ಪಾಕ್ ನಿಂದ ವಲಸೆ ಬಂದಿದ್ದ ಹಿಂದೂಗಳಿಗೆ ಭಾರತದ ಪೌರತ್ವ
ಸುಮಾರು 16 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಗುಜರಾತ್ ಗೆ ವಲಸೆ ಬಂದಿದ್ದ 114 ಹಿಂದೂಗಳಿಗೆ ಭಾರತದ ಪೌರತ್ವ. ಪಾಕಿಸ್ತಾನದಲ್ಲಿ ಮಿತಿ ಮೀರಿದ ಭಯೋತ್ಪಾದನೆಗೆ ಹೆದರಿ ಭಾರತಕ್ಕೆ ವಲಸೆ ಬಂದಿದ್ದ ಹಿಂದೂ ಕುಟುಂಬಗಳು.
ಗಾಂಧೀನಗರ, ಜುಲೈ 21: ಹದಿನಾರು ವರ್ಷಗಳ ಹಿಂದೆ ಪಾಕಿಸ್ತಾನದಿಂದ ಗುಜರಾತ್ ಗೆ ವಲಸೆ ಬಂದಿದ್ದ 114 ಹಿಂದೂಗಳಿಗೆ ಭಾರತ ಸರ್ಕಾರ ಈಗ ಇಲ್ಲಿನ ಪೌರತ್ವ ನೀಡಿದೆ.
ಈ ಬಗ್ಗೆ ಆ ಕುಟುಂಬಗಳು ಹರ್ಷ ವ್ಯಕ್ತಪಡಿಸಿದ್ದು, ಭಾರತ ಸರ್ಕಾರವು ತಮ್ಮನ್ನು ದೇಶದ ಪ್ರಜೆಗಳನ್ನಾಗಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಈ ಕುಟುಂಬದ ಕೆಲವರು ತಮ್ಮ ಹರ್ಷ ಹಂಚಿಕೊಂಡಿದ್ದಾರೆ. ಭಾರತದ ಪೌರತ್ವದ ಬಗ್ಗೆ ಹೆಮ್ಮೆ ಹಾಗೂ ಖುಷಿ ವ್ಯಕ್ತಪಡಿಸಿದ ನಂದಲಾಲ್ ಮೆಘಾನಿ ಅವರು, ''ಅಲ್ಲಿ (ಪಾಕಿಸ್ತಾನ) ಭಯೋತ್ಪಾದನೆ ದಿನೇ ದಿನೇ ಹೆಚ್ಚುತ್ತಿದ್ದ ಕಾರಣಕ್ಕೆ ಹಾಗೂ ಹಿಂದೂಗಳ ಮೇಲೆ ಅಲ್ಲಿನ ಸ್ಥಳೀಯ ಆಡಳಿತಗಳು ಭಾರೀ ದಬ್ಬಾಳಿಕೆ ನಡೆಸುತ್ತಿರುವುದನ್ನು ನೋಡಿ ಬೇಸತ್ತಿದ್ದ ನಾವು ಆ ದೇಶ ತೊರೆಯಲು ನಿರ್ಧರಿಸಿದ್ದೆವು. ಆಗ, ಅಲ್ಲಿದ್ದ ನಮ್ಮ ಮುಸ್ಲಿಂ ಸ್ನೇಹಿತರೂ ಕೂಡ ಪಾಕಿಸ್ತಾನ ತೊರೆದು ಭಾರತದಲ್ಲಿ ಆಶ್ರಯ ಪಡೆಯುವಂತೆ ಸಲಹೆ ನೀಡುತ್ತಿದ್ದರು. ಹಾಗಾಗಿ, ನಾವು 16 ವರ್ಷಗಳ ಹಿಂದೆ ಇಲ್ಲಿಗೆ ಬಂದು ನೆಲೆಸಿದ್ದೆ'' ಎಂದು ತಮ್ಮ ಕಥೆ ಹೇಳಿಕೊಂಡಿದ್ದಾರೆ.
ಪಾಕಿಸ್ತಾನದಲ್ಲಿ ಆಟೋಮೊಬೈಲ್ ಬಿಡಿಭಾಗಗಳ ವ್ಯಾಪಾರ ನಡೆಸುತ್ತಿದ್ದ ತಾವು ಭಾರತದಲ್ಲಿ ಇದೀಗ ಇಂಟೀರಿಯರ್ ಡೆಕೋರೇಷನ್ ಸಂಸ್ಥೆಯೊಂದನ್ನು ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಪ್ರಕಟಿಸಿರುವ ಸರ್ಕಾರಿ ಮೂಲಗಳು, 1951ರ ನಾಗರಿಕ ಕಾಯ್ದೆ ಅನ್ವಯ ವಲಸಿಗರಿಗೆ ಪೌರತ್ವ ನೀಡಲಾಗಿದೆ. ಅವರು ಸಲ್ಲಿಸಿದ್ದ ಎಲ್ಲಾ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪೌರತ್ವ ನೀಡಲಾಗಿದೆ ಎಂದು ಹೇಳಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications