ಶ್ರೀಸಾಮಾನ್ಯರಿಗೆ ಅನ್ವಯವಾಗುವ ಜಿಎಸ್ಟಿ ದರಗಳ ಅಂತಿಮ ಪಟ್ಟಿ ಇಲ್ಲಿದೆ
ನವದೆಹಲಿ, ಜೂನ್ 8: ಜುಲೈ 1ನೇ ತಾರೀಕಿನಿಂದ ಜಿಎಸ್ಟಿ ದೇಶದಾದ್ಯಂತ ಜಾರಿಗೆ ಬರಲಿದೆ. ಈ ಸಂದರ್ಭದಲ್ಲಿ ಜಿಎಸ್ಟಿಯಿಂದಾಗಿ ಹಲವು ವಸ್ತುಗಳ ಮೇಲಿನ ತೆರಿಗೆ ವ್ಯತ್ಯಯವಾಗಲಿದೆ. ಜಿಎಸ್ಟಿಯಲ್ಲೇ ಸೇವಾ ತೆರಿಗೆ, ವ್ಯಾಟ್, ಅಬಕಾರಿ ತೆರಿಗೆಗಳೆಲ್ಲಾ ವಿಲೀನಗೊಳ್ಳಲಿವೆ. ಹೀಗಾಗಿ ದೇಶದಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಗೆ ಬರಲಿದೆ.
'ಕೇಂದ್ರ ಅಬಕಾರಿ ಮತ್ತು ಕಸ್ಟಮ್ಸ್ ಮಂಡಳಿ'ಯು 'ಸಾಮಾನ್ಯ ಜನರಿಗೆ ಜಿಎಸ್ಟಿ' ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶ್ರೀಸಾಮಾನ್ಯರಿಗೆ ದಿನನಿತ್ಯದ ಜೀವನದಲ್ಲಿ ಬಳಕೆಗೆ ಬರುವ ವಸ್ತುಗಳ ಮೇಲಿನ ಜಿಎಸ್ಟಿ ದರಗಳ ಪಟ್ಟಿ ಇದು.
ಈ ಮಂಡಳಿಯ ಪ್ರಕಾರ ಪ್ಯಾಕ್ ಮಾಡದ ಗೋಧಿ ಹಿಟ್ಟು, ಮೈದಾ ಹಿಟ್ಟು, ಕಡಲೆ ಹಿಟ್ಟು, ಪ್ಯಾಕ್ ಮಾಡದ ಆಹಾರ ಧಾನ್ಯಗಳು, ಹಾಲು, ಮೊಟ್ಟೆ, ಮೊಸರು, ಲಸ್ಸಿ, ಹಸಿ ತರಕಾರಿಗಳು ಮತ್ತು ಗರ್ಭನಿರೋಧಕಗಳು ಜಿಎಸ್ಟಿಯಿಂದ ಮುಕ್ತವಾಗಿವೆ.
ಇನ್ನು ಇತರ ವಸ್ತುಗಳ ಮೇಲಿನ ಜಿಎಸ್ಟಿ ದರಗಳು ಹೀಗಿವೆ,

ಇವುಗಳ ಮೇಲೆ ತರಿಗೆ ಇಲ್ಲ
ಲಕೋಟೆಯಲ್ಲಿ ಪ್ಯಾಕ್ ಮಾಡದ ಆಹಾರ ಧಾನ್ಯಗಳು, ಹಾಲು, ಮೊಟ್ಟೆ, ಮೊಸರು, ಲಸ್ಸಿ, ಪನ್ನೀರ್, ಬ್ರಾಂಡ್ ಅಲ್ಲದ ನೈಸರ್ಗಿಕ ಜೇನು ತುಪ್ಪ, ತರಕಾರಿ, ಪ್ಯಾಕ್ ಮಾಡದ ಗೋಧಿ, ಮೈದಾ, ಕಡಲೆ ಹಿಟ್ಟು, ಉಪ್ಪು, ಗರ್ಭನಿರೋಧಕಗಳು, ಕಚ್ಛಾ ಸೆಣಬು, ಕಚ್ಛಾ ರೇಷ್ಮೆ ಜಿಎಸ್ಟಿಯಿಂದ ಮುಕ್ತವಾಗಿವೆ.

ಶಿಕ್ಷಣ ಆರೋಗ್ಯಕ್ಕಿಲ್ಲ ಜಿಎಸ್ಟಿ ಹೊರೆ
ಇನ್ನು ಶಿಕ್ಷಣ ಮತ್ತು ಆರೋಗ್ಯ ವಲಯವನ್ನು ಜಿಎಸ್ಟಿಯಿಂದ ಹೊರಗಿಡಲಾಗಿದೆ. ಎರಡೂ ಸೇವೆಗಳ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ.

ಶೇಕಡಾ 5 ಜಿಎಸ್ಟಿ
ಸಕ್ಕರೆ, ಚಹಾ ಪುಡಿ, ಹುರಿದ ಕಾಫಿ ಬೀಜ, ಅಡುಗೆ ಎಣ್ಣೆ, ಹಾಲಿನ ಪುಡಿ, ಮಕ್ಕಳ ಹಾಲಿನ ಆಹಾರಗಳು, ಪ್ಯಾಕ್ ಮಾಡಿ ಪನ್ನೀರ್, ಹತ್ತಿ ನೂಲು, ಹುಲ್ಲಿನಿಂದ ತಯಾರಿಸಿದ ಚಾಪೆ, ಕುರ್ಚಿ ಮುಂತಾದ ವಸ್ತುಗಳು, 500 ರೂಪಾಯಿವರೆಗೆ ಚಪ್ಪಲಿಗಳು, ಸುದ್ದಿ ಪತ್ರಿಕೆಗಳ ಮುದ್ರಣ, ಸಾರ್ವಜನಿಕ ಪೂರೈಕೆಯ ಸೀಮೆ ಎಣ್ಣೆ, ಮನೆ ಬಳಕೆಯ ಗ್ಯಾಸ್, ಕಲ್ಲಿದ್ದಲು, ಸೋಲಾರ್ ಪ್ಯಾನಲ್ ಗಳು, ಒಂದು ಸಾವಿರ ರೂಪಾಯಿ ಒಳಗಿನ ಉಡುಪುಗಳು ಈ ವ್ಯಾಪ್ತಯಲ್ಲಿ ಬರುತ್ತವೆ.

ಶೇಕಡಾ 12 ಜಿಎಸ್ಟಿ
ಬೆಣ್ಣೆ, ತುಪ್ಪ, ಮೊಬೈಲ್, ಗೇರು ಬೀಜ, ಅಲ್ಮೊಂಡ್, ಸಾಸ್, ಹಣ್ಣಿನ ಜ್ಯೂಸ್, ಪ್ಯಾಕ್ ಮಾಡಿದ ಎಳನೀರು, ಅಗರಬತ್ತಿ, ಛತ್ರಿ, 1,000 ರೂಪಾಯಿ ಮೀರಿದ ಉಡುಪುಗಳು ಶೇಕಡಾ 12ರ ತೆರಿಗೆಯನ್ನು ವ್ಯಾಪ್ತಿಗೆ ಬರಲಿವೆ.

ಶೇಕಡಾ 18 ಜಿಎಸ್ಟಿ
ಕೂದಲಿಗೆ ಬಳಸುವ ಎಣ್ಣೆ, ಸೋಪ್, ಹಲ್ಲುಜ್ಜುವ ಪೇಸ್ಟ್, ಪಾಸ್ತಾ, ಕಾರ್ನ್ ಫ್ಲೇಕ್ಸ್, ಜ್ಯಾಮ್, ಸೂಪ್, ಐಸ್ ಕ್ರೀಂ, ಟಿಶ್ಯೂ, ಕಬ್ಬಿಣ, ಫೌಂಟೇನ್ ಪೆನ್, ಕಂಪ್ಯೂಟರ್, 500 ರೂಪಾಯಿ ಮೀರಿದ ಚ್ಪಲಿಗಳು, ಕೈಯಿಂದ ತಯಾರಿಸಿದ ನೂಲು, ಕೈಗಾರಿಕಾ ಮಧ್ಯವರ್ತಿಗಳು, ಕೈಗಾರಿಕಾ ಸರಕುಗಳು ಶೇಕಡಾ 18 ತೆರಿಗೆ ವ್ಯಾಪ್ತಿಗೆ ಬರಲಿವೆ.

ಶೇಕಡಾ 28 ಜಿಎಸ್ಟಿ
ದೀರ್ಘ ಬಾಳಿಕೆಯ ವಸ್ತುಗಳು, ಸಿಮೆಂಟ್, ಚ್ಯೂಯಿಂಗ್ ಗಂ, ಸುಗಂಧ ದ್ರವ್ಯಗಳು, ಶ್ಯಾಂಪೂ, ಸೌಂದರ್ಯ ವರ್ಧಕಗಳು, ಪಟಾಕಿ ಮತ್ತು ಬೈಕ್ ಗಳು ಶೇಕಡಾ 28 ತೆರಿಗೆಗೆ ಒಳಪಡಲಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications