ ಸರಕು ಮತ್ತು ಸೇವಾ ತೆರಿಗೆ ಮಸೂದೆಯ ಮೂಲ ಉದ್ದೇಶ. ಹಲವಾರು ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಈ ನೀತಿಯನ್ನು ಜಾರಿಗೆ ತಂದಿವೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications