ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಗಸೂಚಿ ಉಲ್ಲಂಘನೆ; ಗೃಹ ಇಲಾಖೆಯಿಂದ ರಾಜ್ಯಗಳಿಗೆ ಪತ್ರ

|
Google Oneindia Kannada News

ನವದೆಹಲಿ, ಮೇ 21 : ಕೊರೊನಾ ಹರಡದಂತೆ ತಡೆಯಲು ಕೇಂದ್ರ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿಲ್ಲ. ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಇದನ್ನು ಪಾಲಿಸುತ್ತಿಲ್ಲ ಎಂಬುದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ.

Recommended Video

ವರ್ಕ್ ಫ್ರಂ ಹೋಂ‌ನಿಂದ ಆಗ್ತಿರೋ ಸಮಸ್ಯೆಗಳು ಅಷ್ಟಿಷ್ಟಲ್ಲ... | Oneindia Kannada

ಗುರುವಾರ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಒಟ್ಟು 7 ಅಂಶಗಳನ್ನು ಉಲ್ಲೇಖಿಸಿದ್ದು, ಮಾರ್ಗಸೂಚಿ ಪಾಲನೆ ಬಗ್ಗೆ ನಿರ್ದೇಶನ ನೀಡಲಾಗಿದೆ.

ಶ್ರಮಿಕ್ ರೈಲು ಸಂಚಾರ; ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿ ಶ್ರಮಿಕ್ ರೈಲು ಸಂಚಾರ; ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿ

ಕೇಂದ್ರ ಸರ್ಕಾರ 17/5/2020ರಂದು ಲಾಕ್ ಡೌನ್‌ ಅನ್ನು ಮೇ 31ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ಕೆಲವು ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಲಾಕ್ಡೌನ್ 4.0: ಕಚೇರಿ ಕಾರ್ಯ ನಿರ್ವಹಣೆಗೆ ಮಾರ್ಗಸೂಚಿಲಾಕ್ಡೌನ್ 4.0: ಕಚೇರಿ ಕಾರ್ಯ ನಿರ್ವಹಣೆಗೆ ಮಾರ್ಗಸೂಚಿ

ಆರ್ಥಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ರಾಜ್ಯಗಳು 4ನೇ ಹಂತದ ಲಾಕ್ ಡೌನ್‌ನಲ್ಲಿ ಹಲವು ಬದಲಾವಣೆಗಳನ್ನು ಮಾಡಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದ್ದು, ಮಾರ್ಗಸೂಚಿ ಪಾಲನೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

ಭಾರತ ಲಾಕ್ ಡೌನ್ 4.O ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ! ಭಾರತ ಲಾಕ್ ಡೌನ್ 4.O ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ!

ಮಾರ್ಗಸೂಚಿ ಪಾಲಿಸುತ್ತಿಲ್ಲ

ಮಾರ್ಗಸೂಚಿ ಪಾಲಿಸುತ್ತಿಲ್ಲ

ಮಾಧ್ಯಮಗಳವರದಿ ಮತ್ತು ಇತರ ಮೂಲಗಳ ಮಾಹಿತಿಯಂತೆ ಕೆಲವು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸುತ್ತಿಲ್ಲ ಎಂಬುದು ತಿಳಿದಿದೆ. ಗೃಹ ಇಲಾಖೆ ನೀಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳ ಮಾರ್ಗಸೂಚಿ ಪಾಲನೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಮೂಲಕ ಸೂಚನೆ ನೀಡಲಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಕಂಟೈನ್ಮೆಂಟ್ ಝೋನ್

ಕಂಟೈನ್ಮೆಂಟ್ ಝೋನ್

ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಕಂಟೈನ್ಮೆಂಟ್ ಝೋನ್‌ಗಳನ್ನು ಗುರುತಿಸುವಲ್ಲಿ ವಿಫಲವಾಗಿವೆ. ಕೊರೊನಾ ಹರಡದಂತೆ ತಡೆಯಲು ಕಂಟೈನೆಂಟ್‌ ಝೋನ್‌ಗಳಲ್ಲಿ ನಿಯಮಗಳನ್ನು ಇನ್ನು ಬಿಗಿಗೊಳಿಸಬೇಕು. ಸ್ಥಳೀಯ ಆಡಳಿತಗಳು ಘೋಷಣೆ ಮಾಡಿದ ಮಾರ್ಗಸೂಚಿ ಪಾಲನೆಯಾಗದಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಕರ್ಫ್ಯೂ ಪಾಲನೆಯಾಗುತ್ತಿಲ್ಲ

ಕರ್ಫ್ಯೂ ಪಾಲನೆಯಾಗುತ್ತಿಲ್ಲ

ಸಂಜೆ 7 ರಿಂದ ಬೆಳಗ್ಗೆ 7ರ ತನಕ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು. ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಬೇಕು. ಸಾಮಾಜಿಕ ಅಂತರ ಕಾಪಾಡಲು, ಕೊರೊನಾ ಹರಡದಂತೆ ತಡೆಯಲಿ ಕರ್ಫ್ಯೂ ಜಾರಿಗೆ ತರುವುದು ಅನಿವಾರ್ಯವಾಗಿದೆ. ರಾತ್ರಿಯ ವೇಳೆ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಕ್ರಮ ಕೈಗೊಳ್ಳಬೇಕು.

ನಿಯಮಗಳನ್ನು ಪಾಲಿಸಿ

ನಿಯಮಗಳನ್ನು ಪಾಲಿಸಿ

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ, ಸಾರಿಗೆ ಸಂಚಾರ ಮುಂತಾದ ಸಂದರ್ಭದಲ್ಲಿ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲಾ ಆಡಳಿತಗಳು ಈ ಕುರಿತು ಗಮನ ಹರಿಸಬೇಕು. ಕೋವಿಡ್ - 19 ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

English summary
In a letter to state and union territories ministry of home affairs said that some state and UTs violating of MHA guidelines. Directed to take necessary steps to strictly implement of guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X