30ರಂದು ನಡೆಯಲಿರುವ ಮಧ್ಯರಾತ್ರಿ ಸಂಸತ್ ಅಧಿವೇಶನದ ಮಹತ್ವ
ಜಿಎಸ್ ಟಿ ಜಾರಿಗೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 30ರಂದು ಮಧ್ಯರಾತ್ರಿ ಅಧಿವೇಶನ. ಜಂಟಿ ಅಧಿವೇಶನ ಕರೆದಿರುವ ಕೇಂದ್ರ ಸರ್ಕಾರ. ಪ್ರಧಾನಿ ಮೋದಿ, ಕೇಂದ್ರದ ಸಚಿವರು, ಲೋಕಸಭೆ-ರಾಜ್ಯಸಭೆಗಳ ಸದಸ್ಯರು ಸೇರಿದಂತೆ ಸುಮಾರು 600 ಜನರು ಭಾಗಿಯಾಗುವ ನಿ
ನವದೆಹಲಿ, ಜೂನ್ 29: ಮುಂದಿನ ತಿಂಗಳ 1ರಿಂದ ದೇಶಾದ್ಯಂತ ಜಾರಿಗೊಳ್ಳಲಿರುವ ಸರಕು ಮತ್ತು ಸೇವಾ ತೆರಿಗೆಗೆ (ಜಿಎಸ್ ಟಿ) ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜೂನ್ 30ರ ಮಧ್ಯರಾತ್ರಿ ಕರೆದಿರುವ ವಿಶೇಷ ಅಧಿವೇಶನಕ್ಕೆ ಹಲವಾರು ಮುಖಂಡರು ಸಾಕ್ಷಿಯಾಗುವ ನಿರೀಕ್ಷೆಯಿದೆ.
ಅಧಿವೇಶನದ ವೇಳೆ, ಈಗಾಗಲೇ ಸದನದ ಸಮ್ಮತಿ ಪಡೆದಿರುವ ಜಿಎಸ್ ಟಿ ಮಸೂದೆಯನ್ನು ಔಪಚಾರಿಕವಾಗಿ ಮತ್ತೊಮ್ಮೆ ಮಂಡಿಸಿ, ಸದನದ ಅನುಮೋದನೆ ಪಡೆಯಲಾಗುವುದು.
ಜಿಎಸ್ ಟಿ ಮಾದರಿಯ ತೆರಿಗೆ ವ್ಯವಸ್ಥೆಯು ಜಾರಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಆ ಬಗ್ಗೆ ಚರ್ಚೆಗಳು, ಪರ- ವಿರೋಧಗಳು ವ್ಯಕ್ತವಾಗಿವೆ.
ಹಲವಾರು ಆರ್ಥಿಕ ಪಂಡಿತರು ಈ ಕ್ರಮವನ್ನು ಸ್ವಾಗತಿಸಿದ್ದರೂ ಜಿಎಸ್ ಟಿಗೆ ಕೆಲವರ ವಿರೋಧವೂ ವ್ಯಕ್ತವಾಗಿದೆ. ವರ್ತಕರಲ್ಲಿ ಹೊಸ ಬಗೆಯ ಆತಂಕ ಸೃಷ್ಟಿಯಾಗಿದೆ.
ಈ ಹಿನ್ನೆಲೆಯಲ್ಲಿ, ಈ ಅಧಿವೇಶನದ ಹಿನ್ನೆಲೆಯೇನು, ಅಧಿವೇಶನದಲ್ಲಿ ಯಾವ ಯಾವ ಧುರೀಣರು ಪಾಲ್ಗೊಳ್ಳುತ್ತಿದ್ದಾರೆ ಎಂಬಿತ್ಯಾದಿ ಮಾಹಿತಿಗಳು ಇಲ್ಲಿ ನಿಮಗಾಗಿ.

ಔಪಚಾರಿಕ ಚರ್ಚೆ
ಜಿಎಸ್ ಟಿಯ ಬಗ್ಗೆ ಔಪಚಾರಿಕ ಚರ್ಚೆಗೆ ಜೂನ್ 30ರ ಮಧ್ಯರಾತ್ರಿ ಕರೆಯಲಾಗಿರುವ ಅಧಿವೇಶನವು ಜಂಟಿ ಅಧಿವೇಶನವಾಗಿರಲಿದೆ. ಅಂದರೆ, ಲೋಕಸಭೆ ಹಾಗೂ ರಾಜ್ಯ ಸಭೆಗಳ ಸದಸ್ಯರು ಈ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿಂದೆ ಎರಡು ಇಂಥ ಅಧಿವೇಶನಗಳು
ಇದು ಮೂರನೇ ಮಧ್ಯರಾತ್ರಿ ಅಧಿವೇಶನ. ಈ ಹಿಂದೆ ಎರಡು ಬಾರಿ ಹೀಗೆ ಮಧ್ಯರಾತ್ರಿ ಅಧಿವೇಶನಗಳನ್ನು ಕರೆಯಲಾಗಿತ್ತು. ಭಾರತದ ಸ್ವತಂತ್ರ ಸಂಗ್ರಾಮದಲ್ಲಿ ಮಹತ್ವದ ಘಟ್ಟವಾದ ಕ್ವಿಟ್ ಇಂಡಿಯಾ ಚಳವಳಿಯ 50ನೇ ವರ್ಷಾಚರಣೆ ಸಂದರ್ಭದಲ್ಲಿ ಹಾಗೂ ಭಾರತ ಸ್ವತಂತ್ರಗೊಂಡ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಹೀಗೆ ಮಧ್ಯರಾತ್ರಿ ಸಂಸತ್ ಅಧಿವೇಶನವನ್ನು ಕರೆಯಲಾಗಿತ್ತು.

ಕೇಂದ್ರದ ಹೊಸ ವ್ಯವಸ್ಥೆ ಜಾರಿ ಬಗೆಗಿನ ಮೊದಲ ಅಧಿವೇಶನ
ಚಾರಿತ್ರಿಕ ಘಟನೆಗಳ 50 ವರ್ಷಗಳ ಮೈಲುಗಲ್ಲನ್ನು ಸ್ಮರಿಸಲು ಹೀಗೆ, ಮಧ್ಯರಾತ್ರಿ ಸಂಸತ್ ಸಭೆಯನ್ನು ಕರೆಯಲಾಗಿತ್ತಾದರೂ, ಹೀಗೆ, ಜಾರಿಗೊಳ್ಳಲಿರುವ ಕೇಂದ್ರ ಸರ್ಕಾರದ ಹೊಸ ವ್ಯವಸ್ಥೆಯೊಂದರ ಬಗ್ಗೆ ಜಂಟಿ ಅಧಿವೇಶನ ಕರೆದಿರುವುದು ಇದೇ ಮೊದಲು.

600 ಜನ ಭಾಗಿಯಾಗುವ ನಿರೀಕ್ಷೆ
ಜಂಟಿ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ಸಚಿವರು, ಲೋಕಸಭೆ, ರಾಜ್ಯ ಸಭೆಗಳ ಸದಸ್ಯರು ಸೇರಿದಂತೆ ಸುಮಾರು 600 ಮಂದಿ ಈ ಭಾಷಣ ಆಲಿಸಲಿದ್ದಾರೆ.

ಉಪರಾಷ್ಟ್ರಪತಿ, ಸ್ಪೀಕರ್ ಉಪಸ್ಥಿತಿ
ಮಾಜಿ ಪ್ರಧಾನಿಗಳು ಹಾಗೂ ಹಿರಿಯರಾದ ಮನಮೋಹನ್ ಸಿಂಗ್ ಹಾಗೂ ಎಚ್.ಡಿ. ದೇವೇಗೌಡ ಅವರು ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಈ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications